AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಹಿರಿಯ ನಾಯಕ, ಮತಕ್ಕಾಗಿ ಕೈ ಮುಗಿಯಬೇಕೇ?: ಬಿಜೆಪಿ ಮುಖಂಡ

Kailash Vijayvargiya: ಕಾರ್ಯಕ್ರಮವೊಂದರಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ 67ರ ಹರೆಯದ ನಾಯಕ, ನನಗೆ ಸಂತೋಷವಾಗಿಲ್ಲ. ನಾನು ಸತ್ಯವನ್ನು ಹೇಳುತ್ತಿದ್ದೇನೆ. ನನಗೆ ಸ್ಪರ್ಧಿಸುವ ಆಸೆ ಇರಲಿಲ್ಲ, ಶೇಕಡಾ 1 ರಷ್ಟು ಕೂಡಾ ಇಲ್ಲ. ಸ್ಪರ್ಧಿಸುವ ಮನಸ್ಥಿತಿ ಇದೆ. ನಾನೀಗ ಹಿರಿಯ ನಾಯಕ, ಕೈಮುಗಿದು ಮತ ಕೇಳಬೇಕೆ? ಭಾಷಣ ಮಾಡಿ ಹೊರಡುತ್ತೇನೆ ಎಂದುಕೊಂಡಿದ್ದೆ. ಇದೇ ನನ್ನ ಯೋಜನೆಯಾಗಿತ್ತು ಎಂದು ಹೇಳಿದ್ದಾರೆ.

ನಾನು ಹಿರಿಯ ನಾಯಕ, ಮತಕ್ಕಾಗಿ ಕೈ ಮುಗಿಯಬೇಕೇ?: ಬಿಜೆಪಿ ಮುಖಂಡ
ಕೈಲಾಶ್ ವಿಜಯವರ್ಗಿಯಾ
Follow us
ರಶ್ಮಿ ಕಲ್ಲಕಟ್ಟ
|

Updated on: Sep 27, 2023 | 8:34 PM

ಭೋಪಾಲ್ ಸೆಪ್ಟೆಂಬರ್ 27: ಒಂದು ರಾಜಕೀಯ ಪಕ್ಷವು ಚುನಾವಣೆಗೆ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದಾಗಲೆಲ್ಲಾ, ಅದರಲ್ಲಿ ಹೆಸರು ಇರದೇ ಇರುವುದಕ್ಕೆ ಹಲವರು ಅಸಮಾಧಾನಗೊಂಡಿದ್ದಾರೆ. ಆದರೆ ಮಧ್ಯಪ್ರದೇಶದ  ಬಿಜೆಪಿಯ (BJP) ಹಿರಿಯ ನಾಯಕರೊಬ್ಬರು ತಮಗೆ ಚುನಾವಣೆ ಸ್ಪರ್ಧಿಸಲು ಅವಕಾಶ ನೀಡಿದ್ದಕ್ಕೆ ಅಸಮಾಧಾನಗೊಂಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಹಿರಿಯ ನಾಯಕ ಕೈಲಾಶ್ ವಿಜಯವರ್ಗಿಯಾ (Kailash Vijayvargiya) ಅವರು ಪಟ್ಟಿಯಲ್ಲಿ ಹೆಸರು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದು,ಈ ಬಾರಿ ಸ್ಪರ್ಧಿಸಲು “1 ಶೇಕಡಾ ಆಸೆ” ಕೂಡ ಇರಲಿಲ್ಲ ಎಂದು ಹೇಳಿದ್ದಾರೆ.

ಕಾರ್ಯಕ್ರಮವೊಂದರಲ್ಲಿ ತಮ್ಮ ಬೆಂಬಲಿಗರನ್ನು ಉದ್ದೇಶಿಸಿ ಮಾತನಾಡಿದ 67ರ ಹರೆಯದ ನಾಯಕ, ನನಗೆ ಸಂತೋಷವಾಗಿಲ್ಲ. ನಾನು ಸತ್ಯವನ್ನು ಹೇಳುತ್ತಿದ್ದೇನೆ. ನನಗೆ ಸ್ಪರ್ಧಿಸುವ ಆಸೆ ಇರಲಿಲ್ಲ, ಶೇಕಡಾ 1 ರಷ್ಟು ಕೂಡಾ ಇಲ್ಲ. ಸ್ಪರ್ಧಿಸುವ ಮನಸ್ಥಿತಿ ಇದೆ. ನಾನೀಗ ಹಿರಿಯ ನಾಯಕ, ಕೈಮುಗಿದು ಮತ ಕೇಳಬೇಕೆ? ಭಾಷಣ ಮಾಡಿ ಹೊರಡುತ್ತೇನೆ ಎಂದುಕೊಂಡಿದ್ದೆ. ಇದೇ ನನ್ನ ಯೋಜನೆಯಾಗಿತ್ತು ಎಂದು ಹೇಳಿದ್ದಾರೆ.

