AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

N Biren Singh: 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟಕ್ಕೇರಲು ಸಜ್ಜಾದ ಹಿಗಾಂಗ್​ ಸರದಾರ ಬಿರೆನ್​ ಸಿಂಗ್​; ಕೈ ಬಿಟ್ಟು ಬಂದವರ ಅದೃಷ್ಟ !

ಎನ್​.ಬಿರೆನ್​ ಸಿಂಗ್​​ಗೆ ಈಗ 61 ವರ್ಷ. ಇವರ ಪೂರ್ತಿ ಹೆಸರು ನಾಂಗ್ತೋಂಬಮ್ ಬಿರೆನ್​ ಸಿಂಗ್. 1979ರಿಂದ 1993ರವರೆಗೆ ಸೇನೆಯಲ್ಲಿದ್ದವರು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡಿ ವಾಪಸ್ ಬಂದ ಮೇಲೆ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ.

N Biren Singh: 2ನೇ ಬಾರಿಗೆ ಮುಖ್ಯಮಂತ್ರಿ ಪಟ್ಟಕ್ಕೇರಲು ಸಜ್ಜಾದ ಹಿಗಾಂಗ್​ ಸರದಾರ ಬಿರೆನ್​ ಸಿಂಗ್​; ಕೈ ಬಿಟ್ಟು ಬಂದವರ ಅದೃಷ್ಟ !
ಎನ್​. ಬಿರೆನ್​ ಸಿಂಗ್​
TV9 Web
| Edited By: |

Updated on:Mar 10, 2022 | 3:10 PM

Share

ಮಣಿಪುರದಲ್ಲಿ ಎರಡು ಹಂತದಲ್ಲಿ ನಡೆದ ವಿಧಾನಸಭೆ ಚುನಾವಣೆ (Manipur Assembly Election)  ಮತ ಎಣಿಕೆ ಇಂದು ನಡೆಯುತ್ತಿದೆ. ಅಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದು, ಕಾಂಗ್ರೆಸ್​ ಎರಡನೇ ಸ್ಥಾನದಲ್ಲಿದೆ. ಹಿಗಾಂಗ್​ ಕ್ಷೇತ್ರದಲ್ಲಿ ಗೆದ್ದಿರುವ ಎನ್​.ಬಿರೆನ್​ ಸಿಂಗ್ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಹುದ್ದೆಗೆ ಏರುವ ಸಿದ್ಧತೆಯಲ್ಲಿದ್ದಾರೆ. ಇಂದು ಬೆಳಗ್ಗೆ ಮತ ಎಣಿಕೆಗೂ ಮೊದಲು ದೇವರಿಗೆ ಪೂಜೆ ಸಲ್ಲಿಸಿದ್ದ ಬಿರೆನ್​ ಸಿಂಗ್​, ಮುಂದಿನ ಐದುವರ್ಷದಲ್ಲೂ ಬಿಜೆಪಿ ಆಡಳಿತ ಇರಲಿದೆ ಎಂಬ ಭರವಸೆ ವ್ಯಕ್ತಪಡಿಸಿದ್ದರು. ಅದರಂತೆ ಅವರೀಗ ಸಿಎಂ ಹುದ್ದೆಗೆ ಮತ್ತೊಮ್ಮೆ ಏರಿದ್ದಾರೆ. ಎನ್​.ಬಿರೆನ್​ ಸಿಂಗ್​​ಗೆ ಈಗ 61 ವರ್ಷ. ಇವರ ಪೂರ್ತಿ ಹೆಸರು ನಾಂಗ್ತೋಂಬಮ್ ಬಿರೆನ್​ ಸಿಂಗ್. 1979ರಿಂದ 1993ರವರೆಗೆ ಸೇನೆಯಲ್ಲಿದ್ದವರು. ಗಡಿ ಭದ್ರತಾ ಪಡೆಯಲ್ಲಿ ಕೆಲಸ ಮಾಡಿ ವಾಪಸ್ ಬಂದ ಮೇಲೆ ಪತ್ರಕರ್ತರಾಗಿ ಕೆಲಸ ಮಾಡಿದ್ದಾರೆ. ಇವರೊಬ್ಬ ಫೂಟ್​ಬಾಲ್ ಆಟಗಾರ ಕೂಡ ಹೌದು. ಒಂದು ಬಹುಮುಖ ಪ್ರತಿಭೆಯುಳ್ಳ ವ್ಯಕ್ತಿತ್ವ ಎಂದರೆ ತಪ್ಪಾಗಲಾರದು.

