ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​

ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಫೆಬ್ರವರಿ 27 ಮತ್ತು ಮಾರ್ಚ್​ 3ರಂದು ಮತದಾನ ನಡೆಯಲಿದೆ. ಹಾಗೇ, ಮಾರ್ಚ್ 3ರಂದು ಮತಎಣಿಕೆ ಇದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳನ್ನು ಗೆದ್ದುಕೊಂಡು, ಸಂಪೂರ್ಣ ಬಹುಮತಪಡೆದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು.

ಮಣಿಪುರ ವಿಧಾನಸಭೆ ಚುನಾವಣೆ; 40 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್​
ಕಾಂಗ್ರೆಸ್​ ಬಾವುಟ
Edited By:

Updated on: Jan 22, 2022 | 8:38 PM

ಮಣಿಪುರ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. 40 ಮಂದಿಯ ಲಿಸ್ಟ್ ಬಿಡುಗಡೆ ಮಾಡಿದ್ದು, ಮಣಿಪುರ ರಾಜ್ಯ ಮಾಜಿ ಮುಖ್ಯಮಂತ್ರಿ ಒಕ್ರಂ ಇಬೋಬಿ ಸಿಂಗ್ ಅವರು ತೌಬಲ್ ಕ್ಷೇತ್ರದಿಂದ ಕಣಕ್ಕಿಳಿದಿದ್ದಾರೆ. ಮಣಿಪುರ ಕಾಂಗ್ರೆಸ್ ಪ್ರಮುಖ ನಾಯಕ ತೊಕ್ಚೊಮ್ ಲೋಕೇಶ್ವರ್ ಸಿಂಗ್ ಅವರು ಖುಂಡ್ರಕ್‌ಪಾಮ್‌ ಕ್ಷೇತ್ರದಿಂದ ಹಾಗೂ ಪಂಗೆಜಂ ಶರತ್ ಚಂದ್ರ ಸಿಂಗ್ ಅವರು ಹೈಂಜಾಂಗ್​​ನಿಂದ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಇನ್ನುಳಿದಂತೆ ಮೊಹಮ್ಮದ್​ ಅಮೀನ್ ಶಾ ಅವರು ಖೇತ್ರಿಗಾವೋದಿಂದ ಮತ್ತು ಸೆರಾಮ್ ನೀಕೆನ್ ಸಿಂಗ್, ಥೋಂಗ್ಜು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮಣಿಪುರದಲ್ಲಿ ಒಟ್ಟು 60 ವಿಧಾನಸಭಾ ಕ್ಷೇತ್ರಗಳಿದ್ದು, ಫೆಬ್ರವರಿ 27 ಮತ್ತು ಮಾರ್ಚ್​ 3ರಂದು ಮತದಾನ ನಡೆಯಲಿದೆ. ಹಾಗೇ, ಮಾರ್ಚ್ 3ರಂದು ಮತಎಣಿಕೆ ಇದೆ. 2017ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 28 ಕ್ಷೇತ್ರಗಳನ್ನು ಗೆದ್ದುಕೊಂಡು, ಸಂಪೂರ್ಣ ಬಹುಮತಪಡೆದ ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಆದರೆ ನಂತರ ಹಲವು ನಾಯಕರು ಕಾಂಗ್ರೆಸ್ ಬಿಟ್ಟರು. ಅದಾದ ಬಳಿಕ ಬಿಜೆಪಿ ಅಲ್ಲಿ ನಾಗಾ ಪೀಪಲ್ಸ್​ ಫ್ರಂಟ್​ (NPF). ನ್ಯಾಶನಲ್​ ಪೀಪಲ್ಸ್ ಪಾರ್ಟಿ (NPP), ಲೋಕ ಜನಶಕ್ತಿ  ಪಾರ್ಟಿ (LJP) ಮತ್ತು ಇತರ ಸ್ವತಂತ್ರ ಅಭ್ಯರ್ಥಿಗಳೊಂದಿಗೆ ಸೇರಿ ಸರ್ಕಾರ ರಚನೆ ಮಾಡಿತ್ತು.  ಈ ಬಾರಿ ಚುನಾವಣೆಯಲ್ಲಿ ಮೊದಲ ಹಂತದಲ್ಲಿ 6 ಜಿಲ್ಲೆಗಳು ಮತ್ತು ಎರಡನೇ ಹಂತದಲ್ಲಿ 10 ಜಿಲ್ಲೆಗಳಲ್ಲಿ ಮತದಾನ ನಡೆಯಲಿದೆ.

ಅಂದಹಾಗೆ, ಮಣಿಪುರ ಸೇರಿ ಚುನಾವಣೆಯ ನಡೆಯಲಿರುವ ಎಲ್ಲ ಪಂಚರಾಜ್ಯಗಳಲ್ಲಿ ಚುನಾವಣಾ ಪ್ರಚಾರ ಸಭೆಗಳು, ರೋಡ್​ಶೋ, ರ್ಯಾಲಿಗಳು ಸೇರಿ ಭೌತಿಕ ಸಭೆಗಳಿಗೆ ಹೇರಲಾಗಿದ್ದ ನಿರ್ಬಂಧವನ್ನು ಚುನಾವಣಾ ಆಯೋಗ ಜನವರಿ 31ರವರೆಗೆ ವಿಸ್ತರಿಸಿದೆ. ಮೊಟ್ಟಮೊದಲು ಜನವರಿ 8ರಂದು ಸುದ್ದಿಗೋಷ್ಠಿ ನಡೆಸಿದ್ದ ಚುನಾವಣಾ ಆಯೋಗದ ಅಧಿಕಾರಿಗಳು ಐದು ರಾಜ್ಯಗಳಾದ ಗೋವಾ, ಮಣಿಪುರ, ಉತ್ತರಪ್ರದೇಶ, ಉತ್ತರಾಖಂಡ್​, ಪಂಜಾಬ್​​ಗಳಲ್ಲಿ ವಿಧಾನಸಭೆ ಚುನಾವಣೆಯ ದಿನಾಂಕವನ್ನು ಘೋಷಣೆ ಮಾಡಿತ್ತು. ಆದರೆ ಕೊರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳೂ ಜನವರಿ 15ರವರೆಗೆ  ರೋಡ್ ಶೋ, ಸಾರ್ವಜನಿಕ ಪ್ರಚಾರದ ನೆಪದಲ್ಲಿ ಜನರನ್ನು ಸೇರಿಸುವ, ಪ್ರಚಾರ ಸಭೆ, ರ್ಯಾಲಿಗಳನ್ನು ನಡೆಸುವಂತಿಲ್ಲ ಎಂದು ಹೇಳಿದ್ದರು. ನಂತರ ಜನವರಿ 15ರಂದು ಮತ್ತೊಮ್ಮೆ ಸಭೆ ನಡೆಸಿ, ನಿರ್ಬಂಧ ಅವಧಿಯನ್ನು ಜನವರಿ 22ರವರೆಗೆ ವಿಸ್ತರಣೆ ಮಾಡಿದ್ದರು.

ಇದನ್ನೂ ಓದಿ: ಬಾಡಿಗೆ ತಾಯ್ತನದ ಮೂಲಕ ಪಡೆಯುವ ಮಗು ರೆಡಿಮೇಡ್​ ಬೇಬಿ ಎಂದ ಲೇಖಕಿ; ಈಗ ಯಾಕೆ ಇಂಥ ಟ್ವೀಟ್​?-ನೆಟ್ಟಿಗರಿಂದ ಅಸಮಾಧಾನ

Web contact

TV9 Kannada

Read More
Follow Us