AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್ನು ಆರು ದಿನ ಉಳಿದಿದೆ, ಯಾರನ್ನೂ ಬಿಡುವುದಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕಮಲ್ ನಾಥ್

ನಾನು ಇದನ್ನು ಪೃಥ್ವಿಪುರ ಮತ್ತು ನಿವಾರಿ ಆಡಳಿತಕ್ಕೆ ಹೇಳಲು ಬಯಸುತ್ತೇನೆ, ನೀವು ಏನು ಮಾಡುತ್ತಿದ್ದೀರಿ, ಅದನ್ನು ಎಚ್ಚರಿಕೆಯಿಂದ ಆಲಿಸಿ, ನಾಳೆಯ ದಿನ, ನೀವು ಮತ್ತು ನಾನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ, ಇನ್ನೂ ಆರು ದಿನಗಳು ಉಳಿದಿವೆ. ಜೋ ಕರ್ನಾ ಹೈ ಕರ್ ಲೇ.. ಪರ್ ಆಗೇ ಪಾಂಚ್ ಸಾಲ್ ಭಿ ಕಾಟ್ನಾ ಹೈ ಆಪ್ಕೋ (ನಿಮಗೆ ಏನು ಬೇಕೋ ಅದನ್ನು ಮಾಡಿ, ಆದರೆ ಮುಂದಿನ ಐದು ವರ್ಷಗಳನ್ನು ಸಹ ನೀವು ಕಳೆಯಬೇಕು) ಎಂದು ಅವರು ಹೇಳಿದರು.

ಇನ್ನು ಆರು ದಿನ ಉಳಿದಿದೆ, ಯಾರನ್ನೂ ಬಿಡುವುದಿಲ್ಲ: ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಕಮಲ್ ನಾಥ್
ಕಮಲ್ ನಾಥ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Nov 11, 2023 | 2:46 PM

Share

ಭೋಪಾಲ್ ನವೆಂಬರ್ 11: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ (Congress) ಹಿರಿಯ ನಾಯಕ ಕಮಲ್ ನಾಥ್ (Kamal Nath) ಅವರು ನಿವಾರಿ ಜಿಲ್ಲಾಡಳಿತಕ್ಕೆ (Niwari district administration)ಕಠಿಣ ಎಚ್ಚರಿಕೆ ನೀಡಿದ್ದು, ಮುಂದಿನ ಐದು ವರ್ಷಗಳ ಬಗ್ಗೆ ಯೋಚಿಸುವಾಗ ಕ್ರಮ ಎದುರಿಸುವುದಕ್ಕೂ  ಸಿದ್ಧರಾಗಿ ಎಂದು ಹೇಳಿದ್ದಾರೆ. ನಿವಾರಿಯಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಕಮಲ್ ನಾಥ್, ಆರೋಪಗಳನ್ನು ವಿವರಿಸದೇ, ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ನಾನು ಇದನ್ನು ಪೃಥ್ವಿಪುರ ಮತ್ತು ನಿವಾರಿ ಆಡಳಿತಕ್ಕೆ ಹೇಳಲು ಬಯಸುತ್ತೇನೆ, ನೀವು ಏನು ಮಾಡುತ್ತಿದ್ದೀರಿ, ಅದನ್ನು ಎಚ್ಚರಿಕೆಯಿಂದ ಆಲಿಸಿ, ನಾಳೆಯ ದಿನ, ನೀವು ಮತ್ತು ನಾನು ನಿರ್ಧಾರಗಳನ್ನು ತೆಗೆದುಕೊಳ್ಳುತ್ತೇವೆ. ಯಾರನ್ನೂ ಸುಮ್ಮನೆ ಬಿಡುವುದಿಲ್ಲ, ಇನ್ನೂ ಆರು ದಿನಗಳು ಉಳಿದಿವೆ. ಜೋ ಕರ್ನಾ ಹೈ ಕರ್ ಲೇ.. ಪರ್ ಆಗೇ ಪಾಂಚ್ ಸಾಲ್ ಭಿ ಕಾಟ್ನಾ ಹೈ ಆಪ್ಕೋ (ನಿಮಗೆ ಏನು ಬೇಕೋ ಅದನ್ನು ಮಾಡಿ, ಆದರೆ ಮುಂದಿನ ಐದು ವರ್ಷಗಳನ್ನು ಸಹ ನೀವು ಕಳೆಯಬೇಕು) ಎಂದು ಅವರು ಹೇಳಿದರು.

ಸ್ಥಳೀಯ ಆಡಳಿತಕ್ಕೆ ಕಾಂಗ್ರೆಸ್ ನಾಯಕ ಬೆದರಿಕೆ ಹಾಕಿರುವುದು ಇದೇ ಮೊದಲಲ್ಲ. ಜನವರಿಯಲ್ಲಿ, ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ನಿವಾರಿ ಜಿಲ್ಲೆಯ ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಎಚ್ಚರಿಕೆ ನೀಡಿದ್ದು, ಎಂಟು ತಿಂಗಳಲ್ಲಿ ಅವರನ್ನು ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಹೇಳಿದ್ದರು. ಪೊಲೀಸರು ಮಿತಿಮೀರಿದ ಮತ್ತು ಸುಳ್ಳು ಪ್ರಕರಣಗಳನ್ನು ದಾಖಲಿಸಿದ್ದಾರೆ ಎಂದು ಕಮಲ್ ನಾಥ್ ಆರೋಪಿಸಿದ್ದರು.

2018 ರಲ್ಲಿ ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿತು, ಕಮಲ್ ನಾಥ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಆದಾಗ್ಯೂ, 2020 ರಲ್ಲಿ 22 ಶಾಸಕರೊಂದಿಗೆ ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿಗೆ ಬದಲಾದ ನಂತರ ರಾಜಕೀಯ ಕ್ರಾಂತಿಯು ರಾಜ್ಯವನ್ನು ಅಲುಗಾಡಿಸಿತು. ತನ್ನ ಕೊನೆಯ ಸರ್ಕಾರದ ಪತನವನ್ನು ತಡೆಯಲು ವಿಫಲವಾದ ನಂತರ ಅವರು ಮಧ್ಯಪ್ರದೇಶದಲ್ಲಿ ಚುಕ್ಕಾಣಿ ಹಿಡಿಯುವ ನಿರೀಕ್ಷೆಯಲ್ಲಿದ್ದಾರೆ.

ಇದನ್ನೂ ಓದಿ: ಬಿವೈ ವಿಜಯೇಂದ್ರ ಕರ್ನಾಟಕ ಬಿಜೆಪಿ ಅಧ್ಯಕ್ಷ; ಇದು ಸ್ವಜನಪಕ್ಷಪಾತ ಎಂದ ಸುರ್ಜೇವಾಲಾ

ನವೆಂಬರ್ 17 ರಂದು ಒಂದೇ ಹಂತದಲ್ಲಿ ಚುನಾವಣೆಗೆ ಒಳಪಡುವ ಐದು ರಾಜ್ಯಗಳಲ್ಲಿ ಮಧ್ಯಪ್ರದೇಶವೂ ಒಂದಾಗಿದೆ ಮತ್ತು ಮತಗಳ ಎಣಿಕೆ ಡಿಸೆಂಬರ್ 3 ರಂದು ನಡೆಯಲಿದೆ. ಮತದಾರರು 230 ವಿಧಾನಸಭಾ ಕ್ಷೇತ್ರಗಳಿಂದ ಶಾಸಕರನ್ನು ಆಯ್ಕೆ ಮಾಡುತ್ತಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:41 pm, Sat, 11 November 23

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