ರಾಜಕೀಯ ಜೀವನ

ಎನ್. ಬಿರೆನ್​ ಸಿಂಗ್ ರಾಜಕೀಯಕ್ಕೆ ಸೇರಿದ್ದು 2002ರಲ್ಲಿ. ಮೊದಲು ಅವರು ಡೆಮಾಕ್ರಟಿಕ್ ರೆವಲ್ಯೂಷನರಿ ಪೀಪಲ್ಸ್ ಪಾರ್ಟಿ ಸೇರ್ಪಡೆಗೊಂಡು, ಹಿಗಾಂಗ್​​​ನಿಂದ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಗೆದ್ದಿದ್ದರು. ಆದರೆ 2003ರಲ್ಲಿ ಕಾಂಗ್ರೆಸ್​ ಪಕ್ಷಕ್ಕೆ ಸೇರಿದ್ದರು. 2007ರಲ್ಲಿ ಕಾಂಗ್ರೆಸ್​ನಿಂದ ಇದೇ ಕ್ಷೇತ್ರದಲ್ಲಿ ಗೆದ್ದರು. ಮಣಿಪುರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದಾಗ ಯುವಜನ ಅಭಿವೃದ್ಧಿ ಮತ್ತು ಕ್ರೀಡಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮತ್ತೆ 2012ರಲ್ಲೂ ಹೈಜಾಂಗ್ ಕ್ಷೇತ್ರದಿಂದ ಗೆದ್ದು, ಅದು ತಮಗೆ ಸೋಲುಣಿಸದ ಕ್ಷೇತ್ರ ಎಂಬುದನ್ನು ಸಾಧಿಸಿ ತೋರಿಸಿದರು. ಆದರೆ 2016ರ ಹೊತ್ತಿಗೆ ಮತ್ತೊಮ್ಮೆ ಪಕ್ಷಾಂತರ ಮಾಡಿದ ಅವರು ಬಿಜೆಪಿಗೆ ಸೇರ್ಪಡೆಯಾದರು. 2017ರ ವಿಧಾನಸಭೆ ಚುನಾವಣೆಯಲ್ಲಿ ಹಿಗಾಂಗ್​  ​​ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಗೆದ್ದಿದ್ದಾರೆ. ಬಳಿಕ ಇಲ್ಲಿ ಬಿಜೆಪಿ ಇನ್ನಿತರ ಪ್ರಾದೇಶಿಕ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಸರ್ಕಾರ ರಚನೆ ಮಾಡಿದ ನಂತರ ಎನ್. ಬಿರೆನ್​ ಸಿಂಗ್​ ಮುಖ್ಯಮಂತ್ರಿಯಾಗಿ ನೇಮಕಗೊಂಡರು.

ಕಾರ್ಯವೈಖರಿ ಹೇಗಿತ್ತು?

