Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!

Maharashtra Lok Sabha Election: ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಸಂಗೋಳದಲ್ಲಿ ಮತದಾರರೊಬ್ಬರು ಇವಿಎಂಗೆ ಬೆಂಕಿ ಹಚ್ಚಿರುವ ಆಘಾತಕಾರಿ ಘಟನೆ ನಡೆದಿದೆ. ಇಂದು ಚುನಾವಣೆ ವೇಳೆ ಇವಿಎಂ ಮಷಿನ್ ತಡವಾಗಿ ಬಂದಿದ್ದಕ್ಕೆ ಕೋಪಗೊಂಡ ಮತದಾರ ಆ ಮತ ಯಂತ್ರಕ್ಕೆ ಬೆಂಕಿ ಹಚ್ಚಿದ್ದಾರೆ.

Viral Video: ಇವಿಎಂ ತಡವಾಗಿ ಬಂದಿದ್ದಕ್ಕೆ ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ!
ಮತಯಂತ್ರಕ್ಕೆ ಬೆಂಕಿ ಹಚ್ಚಿದ ಮತದಾರ
Follow us
ಸುಷ್ಮಾ ಚಕ್ರೆ
|

Updated on: May 07, 2024 | 5:25 PM

ಮುಂಬೈ: ಮಹಾರಾಷ್ಟ್ರದ (Maharashtra) ಸೊಲ್ಲಾಪುರ (Solapur) ಜಿಲ್ಲೆಯ ಸಂಗೋಳ ತಾಲೂಕಿನ ಬಾದಲವಾಡಿಯಲ್ಲಿ ಮತಯಂತ್ರವನ್ನು (EVM) ಮತಗಟ್ಟೆಗೆ ತರುವುದು ತಡವಾಗಿದ್ದರಿಂದ ಕೋಪಗೊಂಡ ಮತದಾರ ಪೆಟ್ರೋಲ್ ತಂದು ಇವಿಎಂಗೆ ಬೆಂಕಿ ಹಚ್ಚಿರುವ ವಿಚಿತ್ರ ಘಟನೆ ನಡೆದಿದೆ. ಚುನಾವಣಾ ಅಧಿಕಾರಿಗಳು ಆ ಯುವಕನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಮಾದ ಲೋಕಸಭಾ ಕ್ಷೇತ್ರದ ಸಂಗೋಳ ತಾಲೂಕಿನ ಬಾಗಲವಾಡಿಯ ಮತಗಟ್ಟೆಯಲ್ಲಿ ಮತದಾರನೊಬ್ಬ ಇವಿಎಂ ಯಂತ್ರಕ್ಕೆ ಬೆಂಕಿ ಹಚ್ಚಲು ಯತ್ನಿಸಿದ್ದಾರೆ. ತಕ್ಷಣ ಪೊಲೀಸರು ಆತನನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ. ಸೊಲ್ಲಾಪುರ ಪೊಲೀಸ್ ವರಿಷ್ಠಾಧಿಕಾರಿ ಶಿರೀಶ ದೇಶಪಾಂಡೆ ಮತಗಟ್ಟೆಗೆ ಭೇಟಿ ನೀಡಿದರು. ಸಂಗೋಳ ಪೊಲೀಸ್ ಠಾಣೆಯಲ್ಲಿ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸುವ ಪ್ರಕ್ರಿಯೆ ಆರಂಭವಾಗಿದೆ.

ಇದನ್ನೂ ಓದಿ: Lok Sabha Elections: ಅಂತಿಮ ಹಂತದ ಲೋಕಸಭಾ ಚುನಾವಣೆ; ಮೇ 14ಕ್ಕೆ ಪ್ರಧಾನಿ ಮೋದಿ ನಾಮಪತ್ರ ಸಲ್ಲಿಕೆ

ಬೆಂಕಿ ಹಚ್ಚಲು ಬಂದಿದ್ದ ಯುವಕ ಮರಾಠರ ಪರವಾಗಿ ಘೋಷಣೆಗಳನ್ನು ಕೂಗುತ್ತಿದ್ದನು. ಅಷ್ಟೇ ಅಲ್ಲ, ಮತಗಟ್ಟೆಯಲ್ಲಿ ಅಳವಡಿಸಿರುವ ಮತಯಂತ್ರವೂ ಬೋಗಸ್ ಎಂದು ಯುವಕ ಆರೋಪಿಸಿದ್ದಾನೆ. ಈ ವೇಳೆ ಯುವಕ ಮತಯಂತ್ರಕ್ಕೆ ಪೆಟ್ರೋಲ್ ಸುರಿದು ಸುಡಲು ಯತ್ನಿಸಿದ್ದಾನೆ. ಆದರೆ, ಅಧಿಕಾರಿಗಳು ಆ ಯುವಕನನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಹೊರಬಿದ್ದಿದೆ. ಲೋಕಸಭೆ ಚುನಾವಣೆಯ ಮೂರನೇ ಹಂತದ ಮತದಾನ ಇಂದು ಮಹಾರಾಷ್ಟ್ರ ಸೇರಿದಂತೆ ದೇಶಾದ್ಯಂತ ನಡೆಯುತ್ತಿದೆ.

ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಮತಗಟ್ಟೆಯ ಒಳಗೆ ಮತ್ತು ಹೊರಗೆ ಗದ್ದಲ ಉಂಟಾದಾಗ ವ್ಯಕ್ತಿಯೊಬ್ಬ ನೀರನ್ನು ಬಳಸಿ ಇವಿಎಂನಲ್ಲಿ ಬೆಂಕಿಯನ್ನು ನಂದಿಸಲು ಪ್ರಯತ್ನಿಸುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಈ ಘಟನೆಯಿಂದಾಗಿ ಹೊಸ ಯಂತ್ರ ತರುವವರೆಗೆ ಕೆಲಕಾಲ ಮತದಾನ ಸ್ಥಗಿತಗೊಳಿಸಬೇಕಾಯಿತು. ನಂತರ ಚುನಾವಣಾ ಮತಗಟ್ಟೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಇದನ್ನೂ ಓದಿ: ಲೋಕಸಭಾ ಚುನಾವಣೆ 2024: ಮತದಾನ ಮಾಡಿ ಬಂದ ಮೋದಿಗೆ ರಾಖಿ ಕಟ್ಟಿ ಹಾರೈಸಿದ ಮಹಿಳೆ

ಸೊಲ್ಲಾಪುರದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಸುಶೀಲ್ ಕುಮಾರ್ ಶಿಂಧೆ ಅವರ ಪುತ್ರಿ ಹಾಗೂ ಸೊಲ್ಲಾಪುರ ಸಿಟಿ ಸೆಂಟ್ರಲ್ ಕ್ಷೇತ್ರದಿಂದ 3 ಬಾರಿ ಶಾಸಕಿಯಾಗಿರುವ ಪ್ರಣಿತಿ ಶಿಂಧೆ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿಯ ರಾಮ್ ಸತ್ಪುಟೆಯಿಂದ ಅವರು ಕಠಿಣ ಸವಾಲು ಎದುರಿಸುತ್ತಿದ್ದಾರೆ. ಸತ್ಪುಟೆ ಅವರು ಪಕ್ಕದ ಮಾಧಾ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಸೋಲಾಪುರ ಜಿಲ್ಲೆಯ ಮಲ್ಶಿರಾಸ್‌ನಿಂದ ಶಾಸಕರಾಗಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
KSRTC ಬಸ್​​ನಲ್ಲಿ ಅಕ್ರಮ ಗೋಮಾಂಸ ಸಾಗಿಸುತ್ತಿದ್ದ ಶಕೀರಾ ವಶಕ್ಕೆ
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಇಂಜಿನಿಯರಿಂಗ್​​ಗೆ ಯಾವ ಕಾಲೇಜು, ಯಾವ ಕೋರ್ಸ್ ಬೆಸ್ಟ್?
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಮಾಜಿ ಪ್ರಧಾನಿಯ ಮಗನಾಗಿ ಸರ್ಕಾರಿ ಜಮೀನು ಒತ್ತುವರಿ ಮಾಡ್ತೀನಾ? ಕುಮಾರಸ್ವಾಮಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪಂದ್ಯವಾಡು ಫೈನ್ ಕಟ್ಟು: ಬ್ಯಾಕ್ ಟು ಬ್ಯಾಕ್ ದಂಡ ಕಟ್ಟಿದ ದಿಗ್ವೇಶ್ ರಾಠಿ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಪೊಲೀಸರನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಿ: ಪ್ರತಾಪ್ ಸಿಂಹ
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಗ್ಲೋಬಲ್ ಕನ್ನಡಿಗನಿಗೆ ಯೂಟ್ಯೂಬ್​ನಿಂದ ಬರ್ತಿರೋದೆಷ್ಟು?
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಹಾರ್ದಿಕ್ ಪಾಂಡ್ಯ ನಿರ್ಧಾರಕ್ಕೆ ಅಸಮಾಧಾನ ಹೊರಹಾಕಿದ ಸೂರ್ಯಕುಮಾರ್ ಯಾದವ್
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ಪೊಲೀಸರಿಗೆ ದೂರು ನೀಡುವುದು ಸಹ ಗೊತ್ತಿರದ ಮಹಿಳೆಯ ಕುಟುಂಬ
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ನಿವೇದಿತಾ ಕಥೆ ಕೇಳಿ ಗಟ್ಟಿ ಮನಸ್ಸಿನ ವ್ಯಕ್ತಿಗಳ ಕಣ್ಣಲ್ಲೂ ಬಂತು ನೀರು
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?
ಶಿವನಿಗೆ ಪೂಜಾ ಸಮಯದಲ್ಲಿ ಇಡಬಾರದ ವಸ್ತು ಯಾವುದು ಗೊತ್ತಾ?