ವಿಜಯವರ್ಗಿಯಾ ಅವರು ಇಂದೋರ್-1 ವಿಧಾನಸಭಾ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಅವರು ಈ ಹಿಂದೆ ಇಂದೋರ್ ಮೇಯರ್ ಆಗಿ ಸೇವೆ ಸಲ್ಲಿಸಿದ್ದಾರೆ.  ಮಧ್ಯಪ್ರದೇಶ ಸರ್ಕಾರದಲ್ಲಿ ಕ್ಯಾಬಿನೆಟ್ ಸಚಿವರಾಗಿದ್ದರು ಮತ್ತು ಬಿಜೆಪಿಯೊಳಗೆ ಹಿರಿಯ ಸ್ಥಾನಗಳನ್ನು ಅಲಂಕರಿಸಿದ್ದಾರೆ.ಅವರ ಪುತ್ರ ಆಕಾಶ್ ಇಂದೋರ್-3 ಕ್ಷೇತ್ರದಿಂದ ಹಾಲಿ ಶಾಸಕರಾಗಿದ್ದಾರೆ.

ನಾನು ಎಂಟು ಸಾರ್ವಜನಿಕ ಸಭೆಗಳನ್ನು ಯೋಜಿಸಿದ್ದು, ಐದು ಹೆಲಿಕಾಪ್ಟರ್ ಮತ್ತು ಮೂರು ಕಾರಿನಲ್ಲಿ ಆಗಿತ್ತು. ಆದರೆ ನೀವು ಅಂದುಕೊಂಡದ್ದು ಎಂದಿಗೂ ಆಗುವುದಿಲ್ಲ. ದೇವರ ಚಿತ್ತದಂತೆ ಏನಾಗುತ್ತದೆ. ನಾನು ಚುನಾವಣೆಯಲ್ಲಿ ಸ್ಪರ್ಧಿಸಬೇಕೆಂದು ಅವರು ಬಯಸುತ್ತಾರೆ, ಮತ್ತೆ ಜನರ ಬಳಿಗೆ ಹೋಗಬೇಕು. ನನಗೆ ಇನ್ನೂ ನಂಬಲಾಗುತ್ತಿಲ್ಲ. ನಾನೇ ಅಭ್ಯರ್ಥಿ, ನನಗೆ ಟಿಕೆಟ್ ನೀಡಲಾಗಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಮಾಧ್ಯಮಗಳೊಂದಿಗಿನ ಮತ್ತೊಂದು ಸಂವಾದದಲ್ಲಿ, ವಿಜಯವರ್ಗಿಯಾ ಅವರು, “ಪಕ್ಷವು ನನ್ನನ್ನು ಮತ್ತೊಮ್ಮೆ ಚುನಾವಣಾ ಸ್ಪರ್ಧೆಗೆ ಆಯ್ಕೆ ಮಾಡಿರುವುದು ನನ್ನ ಅದೃಷ್ಟ, ನಾನು ಪಕ್ಷದ ನಿರೀಕ್ಷೆಗಳನ್ನು ಈಡೇರಿಸಲು ಪ್ರಯತ್ನಿಸುತ್ತೇನೆ” ಎಂದು ಹೇಳಿದರು. ಇಂದೋರ್-1 ಕ್ಷೇತ್ರವನ್ನು ಪ್ರಸ್ತುತ ಕಾಂಗ್ರೆಸ್‌ನ ಸಂಜಯ್ ಶುಕ್ಲಾ ಪ್ರತಿನಿಧಿಸುತ್ತಿದ್ದಾರೆ. “ಇಂದೋರ್-1 ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಗೆ ದೊಡ್ಡ ಅವಕಾಶವಿದೆ. ಅನೇಕ ಜನರಿಗೆ ಮೂಲಭೂತ ಸೌಕರ್ಯಗಳು ಸಿಗುತ್ತಿಲ್ಲ” ಎಂದು ವಿಜಯವರ್ಗಿಯಾ ಹೇಳಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶ: ನೆತ್ತರು ಸುರಿಸುತ್ತಾ ಜನರಲ್ಲಿ ಸಹಾಯ ಕೇಳಿದ ಅತ್ಯಾಚಾರ ಸಂತ್ರಸ್ತೆ; ದೂರ ಓಡಿಸಿದ ಜನ

