AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೂವರು ಬಿಜೆಪಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಟಿಎಂಸಿ

ಈಗಾಗಲೇ ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಮೂಲಗಳ ಪ್ರಕಾರ, ಬಿಜೆಪಿಯ ಮೂವರು ಸಂಸದರು ತಮ್ಮೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಹೇಳಿಕೊಂಡಿದೆ. ಆದರೆ, ಬಿಜೆಪಿ ಅದನ್ನು "ಸುಳ್ಳು ಸುದ್ದಿ" ಎಂದು ಹೇಳಿದೆ.

ಮೂವರು ಬಿಜೆಪಿ ಸಂಸದರು ನಮ್ಮ ಸಂಪರ್ಕದಲ್ಲಿದ್ದಾರೆ ಎಂದ ಟಿಎಂಸಿ
ಮಮತಾ ಬ್ಯಾನರ್ಜಿ
ಸುಷ್ಮಾ ಚಕ್ರೆ
|

Updated on: Jun 06, 2024 | 4:25 PM

Share

ಕೊಲ್ಕತ್ತಾ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬಿಜೆಪಿಯ ಮೂವರು ಸಂಸದರು ನಮ್ಮ ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ಹೇಳಿಕೊಂಡಿದೆ. ಈಗಾಗಲೇ ಲೋಕಸಭಾ ಚುನಾವಣೆ ಫಲಿತಾಂಶ (Lok Sabha Elections Result) ಪ್ರಕಟವಾಗಿದ್ದು, ಬಿಜೆಪಿ ನೇತೃತ್ವದ ಎನ್​ಡಿಎ ಕೇಂದ್ರದಲ್ಲಿ ಸರ್ಕಾರ ರಚಿಸುವುದು ಖಚಿತವಾಗಿದೆ. ನರೇಂದ್ರ ಮೋದಿ (Narendra Modi) ಶನಿವಾರ 3ನೇ ಅವಧಿಗೆ ಪ್ರಧಾನ ಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೂಲಗಳ ಪ್ರಕಾರ, ಪಶ್ಚಿಮ ಬಂಗಾಳದ ಮೂವರು ಬಿಜೆಪಿ ಸಂಸದರು ಪಕ್ಷದ ಸಂಪರ್ಕದಲ್ಲಿದ್ದಾರೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿಕೊಂಡಿದೆ. ಮಮತಾ ಬ್ಯಾನರ್ಜಿ ನೇತೃತ್ವದ ಆಡಳಿತ ಪಕ್ಷವು ಎಕ್ಸಿಟ್ ಪೋಲ್ ಮುನ್ನೋಟಗಳನ್ನು ಧಿಕ್ಕರಿಸಿ, ಬಂಗಾಳದಲ್ಲಿ ತನ್ನ ಹಿಡಿತವನ್ನು ಉಳಿಸಿಕೊಂಡ 2 ದಿನಗಳ ನಂತರ ಈ ಬೆಳವಣಿಗೆ ಸಂಭವಿಸಿದೆ.

ಇದನ್ನೂ ಓದಿ: ಅಯೋಧ್ಯೆಯ ಜನರಿಗೆ ಅನ್ಯಾಯ ಮಾಡಿದ್ದೇ ಬಿಜೆಪಿ ಸೋಲಿಗೆ ಕಾರಣ: ಅಖಿಲೇಶ್ ಯಾದವ್

ಬಿಜೆಪಿಯು ತೃಣಮೂಲ ಕಾಂಗ್ರೆಸ್​ನ ಹೇಳಿಕೆಗಳನ್ನು ತಳ್ಳಿಹಾಕಿದೆ. ಈ ಹೇಳಿಕೆ ಸುಳ್ಳು ಎಂದು ಹೇಳಿದೆ. ಲೋಕಸಭೆ ಚುನಾವಣೆಯ ಎಲ್ಲಾ 7 ಹಂತಗಳಲ್ಲಿ ಚುನಾವಣೆ ಎದುರಿಸಿದ ಪಶ್ಚಿಮ ಬಂಗಾಳವು ಬಿಜೆಪಿಯತ್ತ ಒಲವು ತೋರುವ ನಿರೀಕ್ಷೆ ಇತ್ತು. ತಮ್ಮ ಹೆಚ್ಚಿನ ರ್ಯಾಲಿಗಳಲ್ಲಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಎಲ್ಲಾ 42 ಲೋಕಸಭಾ ಸ್ಥಾನಗಳನ್ನು ಪಡೆಯುತ್ತದೆ ಎಂದು ಭವಿಷ್ಯ ನುಡಿದಿದ್ದರು. ಆದರೆ, ತೃಣಮೂಲ ಕಾಂಗ್ರೆಸ್ ಎಕ್ಸಿಟ್ ಪೋಲ್ ಮುನ್ಸೂಚನೆಯನ್ನು ಉಲ್ಟಾಪಲ್ಟಾ ಮಾಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!