AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Madhya Pradesh Polls: ಬಿಜೆಪಿ ಸೋಮವಾರ ಬಿಡುಗಡೆ ಮಾಡಿದ ಅಭ್ಯರ್ಥಿಗಳ ಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಬುಧ್ನಿಯಿಂದ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಡಾಟಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್‌ನಿಂದ ಸ್ಪರ್ಧಿಸಲಿದ್ದಾರೆ.

ಮಧ್ಯಪ್ರದೇಶ ಚುನಾವಣೆ: 57 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ
ಶಿವರಾಜ್ ಸಿಂಗ್ ಚೌಹಾಣ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Oct 09, 2023 | 5:35 PM

Share

ಭೋಪಾಲ್ ಅಕ್ಟೋಬರ್ 09 : ಮುಂಬರುವ ಮಧ್ಯಪ್ರದೇಶ (Madhya Pradesh Polls) ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ 57 ಅಭ್ಯರ್ಥಿಗಳ ಪಟ್ಟಿಯನ್ನು ಬಿಜೆಪಿ (BJP) ಸೋಮವಾರ ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಸಿಎಂ ಶಿವರಾಜ್ ಸಿಂಗ್ ಚೌಹಾಣ್ (Shivraj Singh Chouhan) ಬುಧ್ನಿಯಿಂದ, ರಾಜ್ಯದ ಗೃಹ ಸಚಿವ ನರೋತ್ತಮ್ ಮಿಶ್ರಾ ಡಾಟಿಯಾದಿಂದ, ಗೋಪಾಲ್ ಭಾರ್ಗವ ರೆಹ್ಲಿಯಿಂದ, ವಿಶ್ವಾಸ್ ಸಾರಂಗ್ ನರೇಲಾದಿಂದ ಮತ್ತು ತುಳಸಿರಾಮ್ ಸಿಲಾವತ್ ಸಾನ್ವೆರ್‌ನಿಂದ ಸ್ಪರ್ಧಿಸಲಿದ್ದಾರೆ.

230 ಸದಸ್ಯರಿರುವ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್ 17 ರಂದು ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶಗಳನ್ನು ಪ್ರಕಟಿಸಲಾಗುವುದು ಎಂದು ಇಂದು ಭಾರತೀಯ ಚುನಾವಣಾ ಆಯೋಗ ಹೇಳಿದೆ.

ಇದನ್ನೂ ಓದಿ: Chhattisgarh polls: 64 ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ, ರಾಜನಂದಗಾಂವ್‌ನಿಂದ ರಮಣ್ ಸಿಂಗ್ ಮತ್ತೆ ಸ್ಪರ್ಧೆ

ಆಗಸ್ಟ್ 17 ರಂದು ಮಧ್ಯಪ್ರದೇಶ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಸುಮಾರು 39 ಅಭ್ಯರ್ಥಿಗಳ ಹೆಸರುಗಳಿವೆ.

ಎರಡನೇ ಪಟ್ಟಿಯನ್ನು ಸೆಪ್ಟೆಂಬರ್ 25 ರಂದು ಬಿಡುಗಡೆ ಮಾಡಲಾಯಿತು. ಈ ಪಟ್ಟಿಯಲ್ಲಿ ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್, ರಾಜ್ಯ ಸಚಿವ (MoS) ಆಹಾರ ಸಂಸ್ಕರಣಾ ಕೈಗಾರಿಕೆಗಳ (MoS) ಪ್ರಹ್ಲಾದ್ ಸಿಂಗ್ ಪಟೇಲ್ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಉಕ್ಕು ರಾಜ್ಯ ಸಚಿವ ಫಗ್ಗನ್ ಸಿಂಗ್ ಕುಲತ್ಸೆ ಮತ್ತು ನಾಲ್ಕು ಲೋಕಸಭಾ ಸಂಸದರಿಗೆ ಟಿಕೆಟ್ ನೀಡಲಾಗಿದೆ. ಮರುದಿನವೇ  ಎಸ್ಟಿಗಳಿಗೆ ಮೀಸಲಾದ ಸ್ಥಾನವಾದ ಅಮರವಾರದಿಂದ ಮೋನಿಕಾ ಬಟ್ಟಿ ಸ್ಪರ್ಧಿಸುತ್ತಾರೆ ಎಂದು ಪಕ್ಷ ಘೋಷಿಸಿತು. ಗೊಂಡ್ವಾನಾ ಗಣತಂತ್ರ ಪಕ್ಷವನ್ನು ತೊರೆದ ನಂತರ ಅವರು ಬಿಜೆಪಿ ಸೇರಿದ್ದರು. . ಚುನಾವಣೆ ನಡೆಯುತ್ತಿರುವ ಐದು ರಾಜ್ಯಗಳ ಪೈಕಿ ಮಧ್ಯಪ್ರದೇಶದಲ್ಲಿ ಬಿಜೆಪಿ ಅಧಿಕಾರದಲ್ಲಿದೆ.

ಮುಂದಿನ ತಿಂಗಳು ಛತ್ತೀಸ್‌ಗಢ, ತೆಲಂಗಾಣ, ರಾಜಸ್ಥಾನ ಮತ್ತು ಮಿಜೋರಾಂನಲ್ಲಿ ಚುನಾವಣೆ ನಡೆಯಲಿದ್ದು, ಡಿಸೆಂಬರ್ 3 ರಂದು ಮತ ಎಣಿಕೆ ನಡೆಯಲಿದೆ.

ನಾಲ್ಕನೇ ಪಟ್ಟಿಯಲ್ಲಿರುವ ಕೆಲವು ಪ್ರಮುಖ ಅಭ್ಯರ್ಥಿಗಳು

ಶಿವರಾಜ್ ಸಿಂಗ್ ಚೌಹಾಣ್ (ಬುಧ್ನಿ), ಡಾ ನರೋತ್ತಮ್ ಮಿಶ್ರಾ (ದಾಟಿಯಾ), ಡಾ ಅರವಿಂದ್ ಸಿಂಗ್ ಭದೌರಿಯಾ (ಅಟರ್) ಪ್ರದ್ಯುಮನ್ ಸಿಂಗ್ ತೋಮರ್ (ಗ್ವಾಲಿಯರ್), ಗೋವಿಂದ್ ಸಿಂಗ್ ರಜಪೂತ್ (ಸುರ್ಖಿ), ರಾಹುಲ್ ಸಿಂಗ್ ಲೋಧಿ (ಖರ್ಗಾಪುರ್), ರಾಜೇಂದ್ರ ಶುಕ್ಲಾ (ರೇವಾ), ಬಿಶೌಲಾಲ್ ಸಿಂಗ್ (ಅನುಪ್ಪುರ್), ವಿಶ್ವಾಸ್ ಸಾರಂಗ್ (ನರೇಲಾ),ಕೃಷ್ಣ ಗೌರ್ (ಗೋವಿಂದಪುರ) ತುಳಸಿರಾಮ್ ಸಿಲಾವತ್ (ಸಾನ್ವರ್), ಹರ್ದೀಪ್ ಸಿಂಗ್ ಡ್ಯಾಂಗ್ (ಸುವಾಸ್ರಾ).

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 5:16 pm, Mon, 9 October 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು