AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ

PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯೋದನ್ನು ನಿಲ್ಲಿಸಿಬಿಟ್ರಲ್ಲ ಯಾಕೆ? ಅವರಿಂದ ಟೆಂಪೋ ತುಂಬ ಕಪ್ಪು ಹಣ ಪಡೆದುಕೊಂಡಿದ್ದಾರಾ? ಎಂದು ರಾಹುಲ್ ಗಾಂಧಿ ಅವರನ್ನು ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ವಿರುದ್ಧ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 08, 2024 | 12:23 PM

Share

ಹೈದರಾಬಾದ್, ಮೇ 8: ಐದು ವರ್ಷದಿಂದ ಅಂಬಾನಿ ಮತ್ತು ಅಡಾನಿಯನ್ನು ಬಯ್ಯುತ್ತಲೇ ಬಂದಿದ್ದ ಕಾಂಗ್ರೆಸ್ ಶಹಜಾದೆ (ರಾಹುಲ್ ಗಾಂಧಿ) ರಾತ್ರೋರಾತ್ರಿ ಬಯ್ಯೋದನ್ನೇ ನಿಲ್ಲಿಸಿದ್ದಾರೆ. ಅವರಿಂದ ಎಷ್ಟು ಕಪ್ಪು ಹಣ ಇವರಿಗೆ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದ ರಾಜನ್ನ ಸಿರಿಸಿಲ್ಲ (Rajanna Circilla) ಜಿಲ್ಲೆಯ ವೇಮುಲವಾಡ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ, ಅಡಾನಿ ಜಪ ಮಾಡುವುದನ್ನು ರಾಹುಲ್ ಗಾಂಧಿ ನಿಲ್ಲಿಸಿದ್ದು ಯಾಕೆ ಎಂದು ಕೇಳಿದ್ದಾರೆ. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಬಳುಸತ್ತಿದ್ದಿ ಅಂಬಾನಿ, ಅದಾನಿ ಅಸ್ತ್ರವನ್ನು ಅವರಿಗೇ ತಿರುಗಿಸಿದ್ದಾರೆ ನರೇಂದ್ರ ಮೋದಿ.

“ಕಾಂಗ್ರೆಸ್​ನ ಶಹಜಾದೆ ಕಳೆದ 5 ವರ್ಷದಿಂದ ಬೆಳಗ್ಗೆಯಾದರೆ ಜಪ ಮಾಡುತ್ತಿದ್ದ ರಫೇಲ್ ವಿಚಾರ ಬಿದ್ದುಹೋಯಿತು…. ಐವರು ಉದ್ಯಮಿಗಳು, ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಐದು ವರ್ಷದಿಂದ ಒಂದೇ ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ, ಅಂಬಾನಿ ಅಡಾಣಿ, ಅಂಬಾನಿ ಅಡಾಣಿ ಅಂತ ಹೇಳೋಕೆ ಶುರು ಮಾಡಿದ್ರು…

“ಚುನಾವಣೆ ಘೋಷಣೆ ಆದ ಬಳಿಕ ಅಂಬಾನಿ ಅಡಾಣಿ ಅವರನ್ನು ಬಯ್ಯೋದು ನಿಲ್ಲಿಸಿ ಬಿಟ್ರು. ತೆಲಂಗಾಣದ ಈ ನೆಲದಿಂದ ಒಂದು ಪ್ರಶ್ನೆ ಕೇಳುತ್ತೇನೆ. ಅಂಬಾನಿ, ಅಡಾಣಿಯಿಂದ ನೀವು ಎಷ್ಟು ಹಣ ಪಡೆದಿದ್ದೀರಿ ಹೇಳಿ? ರಾತ್ರೋರಾತ್ರಿ ಇವರು ಅಂಬಾನಿ ಅಡಾಣಿ ಬಯ್ಯೋದನ್ನು ನಿಲ್ಲಿಸಿದ್ದಾರೆಂದರೆ ಏನೋ ಇರಬೇಕು. ಯಾವುದೋ ಕಳ್ಳ ಮಾಲು ಟೆಂಪೋದೊಳಗೆ ತುಂಬಿ ಬಂದಿರಬೇಕು” ಎಂದು ನರೇಂದ್ರ ಮೋದಿ ಶಂಕಿಸಿದ್ದಾರೆ.

ಇದನ್ನೂ ಓದಿ: ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದ ದಲಿತ ಮಕ್ಕಳು ಪರೀಕ್ಷೆಗಳಲ್ಲಿ ಫೇಲ್ ಆಗ್ತಿದ್ದಾರೆ​: ರಾಹುಲ್​ ವಿವಾದ

ಪ್ರಧಾನಿ ಮೋದಿ ಅವರು ರಾಜನ್ನ ಸಿರಿಸಿಲ್ಲ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮುನ್ನ ವೇಮುಲವಾಡದ ರಾಜನ್ನ ದೇವಸ್ಥಾನದಲ್ಲಿ ನಂದಿಯ ದರ್ಶನ ಮಾಡಿದರು. ಹೈದರಾಬಾದ್​ನಿಂದ ಇಲ್ಲಿಗೆ ಬಂದ ಮೋದಿ, ಬಳಿಕ ರಾಜಂಪೇಟಾಗೆ ತೆರಳಲಿದ್ದಾರೆ.

ಬಳಿಕ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆ ಮತ್ತು ವಿಜಯವಾಡ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಬುಧವಾರ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್