AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dharmendran Pradhan: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದ ದೇವಗಡ್​ನಲ್ಲಿ ಭರ್ಜರಿ ರೋಡ್​ಶೋ

Union Minister Dharmendra Pradhan Road Show: ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಒಡಿಶಾದ ದೇವಗಡ್​ನಲ್ಲಿ ಭಾನುವಾರ ಚುನಾವಣಾ ಪ್ರಚಾರ ಮಾಡಿದರು. ಪ್ರಧಾನ್ ಬಿಜೆಪಿ ಅಭ್ಯರ್ಥಿಯಾಗಿರುವ ಸಂಬಲಪುರ ಕ್ಷೇತ್ರದ ವ್ಯಾಪ್ತಿಗೆ ದೇವಗಡ್ ಬರುತ್ತದೆ. ಎಪ್ರಿಲ್ 5ರಿಂದಲೂ ಧರ್ಮೇಂದ್ರ ಪ್ರಧಾನ್ ಈ ಕ್ಷೇತ್ರದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಕಳೆದ 10 ವರ್ಷದಲ್ಲಿ ದೇಶದಲ್ಲಿ ಮತ್ತು ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ವಿಚಾರಗಳ ಬಗ್ಗೆ ಧರ್ಮೇಂದ್ರ ಪ್ರಧಾನ್ ಮಾತನಾಡುತ್ತಿದ್ದಾರೆ.

Dharmendran Pradhan: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಒಡಿಶಾದ ದೇವಗಡ್​ನಲ್ಲಿ ಭರ್ಜರಿ ರೋಡ್​ಶೋ
ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Apr 07, 2024 | 7:06 PM

Share

ಭುವನೇಶ್ವರ್, ಏಪ್ರಿಲ್ 7: ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ (Dharmendra Pradhan) ಅವರು ಒಡಿಶಾದ ದೇವಗಡ್ ಪಟ್ಟಣದಲ್ಲಿ ರೋಡ್​ಶೋ ನಡೆಸಿದರು. ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಬೈಕ್ ರ‍್ಯಾಲಿ ನಡೆಸಿದರು. ಧರ್ಮೇಂದ್ರ ಪ್ರಧಾನ್ ಅವರು ಸಂಬಲಪುರ್ ಲೋಕಸಭಾ ಕ್ಷೇತ್ರದಲ್ಲಿ (Sambalpur Constituency) ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ದೇವಗಡ್ ಇವರ ಕ್ಷೇತ್ರದಲ್ಲಿದೆ. ಕಳೆದ ಮೂರು ದಿನಗಳಿಂದ ಪ್ರಧಾನ್ ಅವರು ತಮ್ಮ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದಲ್ಲಿ ನಿರತರಾಗಿದ್ದಾರೆ.

ಏಪ್ರಿಲ್ 5, ಶುಕ್ರವಾರದಂದು ಧರ್ಮೇಂದ್ರ ಪ್ರಧಾನ್ ಅವರು ಒಡಿಶಾದ ಅಂಗುಲ್ ಜಿಲ್ಲೆಯ ಛೇಂದಿಪಾದ ಬ್ಲಾಕ್​ನ ಬ್ರಾಹ್ಮಣಿಬಿಲ್ ಗ್ರಾಮದಿಂದ ಚುನಾವಣಾ ಪ್ರಚಾರ ಆರಂಭಿಸಿದ್ದರು. ಮಾತೆ ಡಾಕೇಶ್ವರಿ ಮಂದಿರಕ್ಕೆ ಭೇಟಿ ಕೊಟ್ಟು ಪೂಜೆ ಸಲ್ಲಿಸಿ ಬಳಿಕ ಸಾರ್ವಜನಿಕ ಸಮಾವೇಶವನ್ನು ಉದ್ದೇಶಿಸಿ ಭಾಷಣ ಮಾಡಿದ್ದರು.

ಇದನ್ನೂ ಓದಿ: ತಿರುಚ್ಚಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರೋಡ್​ ಶೋಗಿಲ್ಲ ಅನುಮತಿ, ಪೊಲೀಸ್​ ಆಯುಕ್ತರ ಭೇಟಿ

ನಿನ್ನೆ ಶನಿವಾರದಂದು ಸಂಬಲಪುರ ಬಿಜೆಪಿ ಕಚೇರಿಯಲ್ಲಿ ಪಕ್ಷದ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡುತ್ತಾ ಬಿಜೆಪಿ ಕಾರ್ಯಕರ್ತರನ್ನುದ್ದೇಶಿಸಿ ಭಾಷಣ ಮಾಡಿದ್ದರು. ಕಳೆದ 10 ವರ್ಷದಲ್ಲಿ ದೇಶದಲ್ಲಿ ಹಾಗೂ ಸಂಬಲಪುರ ಲೋಕಸಭಾ ಕ್ಷೇತ್ರದಲ್ಲಿ ಆಗಿರುವ ಸಕಾರಾತ್ಮಕ ಬದಲಾವಣೆ ಮತ್ತು ಅಭಿವೃದ್ಧಿ ಬಗ್ಗೆ ತಿಳಿಸಿದರು.

ಪ್ರಧಾನ್ ರೋಡ್​ಶೋ ವಿಡಿಯೋ

ಸಂಬಲಪುರ ರೈಲ್ವೆ ನಿಲ್ದಾಣವನ್ನು ಮೇಲ್ದರ್ಜೆಗೆ ಏರಿಸುತ್ತಿರುವುದು, ಜಿಲ್ಲೆಯಲ್ಲಿ ಐಐಎಂ ತಂದಿರುವುದು, ಪಿಎಂ ಆವಾಸ್ ಯೋಜನೆಯಲ್ಲಿ ಜಿಲ್ಲೆಯ ಸಾಕಷ್ಟು ಬಡವರಿಗೆ ಮನೆಗಳು ಸಿಕ್ಕಿರುವುದು, ಸ್ವಚ್ಛ ಭಾರತ ಅಭಿಯಾನ ಯಶಸ್ವಿಯಾಗಿರುವುದು, ಉಜ್ವಲ ಯೋಜನೆಯಲ್ಲಿ ಮಹಿಳೆಯರಿಗೆ ಅಡುಗೆ ಅನಿಲದ ಭಾಗ್ಯ ಸಿಕ್ಕಿರುವುದು ಹೀಗೆ ಹಲವು ಅಭಿವೃದ್ಧಿ ಸಾಧನೆಗಳ ಬಗ್ಗೆ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮಾತನಾಡಿದರು. ಈ ಬಾರಿಯೂ ಸಂಬಲಪುರದಲ್ಲಿ ಬಿಜೆಪಿ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂ ಓದಿ: ಇಂಡಿಯಾ ಮೈತ್ರಿಕೂಟವು ಭ್ರಷ್ಟ ಹಾಗೂ ರಾಷ್ಟ್ರ ವಿರೋಧಿ ಶಕ್ತಿಗಳ ಅಡಗುತಾಣವಾಗಿದೆ: ನರೇಂದ್ರ ಮೋದಿ

ಕೇಂದ್ರ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವರಾಗಿರುವ ಧರ್ಮೇಂದ್ರ ಪ್ರಧಾನ್ ಮಧ್ಯಪ್ರದೇಶದಿಂದ ರಾಜ್ಯಸಭಾ ಸದಸ್ಯರಾಗಿದ್ದಾರೆ. 2004ರಲ್ಲಿ ಅವರು ದೇವಗಡ್ ಲೋಕಸಭಾ ಕ್ಷೇತ್ರದಿಂದ ಗೆದ್ದು ಸಂಸದರಾಗಿ ಆಯ್ಕೆ ಆಗಿದ್ದರು. 2014ರ ಚುನಾವಣೆಯಲ್ಲಿ ಸಂಬಲಪುರ್ ಕ್ಷೇತ್ರವು ಬಿಜು ಜನತಾ ದಳದ ಪಾಲಾಗಿತ್ತು. 2019ರಲ್ಲಿ ಬಿಜೆಪಿಯ ನಿತೇಶ್ ಗಂಗಾ ದೇಬ್ ಈ ಕ್ಷೇತ್ರವನ್ನು ಜಯಿಸಿದ್ದರು. ಈ ಬಾರಿ ಧರ್ಮೇಂದ್ರ ಪ್ರಧಾನ್ ಅವರಿಗೆ ಸಂಬಲಪುರ್ ಕ್ಷೇತ್ರದ ಟಿಕೆಟ್ ಸಿಕ್ಕಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Sun, 7 April 24

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