AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ; ಮನೆಯೊಂದರಲ್ಲಿ ಸ್ಫೋಟ, ಇಬ್ಬರು ದುರ್ಮರಣ

ಈ ಸ್ಫೋಟವುಂಟಾಗಲು ಕಾರಣ ಸಣ್ಣ ಫಿರಂಗಿ (ಮಾರ್ಟರ್​) ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್​​ಮಿನ್​ಲಾಲ್​ ಮತ್ತು 22 ವರ್ಷದ ಲ್ಯಾಂಗಿನ್ಸಾಂಗ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಗಂಭೀರ ಗಾಯಗೊಂಡು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಮಣಿಪುರ ವಿಧಾನಸಭೆ ಚುನಾವಣೆಗೆ ಇನ್ನೊಂದೇ ದಿನ ಬಾಕಿ; ಮನೆಯೊಂದರಲ್ಲಿ ಸ್ಫೋಟ, ಇಬ್ಬರು ದುರ್ಮರಣ
ಪ್ರಾತಿನಿಧಿಕ ಚಿತ್ರ
TV9 Web
| Updated By: Lakshmi Hegde|

Updated on:Feb 27, 2022 | 10:03 AM

Share

ಮಣಿಪುರ ವಿಧಾನಸಭೆ ಚುನಾವಣೆಗೆ (Manipur Assembly Election) ಇನ್ನೊಂದೇ ದಿನ ಬಾಕಿ ಇದೆ. ಇಲ್ಲಿ ಎರಡು ಹಂತದಲ್ಲಿ ಮತದಾನ ನಡೆಯಲಿದ್ದು, ಮೊದಲ ಹಂತ ಫೆ.20 ಮತ್ತು ಎರಡನೇ ಹಂತ ಮಾರ್ಚ್​5ಕ್ಕೆ ಇದ್ದು, ಮತ ಎಣಿಕೆ ಮಾರ್ಚ್​ 10ರಂದು ನಡೆಯುವುದು. ಈ ಮಧ್ಯೆ ಇಲ್ಲಿನ ಚುರಾಚಾಂದ್​ಪುರ ಜಿಲ್ಲೆಯ ಗಾಂಗ್ಪಿಮೌಲ್​​ ಎಂಬ ಹಳ್ಳಿಯ ಮನೆಯೊಂದರಲ್ಲಿ ಸ್ಫೋಟವುಂಟಾಗಿದ್ದು, 6ವರ್ಷದ ಬಾಲಕ ಸೇರಿ ಇಬ್ಬರು ಮೃತಪಟ್ಟಿದ್ದಾರೆ. ಐವರು ಗಂಭೀರ ಗಾಯಗೊಂಡಿದ್ದಾರೆ.

ಈ ಸ್ಫೋಟವುಂಟಾಗಲು ಕಾರಣ ಸಣ್ಣ ಫಿರಂಗಿ (ಮಾರ್ಟರ್​) ಎಂದು ಹೇಳಲಾಗಿದ್ದು, ಮೃತರನ್ನು ಮಾಂಗ್​​ಮಿನ್​ಲಾಲ್​ ಮತ್ತು 22 ವರ್ಷದ ಲ್ಯಾಂಗಿನ್ಸಾಂಗ್​ ಎಂದು ಗುರುತಿಸಲಾಗಿದೆ. ಇವರಿಬ್ಬರೂ ಗಂಭೀರ ಗಾಯಗೊಂಡು, ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ಆ ಸ್ಥಳಕ್ಕೆ ಹಿರಿಯ ಪೊಲೀಸ್​ ಅಧಿಕಾರಿಗಳು, ಇನ್ನಿತರ ಭದ್ರತಾ ಪಡೆ ಸಿಬ್ಬಂದಿ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.  ಸ್ಫೋಟದ ಸಂಬಂಧ ತನಿಖೆ ಶುರು ಮಾಡಿಕೊಂಡಿದ್ದಾರೆ.

