AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಯಮತ್ತೂರಿನಲ್ಲಿ ಅಣ್ಣಾಮಲೈ ಬಿಜೆಪಿಗೆ ವಿಜಯದ ಮಾಲೆ ಹಾಕಿಸುತ್ತಾರಾ? ಹೇಗಿದೆ ಸಾಧ್ಯತೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್​ ಕೆ ಅಣ್ಣಾಮಲೈ ಯಾವುದೇ ಕ್ಷೇತ್ರದಲ್ಲಿ ಕಾಲೂರಿದರೂ ತಮ್ಮ ಛಾಪು, ಅಧಿಪತ್ಯ ಸ್ಥಾಪಿಸುವ ವ್ಯಕ್ತಿತ್ವ ಹೊಂದಿದ್ದಾರೆ. ನರೇಂದ್ರ ಮೋದಿ ಪ್ರಧಾನಿ ಆಗುತ್ತಾರೆ ಎಂದು ಈ ಹಿಂದೆ ಬಹುಶಃ ವಾಜಪೇಯಿ ಅವರ ಅರಿವಿಗೆ ಬಂದಿತ್ತೇನೋ! ಅದೇ ರೀತಿ ಈಗ ಮೋದಿಗೆ ಅನ್ನಿಸುತ್ತಿದೆಯಂತೆ ಕಾಲಾಂತರದಲ್ಲಿ ಅಣ್ಣಾಮಲೈ ಪ್ರಧಾನಿ ಆಗಬಹುದು ಎಂದು. ಹಾಗಾದರೆ ಮೋದಿ ಉತ್ತರಾಧಿಕಾರಿ ಎಂದೇ ಬಿಂಬಿತವಾಗಿರುವ ಯೋಗಿ ಆದಿತ್ಯನಾಥರು ಎಲ್ಲಿಗೆ ಹೋಗಬೇಕು? ಅದಕ್ಕೂ ಮುನ್ನ ಕೊಯಮತ್ತೂರು ಲೋಕಸಭಾ ಕ್ಷೇತ್ರದಲ್ಲಿ ಅಣ್ಣಾಮಲೈ ಗೆಲುವಿನ ಸಾಧ್ಯತೆ ಹೇಗಿದೆ?

ಕೊಯಮತ್ತೂರಿನಲ್ಲಿ ಅಣ್ಣಾಮಲೈ ಬಿಜೆಪಿಗೆ ವಿಜಯದ ಮಾಲೆ ಹಾಕಿಸುತ್ತಾರಾ? ಹೇಗಿದೆ ಸಾಧ್ಯತೆ? ಸಮಗ್ರ ವಿಶ್ಲೇಷಣೆ ಇಲ್ಲಿದೆ
ಕೊಯಮತ್ತೂರಿನಲ್ಲಿ ಅಣ್ಣಾಮಲೈ ಬಿಜೆಪಿಗೆ ವಿಜಯದ ಮಾಲೆ ಹಾಕಿಸುತ್ತಾರಾ?
ಸಾಧು ಶ್ರೀನಾಥ್​
|

