AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ

PM Narendra Modi at Telangana: ಕಳೆದ ಐದು ವರ್ಷದಿಂದ ರಾಹುಲ್ ಗಾಂಧಿ ಅವರದ್ದು ಐವರು ಉದ್ಯಮಿಗಳು ಎಂದು ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ ಅಂತ ಹೇಳೋಕೆ ಶುರು ಮಾಡಿದ್ರು. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ ಅಡಾಣಿಯನ್ನು ಬಯ್ಯೋದನ್ನು ನಿಲ್ಲಿಸಿಬಿಟ್ರಲ್ಲ ಯಾಕೆ? ಅವರಿಂದ ಟೆಂಪೋ ತುಂಬ ಕಪ್ಪು ಹಣ ಪಡೆದುಕೊಂಡಿದ್ದಾರಾ? ಎಂದು ರಾಹುಲ್ ಗಾಂಧಿ ಅವರನ್ನು ನರೇಂದ್ರ ಮೋದಿ ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದಲ್ಲಿ ಚುನಾವಣಾ ಭಾಷಣದ ವೇಳೆ ರಾಹುಲ್ ಗಾಂಧಿ ವಿರುದ್ಧ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ.

ರಾತ್ರೋರಾತ್ರಿ ಅಂಬಾನಿ, ಅಡಾನಿ ಬಯ್ಯೋದು ನಿಲ್ಲಿಸಿದ್ರಿ; ಎಷ್ಟು ಕಪ್ಪುಹಣ ತಗೊಂಡ್ರಿ?: ರಾಹುಲ್ ಗಾಂಧಿಗೆ ಮೋದಿ ಪ್ರಶ್ನೆ
ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 08, 2024 | 12:23 PM

Share

ಹೈದರಾಬಾದ್, ಮೇ 8: ಐದು ವರ್ಷದಿಂದ ಅಂಬಾನಿ ಮತ್ತು ಅಡಾನಿಯನ್ನು ಬಯ್ಯುತ್ತಲೇ ಬಂದಿದ್ದ ಕಾಂಗ್ರೆಸ್ ಶಹಜಾದೆ (ರಾಹುಲ್ ಗಾಂಧಿ) ರಾತ್ರೋರಾತ್ರಿ ಬಯ್ಯೋದನ್ನೇ ನಿಲ್ಲಿಸಿದ್ದಾರೆ. ಅವರಿಂದ ಎಷ್ಟು ಕಪ್ಪು ಹಣ ಇವರಿಗೆ ಸಿಕ್ಕಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಪ್ರಶ್ನೆ ಮಾಡಿದ್ದಾರೆ. ತೆಲಂಗಾಣದ ರಾಜನ್ನ ಸಿರಿಸಿಲ್ಲ (Rajanna Circilla) ಜಿಲ್ಲೆಯ ವೇಮುಲವಾಡ ಪಟ್ಟಣದಲ್ಲಿ ಚುನಾವಣಾ ಪ್ರಚಾರ ಆರಂಭಿಸಿದ ನರೇಂದ್ರ ಮೋದಿ, ಕಾಂಗ್ರೆಸ್ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಅಂಬಾನಿ, ಅಡಾನಿ ಜಪ ಮಾಡುವುದನ್ನು ರಾಹುಲ್ ಗಾಂಧಿ ನಿಲ್ಲಿಸಿದ್ದು ಯಾಕೆ ಎಂದು ಕೇಳಿದ್ದಾರೆ. ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಬಳುಸತ್ತಿದ್ದಿ ಅಂಬಾನಿ, ಅದಾನಿ ಅಸ್ತ್ರವನ್ನು ಅವರಿಗೇ ತಿರುಗಿಸಿದ್ದಾರೆ ನರೇಂದ್ರ ಮೋದಿ.

“ಕಾಂಗ್ರೆಸ್​ನ ಶಹಜಾದೆ ಕಳೆದ 5 ವರ್ಷದಿಂದ ಬೆಳಗ್ಗೆಯಾದರೆ ಜಪ ಮಾಡುತ್ತಿದ್ದ ರಫೇಲ್ ವಿಚಾರ ಬಿದ್ದುಹೋಯಿತು…. ಐವರು ಉದ್ಯಮಿಗಳು, ಐವರು ಉದ್ಯಮಿಗಳು, ಐವರು ಉದ್ಯಮಿಗಳು ಎಂದು ಐದು ವರ್ಷದಿಂದ ಒಂದೇ ಜಪ ಮಾಡುತ್ತಿದ್ದರು. ಬಳಿಕ ಅಂಬಾನಿ ಅಡಾನಿ, ಅಂಬಾನಿ ಅಡಾಣಿ, ಅಂಬಾನಿ ಅಡಾಣಿ ಅಂತ ಹೇಳೋಕೆ ಶುರು ಮಾಡಿದ್ರು…

“ಚುನಾವಣೆ ಘೋಷಣೆ ಆದ ಬಳಿಕ ಅಂಬಾನಿ ಅಡಾಣಿ ಅವರನ್ನು ಬಯ್ಯೋದು ನಿಲ್ಲಿಸಿ ಬಿಟ್ರು. ತೆಲಂಗಾಣದ ಈ ನೆಲದಿಂದ ಒಂದು ಪ್ರಶ್ನೆ ಕೇಳುತ್ತೇನೆ. ಅಂಬಾನಿ, ಅಡಾಣಿಯಿಂದ ನೀವು ಎಷ್ಟು ಹಣ ಪಡೆದಿದ್ದೀರಿ ಹೇಳಿ? ರಾತ್ರೋರಾತ್ರಿ ಇವರು ಅಂಬಾನಿ ಅಡಾಣಿ ಬಯ್ಯೋದನ್ನು ನಿಲ್ಲಿಸಿದ್ದಾರೆಂದರೆ ಏನೋ ಇರಬೇಕು. ಯಾವುದೋ ಕಳ್ಳ ಮಾಲು ಟೆಂಪೋದೊಳಗೆ ತುಂಬಿ ಬಂದಿರಬೇಕು” ಎಂದು ನರೇಂದ್ರ ಮೋದಿ ಶಂಕಿಸಿದ್ದಾರೆ.

ಇದನ್ನೂ ಓದಿ: ಮೇಲ್ವರ್ಗದವರು ಪ್ರಶ್ನೆ ಪತ್ರಿಕೆ ಸಿದ್ಧಪಡಿಸುವುದರಿಂದ ದಲಿತ ಮಕ್ಕಳು ಪರೀಕ್ಷೆಗಳಲ್ಲಿ ಫೇಲ್ ಆಗ್ತಿದ್ದಾರೆ​: ರಾಹುಲ್​ ವಿವಾದ

ಪ್ರಧಾನಿ ಮೋದಿ ಅವರು ರಾಜನ್ನ ಸಿರಿಸಿಲ್ಲ ಜಿಲ್ಲೆಯಲ್ಲಿ ಚುನಾವಣಾ ಪ್ರಚಾರ ಆರಂಭಿಸುವ ಮುನ್ನ ವೇಮುಲವಾಡದ ರಾಜನ್ನ ದೇವಸ್ಥಾನದಲ್ಲಿ ನಂದಿಯ ದರ್ಶನ ಮಾಡಿದರು. ಹೈದರಾಬಾದ್​ನಿಂದ ಇಲ್ಲಿಗೆ ಬಂದ ಮೋದಿ, ಬಳಿಕ ರಾಜಂಪೇಟಾಗೆ ತೆರಳಲಿದ್ದಾರೆ.

ಬಳಿಕ ಆಂಧ್ರಪ್ರದೇಶದ ಅಣ್ಣಮಯ್ಯ ಜಿಲ್ಲೆ ಮತ್ತು ವಿಜಯವಾಡ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ನಡೆಸಲಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಇಂದು ಬುಧವಾರ ತೆಲಂಗಾಣದಲ್ಲಿ ಪ್ರತ್ಯೇಕವಾಗಿ ಚುನಾವಣಾ ಪ್ರಚಾರ ಸಭೆ ನಡೆಸುತ್ತಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