AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿ ಆಯ್ಕೆ ಮಾಡಿ: ಮತದಾರರಲ್ಲಿ ಮೋದಿ ಮನವಿ

ಬಿಜೆಪಿಯಿಂದ ಮಾತ್ರ ಮಧ್ಯಪ್ರದೇಶವನ್ನು 21ನೇ ಶತಮಾನದ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನಾಗಿ ಮಾಡಲು ಸಾಧ್ಯ ಎಂಬ ಅಚಲ ನಂಬಿಕೆಯನ್ನು ಜನರು ಹೊಂದಿದ್ದಾರೆ. ಮಧ್ಯಪ್ರದೇಶದ ಜನರು ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳನ್ನು ನೋಡುತ್ತಿದ್ದಾರೆ ಮತ್ತು ಅದರ ಅಗತ್ಯವನ್ನು ಸಹ ಅರ್ಥಮಾಡಿಕೊಳ್ಳುತ್ತಿದ್ದಾರೆ.

ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿ ಆಯ್ಕೆ ಮಾಡಿ: ಮತದಾರರಲ್ಲಿ ಮೋದಿ ಮನವಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on: Nov 15, 2023 | 2:27 PM

Share

ದೆಹಲಿ ನವೆಂಬರ್ 15: ಈ ಬಾರಿಯ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯ(Madhya Pradesh Election) ಪ್ರಚಾರ, ಬದಲಿಗೆ ಸಾರ್ವಜನಿಕರಿಂದ ಆಶೀರ್ವಾದ ಪಡೆಯುವ ಅಭಿಯಾನ ಬಹಳ ವಿಶೇಷವಾಗಿತ್ತು. ರಾಜ್ಯದ ಮೂಲೆ ಮೂಲೆಗೂ ಹೋಗಿ ಹಲವು ಜನರನ್ನು ಭೇಟಿ ಮಾಡಿ ಸಂವಾದ ನಡೆಸಿದ್ದೇನೆ. ಬಿಜೆಪಿ ಮೇಲೆ ಜನರಿಗೆ ಇರುವ ಪ್ರೀತಿ, ಬಿಜೆಪಿ (BJP) ಮೇಲೆ ಇಟ್ಟಿರುವ ನಂಬಿಕೆಯೇ ನಮ್ಮ ದೊಡ್ಡ ಆಸ್ತಿ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಸಾಮಾಜಿಕ ಮಾಧ್ಯಮ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಈ ಚುನಾವಣೆಯಲ್ಲಿ ಮಧ್ಯಪ್ರದೇಶದ ಮಹಿಳಾ ಶಕ್ತಿಯೇ ಮುಂದೆ ಬಂದು ಬಿಜೆಪಿಯ ಬಾವುಟ ಹಾರಿಸುತ್ತಿದೆ. ಮಹಿಳಾ ಸಬಲೀಕರಣವು ಬಿಜೆಪಿಯ ಆದ್ಯತೆಯಂತೆಯೇ, ಅದೇ ರೀತಿ ಮಹಿಳೆಯರು ಬಿಜೆಪಿ ಸರ್ಕಾರವನ್ನು ತಮ್ಮ ಆದ್ಯತೆಯನ್ನಾಗಿ ಮಾಡಿದ್ದಾರೆ. ಇಂದಿನ ಹೊಸ ಪೀಳಿಗೆಯು ಭಾರತದ ಮುಂದಿನ 25 ವರ್ಷಗಳನ್ನು ಮತ್ತು ತಮ್ಮದೇ ಆದ 25 ವರ್ಷಗಳನ್ನು ಒಟ್ಟಿಗೆ ನೋಡುತ್ತಿದೆ. ಅದಕ್ಕಾಗಿಯೇ ನಮ್ಮ ಯುವಕರು ಅಭಿವೃದ್ಧಿ ಹೊಂದಿದ ಭಾರತದ ಸಂಕಲ್ಪವನ್ನು ಕಾರ್ಯರೂಪಕ್ಕೆ ತರುವ ಜವಾಬ್ದಾರಿಯನ್ನು ಪೂರೈಸಲು ಹೆಗಲಿಗೆ ಹೆಗಲು ಕೊಟ್ಟು ಮುಂದೆ ಬರುತ್ತಿದ್ದಾರೆ.

ಬಿಜೆಪಿಯಿಂದ ಮಾತ್ರ ಮಧ್ಯಪ್ರದೇಶವನ್ನು 21ನೇ ಶತಮಾನದ ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶವನ್ನಾಗಿ ಮಾಡಲು ಸಾಧ್ಯ ಎಂಬ ಅಚಲ ನಂಬಿಕೆಯನ್ನು ಜನರು ಹೊಂದಿದ್ದಾರೆ. ಮಧ್ಯಪ್ರದೇಶದ ಜನರು ಡಬಲ್ ಎಂಜಿನ್ ಸರ್ಕಾರದ ಪ್ರಯೋಜನಗಳನ್ನು ನೋಡುತ್ತಿದ್ದಾರೆ ಮತ್ತು ಅದರ ಅಗತ್ಯವನ್ನು ಸಹ ಅರ್ಥಮಾಡಿಕೊಳ್ಳುತ್ತಿದ್ದಾರೆ.

ಇದನ್ನೂ ಓದಿ: Tribal Pride Day: ಬಿರ್ಸಾ ಮುಂಡಾ ಜನ್ಮದಿನ, ಬುಡಕಟ್ಟು ಜನಾಂಗದ ಐಕಾನ್​​ನ ಪ್ರತಿಮೆಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

ಕಾಂಗ್ರೆಸ್‌ನ ವಂಶಾಡಳಿತ ರಾಜಕಾರಣ ಮತ್ತು ನಕಾರಾತ್ಮಕತೆಯ ಬಗ್ಗೆ ಮಧ್ಯಪ್ರದೇಶದವರು ಎಷ್ಟು ಕೋಪಗೊಂಡಿದ್ದಾರೆ ಎಂಬುದನ್ನು ನಾನು ರ‍್ಯಾಲಿಗಳಲ್ಲಿ ನೋಡಿದ್ದೇನೆ. ಮಧ್ಯಪ್ರದೇಶದ ಅಭಿವೃದ್ಧಿಗೆ ಕಾಂಗ್ರೆಸ್‌ಗೆ ದೂರದೃಷ್ಟಿ, ಮಾರ್ಗಸೂಚಿ ಇಲ್ಲ. ಅಭಿವೃದ್ಧಿ ಹೊಂದಿದ ಮಧ್ಯಪ್ರದೇಶಕ್ಕಾಗಿ ಬಿಜೆಪಿಯನ್ನು ಆಯ್ಕೆ ಮಾಡಿ, ಅಭಿವೃದ್ಧಿ ಹೊಂದಿದ ಭಾರತಕ್ಕಾಗಿ ಕಮಲವನ್ನು ಆಯ್ಕೆ ಮಾಡಿ ಎಂದು ಮಧ್ಯಪ್ರದೇಶದ ಎಲ್ಲಾ ಮತದಾರರನ್ನು ನಾನು ಕೇಳುತ್ತೇನೆ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