AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ

ಸಮಾಜವಾದಿ ಪಕ್ಷದ ಬೆಂಬಲಿಗರು ಮತ್ತು ಉತ್ತರ ಪ್ರದೇಶ ಪೊಲೀಸರ ನಡುವೆ ಇಂದು ಚುನಾವಣಾ ಪ್ರಚಾರದ ವೇಳೆ ಮಾತಿನ ಚಕಮಕಿ ನಡೆದಿದ್ದು, ಕಾಲ್ತುಳಿತದಂತಹ ಪರಿಸ್ಥಿತಿ ಉಂಟಾಯಿತು. ಕಾಲ್ತುಳಿತ ಸಂಭವಿಸಿದಾಗ ಎಸ್‌ಪಿ ಮುಖ್ಯಸ್ಥ ಅಖಿಲೇಶ್ ಯಾದವ್ ಮತ್ತು ಅವರ ಪತ್ನಿ ಡಿಂಪಲ್ ಯಾದವ್ ವೇದಿಕೆಯಲ್ಲಿದ್ದರು.

Lok Sabha Polls: ಜನ 140 ಸೀಟುಗಳಿಗೂ ಬಿಜೆಪಿ ಪರದಾಡುವಂತೆ ಮಾಡುತ್ತಾರೆ; ಅಖಿಲೇಶ್ ಯಾದವ್ ವಿಶ್ವಾಸ
ಅಖಿಲೇಶ್ ಯಾದವ್
Follow us
ಸುಷ್ಮಾ ಚಕ್ರೆ
|

Updated on: May 21, 2024 | 8:40 PM

ಲೋಕಸಭೆ ಚುನಾವಣೆ 2024: ಇದೀಗ ನಡೆಯುತ್ತಿರುವ ಲೋಕಸಭೆ ಚುನಾವಣೆಯಲ್ಲಿ (Lok Sabha Elections) ಜನರು ಬಿಜೆಪಿ 140 ಸ್ಥಾನಗಳನ್ನು ಪಡೆಯಲು ಪರದಾಡುವಂತೆ ಮಾಡುತ್ತಾರೆ ಎಂದು ಸಮಾಜವಾದಿ ಪಕ್ಷದ (ಎಸ್‌ಪಿ) ವರಿಷ್ಠ ಮತ್ತು ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ (Akhilesh Yadav) ಹೇಳಿದ್ದಾರೆ. ಉತ್ತರ ಪ್ರದೇಶದ ಅಜಂಗಢದಲ್ಲಿ ಚುನಾವಣಾ ರ್ಯಾಲಿ ಬಳಿಕ ಮಾಜಿ ಸಿಎಂ ಅಖಿಲೇಶ್ ಯಾದವ್ ಈ ಹೇಳಿಕೆ ನೀಡಿದ್ದಾರೆ. ಚುನಾವಣಾ ರ್ಯಾಲಿ ವೇಳೆ ಕಾಲ್ತುಳಿತವಾದ ಕಾರಣ ಇಂದು ನಡೆದ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷದ ಲೋಕಸಭೆ ಚುನಾವಣೆಯ ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರ ಮೇಲೆ ಉತ್ತರ ಪ್ರದೇಶ ಪೊಲೀಸರು (Uttar Pradesh Police) ಲಾಠಿ ಚಾರ್ಜ್ ಮಾಡಿದ್ದಾರೆ.

”ಪೂರ್ವಾಂಚಲ ಚುನಾವಣೆ ನಡೆಯುವಾಗ ಬಿಜೆಪಿ ವಿರುದ್ಧ ಆರಂಭವಾದ ಮತದಾನ ಕೊನೆಯವರೆಗೂ ನಡೆಯಲಿದ್ದು, ಏಳನೇ ಹಂತ ಮುಗಿಯುವ ವೇಳೆಗೆ ಬಿಜೆಪಿ ಸರ್ವನಾಶವಾಗಲಿದೆ. ಸಾರ್ವಜನಿಕರು ಬಿಜೆಪಿಯನ್ನು 140 ಸ್ಥಾನಗಳಿಗೆ ಪರದಾಡುವಂತೆ ಮಾಡುತ್ತಾರೆ.’’ ಎಂದು ಅಖಿಲೇಶ್ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: Elections 2024: ಚುನಾವಣೆಯಲ್ಲಿ ಇಂಡಿಯಾ ಬಣ ಗೆದ್ದರೆ ಪ್ರಧಾನಿ ಹೆಸರನ್ನು ನಿರ್ಧರಿಸುತ್ತೇವೆ; ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟನೆ

ಇದೀಗ ನಡೆಯುತ್ತಿರುವ ಚುನಾವಣೆಗಳು ಮತ್ತು ಬಿಜೆಪಿಯ ‘400-ಪಾರ್’ ಘೋಷಣೆ ಕುರಿತು ಮಾತನಾಡಿದ ಬಿಹಾರದ ಮಾಜಿ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, “ಇಂಡಿಯಾ ಮೈತ್ರಿಕೂಟವು 300 ಸೀಟುಗಳು ದಾಟಿದೆ. ಇಂಡಿಯಾ ಒಕ್ಕೂಟದ ಸರ್ಕಾರ ಖಂಡಿತ ರಚನೆಯಾಗುತ್ತದೆ ಎಂದು ತಿಳಿದಿರುವ ಕಾರಣ ಪ್ರಧಾನಿ ಮೋದಿಗೆ ಹೇಳಲು ಏನೂ ಉಳಿದಿಲ್ಲ. ಎನ್​ಡಿಎ ಸರ್ಕಾರವು 400 ಪಡೆಯುವುದಿರಲಿ ಅವರಿಗೆ 240 ಸ್ಥಾನ ಪಡೆಯುವುದು ಕೂಡ ಕಷ್ಟವಾಗಲಿದೆ ಎಂದಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ಅಕ್ರಮ ಕಟ್ಟಡಗಳ ವಿರುದ್ಧ ಬಿಬಿಎಂಪಿ ಸಮರ: ಹಲವೆಡೆ ಕಟ್ಟಡಗಳ ತೆರವು
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ವೆಸ್ಟ್​ ವ್ಯಾಲಿ ಸಿಟಿಯಲ್ಲಿ ನಡೆಯುತ್ತಿದ್ದ ಕಾರ್ಯಕ್ರಮದಲ್ಲಿ ಗುಂಡಿನ ದಾಳಿ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಈ ಸಲ ಮೊದಲ ಬಾರಿಗೆ ಜನಗಣತಿಯ ಜಾತಿಗಣತಿ: ಗೃಹ ಸಚಿವಾಲಯ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
ಮೈಸೂರಿಗೆ 5 ರೂ. ಕೆಲಸ ಮಾಡಿಲ್ಲ ಸಿದ್ದರಾಮಯ್ಯ: ಪ್ರತಾಪ್ ಸಿಂಹ ವಾಗ್ದಾಳಿ
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
‘ಹುಡುಗಿ ಇದ್ದಾಗ ಒಂತರ, ಇಲ್ಲದಿದ್ದಾಗ ಒಂತರ’; ರಕ್ಷಕ್ ಬಗ್ಗೆ ರಮೋಲಾ ಮಾತು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಎಂಭತ್ತು ಶವಗಳ ಗುರುತು ಪತ್ತೆ, 4-ದಿನದಿಂದ ಕಾಯುತ್ತಿರುವ ಸಂಬಂಧಿಕರು
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಲಕ್ನೋ: ಸೌದಿ ಏರ್​ಲೈನ್ಸ್​ ವಿಮಾನದ ಚಕ್ರದಲ್ಲಿ ಕಾಣಿಸಿಕೊಂಡ ಬೆಂಕಿ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಸ್ಫೋಟಕ ಬ್ಯಾಟಿಂಗ್​... ಮತ್ತೊಂದು ಟಿ20 ಟ್ರೋಫಿ ಗೆದ್ದ ಜಿತೇಶ್ ಶರ್ಮಾ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಭಾರೀ ಮಳೆ, ಭೋರ್ಗರೆಯುತ್ತಿರುವ ಭದ್ರೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ
ಮಳೆ ಅಬ್ಬರ, ಈ ನಾಲ್ಕು ಜಿಲ್ಲೆಗಳಲ್ಲಿಂದು ಶಾಲೆ-ಕಾಲೇಜುಗಳಿಗೆ ರಜೆ