AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ; ಮನೆಯೊಂದರಲ್ಲಿ ಸ್ಫೋಟ, ಇಬ್ಬರು ದುರ್ಮರಣ

ಈ ಸ್ಫೋಟವುಂಟಾಗಲು ಕಾರಣ ಸಣ್ಣ ಫಿರಂಗಿ (ಮಾರ್ಟರ್​) ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್​​ಮಿನ್​ಲಾಲ್​ ಮತ್ತು 22 ವರ್ಷದ ಲ್ಯಾಂಗಿನ್ಸಾಂಗ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಗಂಭೀರ ಗಾಯಗೊಂಡು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ; ಮನೆಯೊಂದರಲ್ಲಿ ಸ್ಫೋಟ, ಇಬ್ಬರು ದುರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Feb 27, 2022 | 10:03 AM

Share

ಮಣಿಪುರ ವಿಧಾನಸಭೆ ಚುನಾವಣೆಗೆ (Manipur Assembly Election) ಇನ್ನೊಂದೇ ದಿನ ಬಾಕಿ ಇದೆ. ಇಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ಫೆ.20 ಮತ್ತು ಎರಡನೇ ಹಂತ ಮಾರ್ಚ್​5ಕ್ಕೆ ಇದ್ದು, ಮತ ಎಣಿಕೆ ಮಾರ್ಚ್​ 10ರಂದು ನಡೆಯುವುದು. ಈ ಮಧ್ಯೆ ಇಲ್ಲಿನ ಚುರಾಚಾಂದ್​ಪುರ ಜಿಲ್ಲೆಯ ಗಾಂಗ್ಪಿಮೌಲ್​​ ಎಂಬ ಹಳ್ಳಿಯ ಮನೆಯೊಂದರಲ್ಲಿ ಸ್ಫೋಟವುಂಟಾಗಿದ್ದು, 6ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಐವರು ಗಂಭೀರ ಗಾಯಗೊಂಡಿದ್ದಾರೆ.

ಈ ಸ್ಫೋಟವುಂಟಾಗಲು ಕಾರಣ ಸಣ್ಣ ಫಿರಂಗಿ (ಮಾರ್ಟರ್​) ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್​​ಮಿನ್​ಲಾಲ್​ ಮತ್ತು 22 ವರ್ಷದ ಲ್ಯಾಂಗಿನ್ಸಾಂಗ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಗಂಭೀರ ಗಾಯಗೊಂಡು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆ ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು, ಇನ್ನಿತರ ಭದ್ರತಾ ಪಡೆ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  ಸ್ಫೋಟದ ಸಂಬಂಧ ತನಿಖೆ ಶುರು ಮಾಡಿಕೊಂಡಿದ್ದಾರೆ.

ಜನವರಿ 8ರಂದು ಮಣಿಪುರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅದಾದ ಎರಡನೇ ದಿನದಲ್ಲಿ ಇಂಫಾಲ್​​ನ ಪಶ್ಚಿಮ ಜಿಲ್ಲೆಯ ಸಮುರೌನಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಅವರ ಸೋದರ ಸಂಬಂಧಿಯನ್ನು ಹತ್ಯೆ ಮಾಡಲಾಗಿತ್ತು.  ಅದಾದ ಬಳಿಕ ಈ ಸ್ಫೋಟ ನಡೆದಿದೆ. ಮನೆಯಲ್ಲಿ ಮಾರ್ಟರ್​ ಯಾಕಿತ್ತು? ಸ್ಫೋಟ ಉಂಟಾಗಿದ್ದು ಹೇಗೆ ಎಂಬಿತ್ಯಾದಿ ವಿಷಯಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

Published On - 9:54 am, Sun, 27 February 22

Follow Us
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು