AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಶ್ವೇಶ್ವರ ಹೆಗಡೆ ಕಾಗೇರಿ ಸಾಲ ಇಲ್ಲ, ಬದಲಿಗೆ ದೀನದಯಾಳ ಟ್ರಸ್ಟ್​ಗೆ ಸಾಲ ಕೊಟ್ಟಿದ್ದಾರೆ

ಹಾಲಿ ಸಂಸದ ಅನಂತಕುಮಾರ್ ಹೆಗಡೆ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದ್ದು, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಂದು ನಾಮಪತ್ರ ಸಲ್ಲಿಸಿದ್ದಾರೆ. ಹಾಗಾದ್ರೆ, ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಆಸ್ತಿ ಎಷ್ಟಿದೆ? ಎನ್ನುವ ಮಾಹಿತಿ ಇಲ್ಲಿದೆ.

ವಿಶ್ವೇಶ್ವರ ಹೆಗಡೆ ಕಾಗೇರಿ ಸಾಲ ಇಲ್ಲ, ಬದಲಿಗೆ ದೀನದಯಾಳ ಟ್ರಸ್ಟ್​ಗೆ ಸಾಲ ಕೊಟ್ಟಿದ್ದಾರೆ
TV9 Web
| Updated By: ವಿವೇಕ ಬಿರಾದಾರ|

Updated on:Apr 13, 2024 | 8:26 AM

Share

ಕಾರವಾರ, (ಏಪ್ರಿಲ್ 12): ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ(Uttara kannada BJP candidate) ವಿಶ್ವೇಶ್ವರ ಹೆಗಡೆ ಕಾಗೇರಿ (Vishweshwar hegde kageri) ಅವರು ಇಂದು (ಏಪ್ರಿಲ್ 12) ನಾಮಪತ್ರ ಸಲ್ಲಿಸಿದರು. ತಮ್ಮ ಬೆಂಬಲರೊಂದಿಗೆ ಮೆರವಣಿಗೆ ಮೂಲಕ ತೆರಳಿ ಕಾರವಾರದಲ್ಲಿ ಚುನಾವಣಾಧಿಕಾರಿಗೆ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ಇನ್ನು ತಮ್ಮ ಹೆಸರಿನಲ್ಲಿ ಒಟ್ಟು 16.76 ಕೋಟಿ ರೂ. ಮೌಲ್ಯದ ಆಸ್ತಿ ಇದೆ ಎಂದು ಅಫಿಡೆವಿಟ್​ನಲ್ಲಿ ಘೋಷಿಸಿದ್ದಾರೆ. ವಿಶೇಷ ಅಂದ್ರೆ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಯಾವುದೇ ಸಾಲ ಮಾಡಿಕೊಂಡಿಲ್ಲ. ಬದಲಿಗೆ ಸಂಘ ಪರಿವಾರದ ದೀನದಯಾಳ ಟ್ರಸ್ಟ್​ಗೆ 24.50 ಲಕ್ಷ ರೂ. ಕೈ ಸಾಲ ಕೊಟ್ಟಿದ್ದಾರೆ.

ವಿಶ್ವೇಶ್ವರ ಹೆಗ್ಡೆ ಕಾಗೇರಿ ಅವರು ನಾಮಪತ್ರ ಸಲ್ಲಿಕೆ ವೇಳೆ ಒಟ್ಟು 16.76 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿದ್ದಾರೆ. ವಾರ್ಷಿಕ ಆದಾಯ ವೈಯಕ್ತಿಕ- 36,31,300 ರೂಪಾಯಿ, ಅವಿಭಕ್ತ ಕುಟುಂಬದ ಆದಾಯ 45,18,753 ರೂ, ಮೊದಲ ಪುತ್ರಿ ಜಯಲಕ್ಷ್ಮೀ ಆದಾಯ 5,51,540 ರೂ, ಕೈಯಲ್ಲಿ 5 ಲಕ್ಷ ರೂ, ಹಣ, ಅವಿಭಕ್ತ ಕುಟುಂಬದ ಬಳಿ 1 ಲಕ್ಷ ರೂ, ವಿವಿಧ ಬ್ಯಾಂಕುಗಳಲ್ಲಿರುವ ಒಟ್ಟು ಎಫ್‌ಡಿ- 1,11,48,727 ರೂ,.  ಪತ್ನಿ ಭಾರತಿ ಬಳಿ 4,72,053 ರೂ, ಅವಿಭಕ್ತ ಕುಟುಂಬಕ್ಕೆ ಸೇರಿದ್ದು 1,08,69,516 ರೂ, ಎರಡನೇ ಪುತ್ರಿ ರಾಜಲಕ್ಷ್ಮೀ- 8,53,776 ರೂ. ಇದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಶ್ರೀರಾಮುಲು ಬಳಿ ಕೋಟ್ಯಾಂತರ ರೂ. ಆಸ್ತಿ, ಸಾಲ ಇಲ್ಲ: ಕಾರು ಜತೆ ಬಸ್ಸು​ ಸಹ ಇದೆ

ಪತ್ನಿ ಭಾರತಿ ಹೆಗಡೆ ಅವರಿಗಿಂತ ವಿಶ್ವೇಶ್ವರ ಹೆಗಡೆ ಕಾಗೇರಿ ಅವರೇ ಹೆಚ್ಚಿನ ಚಿನ್ನ, ಬೆಳ್ಳಿ ಹೊಂದಿದ್ದಾರೆ. ಪತ್ನಿ ಬಳಿ 1.100 ಕೆ.ಜಿ. ಚಿನ್ನ ಇದ್ದರೆ, ಕಾಗೇರಿ ಬಳಿ 1.250 ಕೆ.ಜಿ. ಚಿನ್ನ, 3.500 ಕೆ.ಜಿ. ಬೆಳ್ಳಿ ಇದೆ. ಇನ್ನು ಕಾಗೇರಿ ಅವರು ತಮ್ಮ ಪತ್ನಿ, ಮಕ್ಕಳ ಹೆಸರಿನಲ್ಲಿ ಯಾವುದೇ ಜಮೀನು ಇಲ್ಲ ಎಂದು ಉಲ್ಲೇಖಿಸಿದ್ದಾರೆ.

ಉಳಿತಾಯ ಖಾತೆಯಲ್ಲಿ 3,04,81,874 ರೂ., ಪತ್ನಿ ಖಾತೆಯಲ್ಲಿ 8,07,552ರೂ, ಅವಿಭಕ್ತ ಕುಟುಂಬದ್ದು 2,15,34,528 ರೂ, ಅವಿಭಕ್ತ ಕುಟುಂಬದ ಚಾಲ್ತಿ ಖಾತೆಯಲ್ಲಿ 23,50,458 ರೂ ಇರುವುದಾಗಿ ತಿಳಿಸಿದ್ದಾರೆ. ವಿವಿಧ ಬಾಂಡ್‌ಗಳಲ್ಲಿನ ಹೂಡಿಕೆ 5 ಲಕ್ಷ ರೂ, ಪೋಸ್ಟ್ ಹೂಡಿಕೆ- 27,400 ರೂಪಾಯಿ, ಇನ್ಶುರೆನ್ಸ್ ಪಾಲಿಸಿ 21,25,219, ಇನ್ನು ಶಿರಸಿ ದೀನದಯಾಳ್ ಟ್ರಸ್ಟ್​ಗೆ 24,50,000 ರೂ. ಸಾಲ ನೀಡಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:02 am, Sat, 13 April 24

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!