AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಮೇಥಿ ಹಿಂಪಡೆಯಲು ಕೈ ಕಸರತ್ತು; ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಕಣಕ್ಕಿಳಿಯುವ ಸಾಧ್ಯತೆ

Robert Wadra at Amethi: 2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ಸ್ಮೃತಿ ಇರಾನಿ ಎದುರು ರಾಹುಲ್ ಗಾಂಧಿ ಸೋತಿದ್ದರು. ಈಗ ಆ ಕ್ಷೇತ್ರದಲ್ಲಿ ತಾನು ಸ್ಪರ್ಧಿಸಲು ಇಷ್ಟಪಡುವುದಾಗಿ ರಾಬರ್ಟ್ ವಾದ್ರಾ ಹೇಳಿದ್ದಾರೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಿದ್ದ ಅವರು ತಾನು ರಾಜಕೀಯಕ್ಕೆ ಬರುವುದೇ ಆದರೆ ಅಮೇಥಿ ಕ್ಷೇತ್ರವನ್ನೇ ಆಯ್ಕೆ ಮಾಡಿಕೊಳ್ಳುತ್ತೇನೆ. ಅಮೇಥಿ ಜನರಿಗೂ ಕೂಡ ಗಾಂಧಿ ಪರಿವಾರದವರು ಬೇಕೆನಿಸುತ್ತಿದೆ ಎಂದು ಪ್ರಿಯಾಂಕಾ ಗಾಂಧಿ ಪತಿಯಾದ ವಾದ್ರಾ ತಿಳಿಸಿದ್ದಾರೆ.

ಅಮೇಥಿ ಹಿಂಪಡೆಯಲು ಕೈ ಕಸರತ್ತು; ಸೋನಿಯಾ ಅಳಿಯ ರಾಬರ್ಟ್ ವಾದ್ರಾ ಕಣಕ್ಕಿಳಿಯುವ ಸಾಧ್ಯತೆ
ಪ್ರಿಯಾಂಕಾ ಗಾಂಧಿ, ರಾಬರ್ಟ್ ವಾದ್ರಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 04, 2024 | 6:09 PM

ನವದೆಹಲಿ, ಏಪ್ರಿಲ್ 4: ಕಳೆದ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರವನ್ನು (Amethi constituency) ಕಳೆದುಕೊಂಡಿದ್ದ ಕಾಂಗ್ರೆಸ್ ಪಕ್ಷ ಈಗ ಮರಳಿ ಪಡೆಯಲು ಪಣತೊಟ್ಟಿದಂತಿದೆ. ವರದಿಗಳ ಪ್ರಕಾರ ರಾಬರ್ಟ್ ವಾದ್ರಾ ಅವರು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ. ಇದಕ್ಕೆ ಇಂಬುಕೊಡುವಂತೆ ಸ್ವತಃ ರಾಬರ್ಟ್ ವಾದ್ರಾ (Robert Vadra) ಅವರೇ ತಾನು ಅಮೇಥಿಯಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ. ‘ಅಮೇಥಿ ಜನರಿಗೆ ಗಾಂಧಿ ಪರಿವಾರದವರು ಬೇಕಾಗಿತದ್ದಾರೆ. ನಾನೇನಾದರೂ ಸ್ಪರ್ಧಿಸಿದರೆ ಅಮೇಥಿ ಕ್ಷೇತ್ರವನ್ನೇ ಆರಿಸಿಕೊಳ್ಳುವೆ. ಅಮೇಥಿ ಜನರಿಗೆ ನಾನು ಸ್ಪರ್ಧಿಸಬೇಕೆಂದಿದೆ,’ ಎಂದು ಎಎನ್​ಐ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ರಾಬರ್ಟ್ ವಾದ್ರಾ ಹೇಳಿರುವುದು ವರದಿಯಾಗಿದೆ. ತಾನು ರಾಜಕೀಯಕ್ಕೆ ಬರುವುದಾದರೆ ಅಮೇಥಿ ಕ್ಷೇತ್ರವೇ ನನ್ನ ಆಯ್ಕೆ ಆಗಿರುತ್ತದೆ ಎನ್ನುವ ಮೂಲಕ ರಾಜಕೀಯಕ್ಕೆ ಬರುವ ಸುಳಿವನ್ನು ಮತ್ತು ಅಮೇಥಿ ಕ್ಷೇತ್ರಕ್ಕೆ ಸ್ಪರ್ಧಿಸುವ ಇರಾದೆ ಎರಡನ್ನೂ ನೀಡಿದ್ದಾರೆ.

ಹಾಲಿ ಅಮೇಥಿ ಸಂಸದೆ ಹಾಗೂ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರೆತ್ತದೆಯೇ ರಾಬರ್ಟ್ ವಾದ್ರಾ ವಾಗ್ದಾಳಿ ನಡೆಸಿದ್ದಾರೆ. ‘…ಈಗಿನ ಸಂಸದರಿಂದ ಅಮೇಥಿ ಜನರು ರೋಸಿ ಹೋಗಿದ್ದಾರೆ. ಆಕೆಯನ್ನು ಆಯ್ಕೆ ಮಾಡಿ ತಪ್ಪು ಮಾಡಿದ್ದೇವೆ ಎಂದು ಜನರಿಗೆ ಅನಿಸತೊಡಗಿದೆ,’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಎಎನ್​ಐ ಮಾಡಿದ ಎಕ್ಸ್ ಪೋಸ್ಟ್

