AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗೆಲುವು, ಸೋಲು ರಾಜಕೀಯದ ಭಾಗ, ನಂಬರ್ ಗೇಮ್ ಮುಂದುವರಿಯುತ್ತದೆ: ಪ್ರಧಾನಿ ಮೋದಿ

ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅವರು ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. ಗೆಲುವು ಮತ್ತು ಸೋಲು ರಾಜಕೀಯದ ಭಾಗವಾಗಿದೆ. ಸಂಖ್ಯೆಗಳ ಆಟ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.

ಗೆಲುವು, ಸೋಲು ರಾಜಕೀಯದ ಭಾಗ, ನಂಬರ್ ಗೇಮ್  ಮುಂದುವರಿಯುತ್ತದೆ: ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Jun 05, 2024 | 8:32 PM

Share

ದೆಹಲಿ ಜೂನ್ 05: ಪ್ರಸಕ್ತ ಸಾಲಿನ ಕೊನೆಯ ಸಂಪುಟ ಸಭೆಯಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ (Narendra Modi), ಸೋಲು-ಗೆಲುವು ರಾಜಕೀಯದ ಭಾಗ ಎಂದು ಹೇಳಿದ್ದಾರೆ. 2014 ರಲ್ಲಿ 282 ಮತ್ತು 2019 ರ ಲೋಕಸಭಾ ಚುನಾವಣೆಯಲ್ಲಿ (Lok sabha Elections) 303 ಸ್ಥಾನಗಳನ್ನು ಗೆದ್ದಿರುವ ಬಿಜೆಪಿ  ಈ ಬಾರಿ 240 ಸ್ಥಾನಗಳನ್ನು ಗೆದ್ದಿದೆ. 272 ಸ್ಥಾನಗಳು ಬಹುಮತಕ್ಕೆ ಬೇಕಾಗಿದ್ದು ಬಿಜೆಪಿಗೆ 32 ಸ್ಥಾನಗಳ ಕೊರತೆಯಿದೆ. ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ (NDA) ಸದಸ್ಯರು ಗೆದ್ದಿರುವ 53 ಸ್ಥಾನಗಳ ಮೇಲೆ ಸರ್ಕಾರ ರಚನೆ ಅವಲಂಬಿತವಾಗಿದೆ.

“ಕಳೆದ 10 ವರ್ಷಗಳಿಂದ ನಾವು ಉತ್ತಮ ಕೆಲಸ ಮಾಡಿದ್ದೇವೆ. ನಾವು ಅದನ್ನು ಮುಂದುವರಿಸುತ್ತೇವೆ” ಎಂದು ಪ್ರಧಾನಿ ಮೋದಿ ಕ್ಯಾಬಿನೆಟ್ ಸಭೆಯಲ್ಲಿ ಎನ್‌ಡಿಎ ನಾಯಕರಿಗೆ ಹೇಳಿದ್ದಾರೆ.

ಲೋಕಸಭಾ ಚುನಾವಣಾ ಫಲಿತಾಂಶದ ಕುರಿತು ಮಾತನಾಡಿದ ಅವರು ಎನ್‌ಡಿಎ ಮೂರನೇ ಬಾರಿಗೆ ಸರ್ಕಾರ ರಚಿಸಲು ಹಕ್ಕು ಸಾಧಿಸಲಿದೆ. ಈ ಫಲಿತಾಂಶ ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವದ ಗೆಲುವು. ಗೆಲುವು ಮತ್ತು ಸೋಲು ರಾಜಕೀಯದ ಭಾಗವಾಗಿದೆ. ಸಂಖ್ಯೆಗಳ ಆಟ ಮುಂದುವರಿಯುತ್ತದೆ ಎಂದು ಮೋದಿ ಹೇಳಿದ್ದಾರೆ.

ಕಳೆದ 10 ವರ್ಷಗಳಲ್ಲಿ ಅತ್ಯುತ್ತಮ ಕೊಡುಗೆ ನೀಡಿದ ಕೇಂದ್ರ ಸಚಿವರಿಗೆ ಧನ್ಯವಾದ ಅರ್ಪಿಸಿದ ಮೋದಿ,ನೀವೆಲ್ಲರೂ ತುಂಬಾ ಶ್ರಮಿಸಿದ್ದೀರಿ ಎಂದು ಹೇಳಿದ್ದಾರೆ. ಸಭೆಯ ನಂತರ ರಾಜೀನಾಮೆ ಸಲ್ಲಿಸಲು ರಾಷ್ಟ್ರಪತಿ ಭವನಕ್ಕೆ ತೆರಳಿದಅವರು ಶನಿವಾರ ನೂತನ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: ಜೂನ್​ 8ರಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸಾಧ್ಯತೆ

“ರಾಷ್ಟ್ರಪತಿಗಳು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ. ಹೊಸ ಸರ್ಕಾರ ಅಧಿಕಾರ ಸ್ವೀಕರಿಸುವವರೆಗೆ ಮುಂದುವರಿಯಲು ನರೇಂದ್ರ ಮೋದಿ ಮತ್ತು ಮಂತ್ರಿ ಮಂಡಳಿಗೆ ವಿನಂತಿಸಿದ್ದಾರೆ” ಎಂದು ರಾಷ್ಟ್ರಪತಿ ಭವನ ಹೇಳಿಕೆಯಲ್ಲಿ ತಿಳಿಸಿದೆ.

ಪ್ರಸ್ತುತ 17ನೇ ಲೋಕಸಭೆಯ ಅವಧಿ ಜೂನ್ 16ಕ್ಕೆ ಕೊನೆಗೊಳ್ಳಲಿದೆ. 2019 ರಲ್ಲಿ 52 ಸ್ಥಾನ ಗಳಿಸಿದ್ದ ಕಾಂಗ್ರೆಸ್ ಈ ಚುನಾವಣೆಯಲ್ಲಿ 99 ಸ್ಥಾನಗಳನ್ನು ಗೆದ್ದುಕೊಂಡಿದೆ.

ಮತ್ತಷ್ಟು ಚುನಾವಣಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