2017ರಲ್ಲಿ ಚುನಾವಣೆ ನಂತರ ಅದೇ ವರ್ಷ ಮಾರ್ಚ್​ 15ರಂದು ಎನ್​. ಬಿರೆನ್​ ಸಿಂಗ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಿದರು. ಮಣಿಪುರದ ಮೊದಲ ಬಿಜೆಪಿ ಮುಖ್ಯಮಂತ್ರಿ ಎಂಬ ಹೆಗ್ಗಳಿಕೆಗೂ ಪಾತ್ರರಾದರು.  2018ರಲ್ಲಿ ಮಣಿಪುರದ ಸಾರ್ವಜನಿಕ ಶಾಲೆಯ ಹೊಸ ಕಟ್ಟಡ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದಾರೆ. ಈ ಯೋಜನೆಯನ್ನು ಮಣಿಪುರ ಅಲ್ಪಸಂಖ್ಯಾತ ಮತ್ತು ಒಬಿಸಿ ಆರ್ಥಿಕ ಅಭಿವೃದ್ಧಿ ಸೊಸೈಟಿ ಕೈಗೆತ್ತಿಕೊಂಡಿದೆ. ಇದು ಸುಮಾರು 10.80 ಕೋಟಿ ರೂಪಾಯಿ ವೆಚ್ಚದ ಯೋಜನೆಯಾಗಿದೆ. ಈ ಹೊಸ ಕಟ್ಟಡದಲ್ಲಿ ತರಗತಿ ಕೋಣೆಗಳು, ಮುಖ್ಯ ಶಿಕ್ಷಕರ ಕೊಠಡಿ, ಕಾಮನ್​ ರೂಂ, ಲೈಬ್ರರಿ, ಪ್ರಯೋಗಾಲಯಗಳು, ಶೌಚಗೃಹಗಳು, ಬಾಲಕರು-ಬಾಲಕಿಯರಿಗೆ ಪ್ರತ್ಯೇಕ ಹಾಸ್ಟೆಲ್​ಗಳು ಇರಲಿವೆ.

ಹಾಗೇ, 2018ರಲ್ಲಿ ಬಿರೆನ್​ ಸಿಂಗ್, ಫರ್ಜಾಲ್ ಜಿಲ್ಲೆಯಲ್ಲಿ ಪರ್ಬಂಗ್​​ನಲ್ಲಿ ರಾಜ್ಯ ಮಟ್ಟದ ಶುಂಠಿ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಗುಡ್ಡಗಾಡು ಪ್ರದೇಶಗಳಲ್ಲಿ ಜನರು ಶುಂಠಿ ಕೃಷಿ ಮಾಡುತ್ತಿದ್ದು, ಅದಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಉತ್ಸವ ಪ್ರಾರಂಭಿಸಿದ್ದು, ಅಂದಿನಿಂದಲೂ ನಡೆದುಕೊಂಡು ಬಂದಿದೆ. ಇದರಿಂದ ಶುಂಠಿ ಬೆಳೆಗಾರರಿಗೆ ತುಂಬ ಅನುಕೂಲವಾಗಿದ್ದಾಗಿ ಅವರೇ ಹೇಳಿಕೊಂಡಿದ್ದಾರೆ.  ಇನ್ನು 2020ರಲ್ಲಿ ಒಂದು ಬಾರಿ ಮಣಿಪುರ ಬಿಜೆಪಿ ಸರ್ಕಾರದಲ್ಲಿ ಅಸ್ಥಿರತೆ ಮೂಡಿದ್ದರೂ, ಬಳಿಕ ಸರಿಯಾಗಿದೆ. ಈ ಬಾರಿಯೂ ಹಿಗಾಂಗ್​​ನಲ್ಲಿ 18 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದಿದ್ದಾರೆ.

ಇದನ್ನೂ ಓದಿ: Yogi Adityanath: ಯೋಗಿಯಿಂದ ನೊಯ್ಡಾದ ಶಾಪ ವಿಮೋಚನೆ​; ಅಪಶಕುನವಾಗಿದ್ದ ಸ್ಥಳಕ್ಕೆ ಹೋದರೂ ಗೆದ್ದ ಸಿಎಂ ಆದಿತ್ಯನಾಥ್!

Published On - 3:09 pm, Thu, 10 March 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