‘ನಾನು ಸಂಸದನಾಗುವುದಾದರೆ ಅಮೇಥಿ ಕ್ಷೇತ್ರವನ್ನು ಪ್ರತಿನಿಧಿಸಲಿ ಎಂದು ಕ್ಷೇತ್ರದ ಜನರು ನಿರೀಕ್ಷಿಸುತ್ತಿದ್ದಾರೆ. ವರ್ಷಗಳಿಂದ ಗಾಂಧಿ ಕುಟುಂಬದವರು ರಾಯ್ ಬರೇಲಿ, ಅಮೇಥಿ, ಸುಲ್ತಾನ್​ಪುರ್​ನಲ್ಲಿ ಪರಿಶ್ರಮ ಹಾಕಿದ್ದಾರೆ,’ ಎಂದೂ ವಾದ್ರಾ ತಿಳಿಸಿದ್ದಾರೆ.

ಇದನ್ನೂ ಓದಿ: ಅಮೇಥಿ ಆಯ್ತು, ವಯನಾಡ್​ನಲ್ಲೂ ವಂಚಿಸ್ತಾರೆ: ರಾಹುಲ್ ಗಾಂಧಿಯನ್ನು ಕುಟುಕಿದ ಸ್ಮೃತಿ ಇರಾನಿ

ಉತ್ತರಪ್ರದೇಶ ರಾಜ್ಯದಲ್ಲಿ ಕಾಂಗ್ರೆಸ್ ಅಸ್ತಿತ್ವ ಬಹುತೇಕ ನಶಿಸಿದರೂ ಅಮೇಥಿ, ರಾಯ್​ಬರೇಲಿ ಕ್ಷೇತ್ರಗಳು ಕಾಂಗ್ರೆಸ್ ಪಾಲಿಗೆ ಭದ್ರಕೋಟೆಯಾಗಿವೆ. ಆದರೆ, 2019ರಲ್ಲಿ ಸ್ಮೃತಿ ಇರಾನಿ ಅಮೇಥಿಯಲ್ಲಿ ಕಾಂಗ್ರೆಸ್ ಕೋಟೆ ಉರುಳಿಸಿ ಬಿಜೆಪಿಗೆ ಗೆಲುವು ತಂದಿದ್ದರು. ಅಪ್ಪಟ ಭದ್ರಕೋಟೆ ಎನಿಸಿದ್ದ ಅಮೇಥಿಯಲ್ಲಿ ರಾಹುಲ್ ಗಾಂಧಿ ಸೋತಿದ್ದರು. 2014ರ ಚುನಾವಣೆಯಲ್ಲೇ ಸ್ಮೃತಿ ಇರಾನಿ ರಾಹುಲ್ ವಿರುದ್ಧ ನಿಕಟ ಪೈಪೋಟಿ ನೀಡಿದ್ದರು. ಈ ಹಿನ್ನೆಲೆಯಲ್ಲಿ 2019ರ ಚುನಾವಣೆಯಲ್ಲಿ ರಾಹುಲ್ ಗಾಂಧಿ ಅಮೇಥಿ ಜೊತೆಗೆ ಕೇರಳದ ವಯನಾಡು ಕ್ಷೇತ್ರದಿಂದಲೂ ಸ್ಪರ್ಧಿಸಿದ್ದರು. ಅಮೇಥಿಯಲ್ಲಿ ಅವರು ಸೋತರೂ ವಯನಾಡಿನ ಜನರು ಕೈ ಹಿಡಿದಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Thu, 4 April 24

ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಅಧಿಕಾರ ಮತ್ತು ಬದುಕು ಎರಡೂ ಶಾಶ್ವತವಲ್ಲ: ತನ್ವೀರ್ ಸೇಟ್, ಕಾಂಗ್ರೆಸ್ ಶಾಸಕ
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಹಾಡಿನ ಮೂಲಕ ಚಿತ್ರರಂಗದ ಕರಾಳ ಮುಖ ಪರಿಚಯಿಸಿದ ದುನಿಯಾ ವಿಜಯ್
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಪತ್ನಿಯಿಂದ ಪತಿಗೆ ಟಾರ್ಚರ್ ಪ್ರಕರಣಗಳು ಇತ್ತೀಚಿಗೆ ಜಾಸ್ತಿಯಾಗುತ್ತಿವೆ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಅಂತಾರಾಷ್ಟ್ರೀಯ ಯೋಗ ದಿನದಲ್ಲಿ ಭಾಗವಹಿಸಲು ಎಲ್ಲ ದೇಶಗಳಿಗೂ ಮೋದಿ ಆಹ್ವಾನ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಲೂಟ್ ಕೆ ಲಾವ್ ಬಾಟ್ ಕೆ ಖಾವ್ ಸರ್ಕಾರದ ದ್ಯೇಯವಾಗಿದೆ: ಪ್ರಲ್ಹಾದ್ ಜೋಶಿ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಕಾವೇರಿ ಆರತಿಯಿಂದ ಕೆಆರ್​ಎಸ್ ಜಲಾಶಯಕ್ಕೆ ಅಪಾಯವಿಲ್ಲ: ಗಣಿಗ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ
ಫೆಬ್ರುವರಿ ಮತ್ತು ಮಾರ್ಚ್ ಗೃಹಲಕ್ಷ್ಮಿ ಹಣ ಬಿಡುಗಡೆ ಆಗಿಲ್ಲ: ಸಚಿವೆ