ಜನವರಿ 8ರಂದು ಮಣಿಪುರ ವಿಧಾನಸಭೆ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಅದಾದ ಎರಡನೇ ದಿನದಲ್ಲಿ ಇಂಫಾಲ್​​ನ ಪಶ್ಚಿಮ ಜಿಲ್ಲೆಯ ಸಮುರೌನಲ್ಲಿ ಬಿಜೆಪಿ ಕಾರ್ಯಕರ್ತ ಮತ್ತು ಅವರ ಸೋದರ ಸಂಬಂಧಿಯನ್ನು ಹತ್ಯೆ ಮಾಡಲಾಗಿತ್ತು.  ಅದಾದ ಬಳಿಕ ಈ ಸ್ಫೋಟ ನಡೆದಿದೆ. ಮನೆಯಲ್ಲಿ ಮಾರ್ಟರ್​ ಯಾಕಿತ್ತು? ಸ್ಫೋಟ ಉಂಟಾಗಿದ್ದು ಹೇಗೆ ಎಂಬಿತ್ಯಾದಿ ವಿಷಯಗಳ ಬಗ್ಗೆ ತನಿಖೆ ನಡೆಯುತ್ತಿದೆ.

ಇದನ್ನೂ ಓದಿ: ‘ನಾವೆಲ್ಲ ಸಹೋದರ ಸಹೋದರಿಯರು ಯುದ್ಧವನ್ನು ನಿಲ್ಲಿಸಿ’ ಎಂದು ಮನವಿ ಮಾಡಿದ ಪುಟ್ಟ ಬಾಲಕಿ: ವಿಡಿಯೋ ವೈರಲ್​

Published On - 9:54 am, Sun, 27 February 22

ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಕಿರೀಟಿ ಧಿಮಾಕು, ಕೊಬ್ಬಲ್ಲಿ ಬರುತ್ತಾನೆ ಅಂದಿಕೊಂಡಿದ್ವಿ: ರವಿಚಂದ್ರನ್
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಿರಿಯಾ ಮೇಲೆ ಇಸ್ರೇಲ್ ದಾಳಿ; ಲೈವ್ ಮಧ್ಯದಲ್ಲೇ ಓಡಿಹೋದ ಟಿವಿ ನಿರೂಪಕಿ
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ಸಂಧಾನದ ಮಾತು ನಡೆಯುವ ಬಗ್ಗೆ ನಿನ್ನೆ ವಿಜಯೇಂದ್ರ ಸುಳಿವು ನೀಡಿದ್ದರು
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ನಾನು ಮಂಗಳೂರು ಹುಡುಗಿ: ಹೆಮ್ಮೆಯಿಂದ ಹೇಳಿದ ಜೆನಿಲಿಯಾ ಡಿಸೋಜಾ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಿಗಂದೂರು ತೂಗು ಸೇತುವೆ ಮೇಲೆ ಸಂಚರಿಸುವುದೇ ಏನೋ ಒಂಥರಾ ಸಂತೋಷ, ಉಲ್ಲಾಸ
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ಸಾರಿಗೆ ನೌಕರರಿಗೆ 38 ತಿಂಗಳುಗಳ ಹಿಂಬಾಕಿ ಸರ್ಕಾರ ಕೊಡಬೇಕಿದೆ: ಸುಬ್ಬಾರಾವ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ನಿಗಮಗಳಿಗೆ ಸದಸ್ಯರ ನೇಮಕಾತಿ ಶೀಘ್ರದಲ್ಲಿ ನಡೆಯಲಿದೆ: ಪರಮೇಶ್ವರ್
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ಚಾಮುಂಡಿ ತಾಯಿ ಆಶೀರ್ವಾದ ಪಡೆದ ದೊಡ್ಮನೆ ಹುಡುಗ್ರು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ನಾನು ನೀಡಿದ ಚೆಕ್​ಗಳು ಬೌನ್ಸ್ ಆಗುವ ಚಾನ್ಸೇ ಇಲ್ಲ ಎಂದ ಕೆಜಿಎಫ್ ಬಾಬು
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ
ಬಾಲಸೋರ್​​ನಲ್ಲಿ ಬೃಹತ್ ಪ್ರತಿಭಟನೆ; ಪೊಲೀಸರಿಂದ ಜಲಫಿರಂಗಿ ಪ್ರಯೋಗ