ಬಿಜೆಪಿಯು ಮುಖ್ಯಮಂತ್ರಿ ಅಭ್ಯರ್ಥಿಯನ್ನು ಏಕೆ ಹೆಸರಿಸಿಲ್ಲ ಎಂಬುದಕ್ಕೆ, ಪಕ್ಷವು “ಸಾಮೂಹಿಕ ನಾಯಕತ್ವ” ಮಾದರಿಯನ್ನು ಅನುಸರಿಸುತ್ತದೆ ಎಂದು ಅವರು ಹೇಳಿದ್ದಾರೆ. “ನಾಲ್ಕು ರಾಜ್ಯಗಳಲ್ಲಿ ಚುನಾವಣೆ ಬಾಕಿಯಿದೆ, ಆದರೆ ಯಾವುದೇ ನಾಯಕನನ್ನು ಘೋಷಿಸಲಾಗಿಲ್ಲ, ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಇದು ನಮ್ಮ ತಂತ್ರ” ಎಂದು ಅವರು ಹೇಳಿದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ವಿದ್ಯುತ್​ ಚಿತಾಗಾರದ ಕರೆಂಟ್​ ಬಿಲ್​ ಬಾಕಿ ಉಳಿಸಿಕೊಂಡ ಬಿಟಿಡಿಎಗೆ ನೋಟಿಸ್
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ದಿನಕ್ಕೆ 10 ಗಂಟೆ ಕೆಲಸದ ಅವಧಿ ಬಗ್ಗೆ ಸಚಿವ ಸಂತೋಷ್ ಲಾಡ್ ಹೇಳಿದ್ದಿಷ್ಟು!
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ತನ್ನ ಸಿಗ್ನೇಚರ್ ಸ್ಟೆಪ್​ ಹಾಕುತ್ತಾ ಕುಣಿದು ರಂಜಿಸಿದ ಲೆಜೆಂಡರಿ ಸ್ಟಾರ್
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಇಲ್ಲಿಂದ ಮೇಲೆತ್ತಿ ಎಂಬಂತೆ ಅಸಾಹಯಕತೆಯಿಂದ ಜನರತ್ತ ನೋಡುತ್ತಿರುವ ನಾಯಿ
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಭೂಕುಸಿತ; ಹಲವು ರಸ್ತೆಗಳು ಬಂದ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಸೂಲಿಬೆಲೆ ನಮ್ಮ ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಮಾತಾಡುತ್ತಾರೆ: ಯತ್ನಾಳ್
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಅಣ್ಣಾವ್ರ ಸಿನಿಮಾದ ಹಾಡು ಹಾಡಿದ ಬಾಲಿವುಡ್ ಸ್ಟಾರ್ ನಟ: ವಿಡಿಯೋ ನೋಡಿ
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಂದ್ಸೌರ್ ಹೆದ್ದಾರಿಯಲ್ಲಿ ಕಾರನ್ನು 100 ಮೀಟರ್ ದೂರ ಎಳೆದೊಯ್ದ ಟ್ರಕ್
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಮಕ್ಕಳ ಮಾನಸಿಕ, ದೈಹಿಕ ಆರೋಗ್ಯಕ್ಕೆ ಈ ಯೋಗಗಳು ಒಳ್ಳೆಯದು
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!
ಬಿಜೆಪಿ ಭಿನ್ನರ ಸಭೆಯಲ್ಲಿ ಪ್ರತ್ಯಕ್ಷ: ಕೊನೆಗೂ ಸ್ಪಷ್ಟನೆ ಕೊಟ್ಟ ಸೋಮಣ್ಣ!