Updated on: Apr 04, 2024 | 6:18 PM

Share

ಕರ್ನಾಟಕದ ಸಿಂಗಂ ಖ್ಯಾತಿಯ ಮಾಜಿ ಐಪಿಎಸ್​ ಕೆ. ಅಣ್ಣಾಮಲೈ ಅವರು ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ. ಪ್ರಸ್ತುತ ತಮಿಳುನಾಡಿನಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯಾಧ್ಯಕ್ಷರೂ ಆಗಿರುವ ಅಣ್ಣಾಮಲೈ ಅವರು ಲೋಕ ಚುನಾವಣೆಯಲ್ಲಿ ಗೆಲ್ಲುತ್ತಾರೋ ಅಥವಾ ಅಪಜಯ ಅನುಭವಿಸುತ್ತಾರೋ ಅದು ಮತದಾರರಿಗೆ, ರಾಜಕೀಯ ಪರಿಣತರಿಗೆ ಬಿಟ್ಟ ವಿಷಯ. ಆದರೆ ಅವರ ಸೋಲು-ಗೆಲುವಿನ ಸಾಧ್ಯತೆಯ ಬಗ್ಗೆ ಊಹಾಪೋಹಗಳು, ಲೆಕ್ಕಾಚಾರಗಳು, ಸಮೀಕರಣಗಳು ಬಹಳವಾಗಿ ಹರಡುತ್ತಿದೆ. ಕೊಯಮತ್ತೂರು ಬಿಜೆಪಿಯ ಭದ್ರಕೋಟೆ ಎಂದು ಪರಿಗಣಿಸಲ್ಪಟ್ಟಿದೆ ಎಂಬುದು ಗಮನಾರ್ಹ. ಆದರೆ ಎಐಎಡಿಎಂಕೆಯೂ ಮೇಲುಗೈ ಹೊಂದಿದೆ. ಈ ಹಿಂದೆ ಇವೆರಡೂ ಮಿತ್ರ ಪಕ್ಷಗಳಾಗಿದ್ದವು. ಆದರೆ ಈ ಬಾರಿ ಮೈತ್ರಿ ಕಾರ್ಯಗತವಾಗಿಲ್ಲ. ಜಯಲಲಿತಾ ಅಣ್ಣಾ ಡಿಎಂಕೆಗೆ ಬಿಜೆಪಿ ಸಡ್ಡು ಹೊಡೆದು ಏಕಾಂಗಿಯಾಗಿ ಸ್ಪರ್ಧಿಸುತ್ತಿದೆ. ಈ ಹಿನ್ನೆಲೆಯಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಜಾತಿಯ ಡೈನಾಮಿಕ್ಸ್, ಎಸ್‌ಪಿ ವೇಲುಮಣಿ ಅಂಶ, ಅಲ್ಪಸಂಖ್ಯಾತರ ಮತಗಳು ಮತ್ತು ಪಕ್ಷದ ಆಂತರಿಕ ಸಮಸ್ಯೆಗಳು ಬಿಜೆಪಿಗೆ ಸವಾಲುಗಳನ್ನು ಒಡ್ಡುತ್ತವೆ. ಆದಾಗ್ಯೂ, ಪಕ್ಷವು ತನ್ನ ಬೆಂಬಲದ ನೆಲೆಯನ್ನು ಕ್ರೋಢೀಕರಿಸುವ ಕೆಲಸ ಮಾಡುತ್ತಿದೆ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ. ನಾಯ್ಡು ಸಮುದಾಯದ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಎಐಎಡಿಎಂಕೆಯ ನಿರ್ಧಾರವು ಗೌಂಡರ್ ಬೆಂಬಲದ ನೆಲೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿಲ್ಲದಿದ್ದರೂ, ಬಿಜೆಪಿ ತನ್ನ ಸಾಂಪ್ರದಾಯಿಕ ಮತದಾರರ ಬೆಂಬಲ, ಅಣ್ಣಾಮಲೈ ಅವರ ಜನಪ್ರಿಯತೆ ಮತ್ತು ಕೇಂದ್ರ ಸರ್ಕಾರದ ಯೋಜನೆಗಳನ್ನು ಆಧರಿಸಿದೆ. ಈ ಕ್ಷೇತ್ರದಲ್ಲಿ 2019ರಲ್ಲಿ ಮೋದಿ ವಿರೋಧಿ ಅಲೆ ಇತ್ತು. ಆದರೆ ಈ ಬಾರಿ ಮೋದಿ ಮತದಾರರ ಒಲವು ಸಂಪಾದಿಸಿದ್ದಾರೆ. ಹಾಗಾಗಿ ರಣಕಣ ರಂಗೇರಿದೆ. ಗಮನಾರ್ಹ ಬೆಳವಣಿಗೆಯೆಂದರೆ ಅಣ್ಣಾಮಲೈ ಯಾವುದೇ ಕ್ಷೇತ್ರದಲ್ಲಿ ಕಾಲೂರಿದರೂ...

ಪೂರ್ಣ ಸುದ್ದಿಯನ್ನು ಓದಲು Tv9 ಆ್ಯಪ್ ಡೌನ್​ಲೋಡ್ ಮಾಡಿ

ಎಕ್ಸ್​ಕ್ಲೂಸಿವ್ ಸುದ್ದಿಗಳ ಅನ್​ಲಿಮಿಟೆಡ್ ಆಕ್ಸೆಸ್ Tv9 ಆ್ಯಪ್​ನಲ್ಲಿ ಮುಂದುವರೆಯಿರಿ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್