AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Assembly Polls: ಮಣಿಪುರದಲ್ಲಿ ವಿಧಾನಸಭೆ ಚುನಾವಣೆ ಮೊದಲ ಹಂತದ ಮತದಾನ ಇಂದು; 173 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ

1721ಮತಕೇಂದ್ರಗಳಲ್ಲಿ 381 ಮತಗಟ್ಟೆಗಳ ಉಸ್ತುವಾರಿ ಸಂಪೂರ್ಣ ಮಹಿಳೆಯರದ್ದೇ ಆಗಿದೆ. ಅಂದರೆ ಅಲ್ಲಿ ಎಲ್ಲ ಅಧಿಕಾರಿಗಳೂ ಮಹಿಳೆಯರೇ ಆಗಿದ್ದಾರೆ. ಇನ್ನು ಸೈಕೋಟ್​​ ಎಂಬ ಮತಗಟ್ಟೆಯನ್ನು ವಿಕಲಚೇತನರೇ ನಿರ್ವಹಣೆ ಮಾಡುತ್ತಿದ್ದಾರೆ.

Manipur Assembly Polls: ಮಣಿಪುರದಲ್ಲಿ ವಿಧಾನಸಭೆ ಚುನಾವಣೆ ಮೊದಲ ಹಂತದ ಮತದಾನ ಇಂದು; 173 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
ಮಣಿಪುರ ಮತಗಟ್ಟೆ ಅಧಿಕಾರಿಗಳು
TV9 Web
| Edited By: |

Updated on: Feb 28, 2022 | 8:08 AM

Share

ಇಂದು ಮಣಿಪುರ ವಿಧಾನಸಭಾ ಚುನಾವಣೆ (Manipur Assembly Election 2022)ಮೊದಲ ಹಂತದ ಮತದಾನ ನಡೆಯುತ್ತಿದೆ. ಪೂರ್ವ ಇಂಫಾಲ್​​​, ಪಶ್ಚಿಮ ಇಂಫಾಲ್​, ಬಿಷ್ಣುಪುರ, ಚುರ್​ಚಾಂದ್​​ಪುರ, ಕಾಂಗೋಪ್ಕಿ ಜಿಲ್ಲೆಗಳ 38 ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣೆ ನಡೆಯುತ್ತಿದ್ದು, 173 ಅಭ್ಯರ್ಥಿಗಳು ಕಣದಲ್ಲಿದ್ದಾರೆ.  ರಾಜ್ಯದಲ್ಲಿ ಒಟ್ಟಾರೆ 60 ವಿಧಾನಸಭಾ ಕ್ಷೇತ್ರಗಳಿದ್ದು, ಉಳಿದ ಕ್ಷೇತ್ರಗಳಲ್ಲಿ ಮಾರ್ಚ್​ 5ರಂದು ಮತದಾನವಿದೆ. ಮಾರ್ಚ್​ 10ಕ್ಕೆ ಮತ ಎಣಿಕೆ ನಡೆಯಲಿದೆ.

ಇಂದು 12,09,439 ಮತದಾರರು ಮತ ಹಾಕಲಿದ್ದು, ಅದರಲ್ಲಿ 5,80,607 ಪುರುಷರು, 6,28,657 ಮಹಿಳೆಯರು, 125 ತೃತೀಯಲಿಂಗಿಗಳು ಇದ್ದಾರೆ. 38 ಕ್ಷೇತ್ರಗಳಿಂದ 1721 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ ಎಂದು ಮಣಿಪುರ ಮುಖ್ಯ ಚುನಾವಣಾಧಿಕಾರಿ ರಾಜೇಶ್​ ಅಗರ್​ವಾಲ್​ ತಿಳಿಸಿದ್ದಾರೆ. ಮತದಾನ ಬೆಳಗ್ಗೆ 7ಗಂಟೆಯಿಂದ ಶುರುವಾಗಿದ್ದು ಸಂಜೆ 4ರವರೆಗೆ ನಡೆಯಲಿದೆ. ಕೊರೊನಾ ಸೋಂಕು ತಗುಲಿ ಕ್ವಾರಂಟೈನ್​​ನಲ್ಲಿ ಇರುವವರೂ ಮತಗಟ್ಟೆಗೆ ಬಂದು ಮತ ಹಾಕಬಹುದು. ಆದರೆ ಇವರಿಗೆ ಮಧ್ಯಾಹ್ನ 3ರಿಂದ 4ಗಂಟೆವರೆಗೆ ಅವಕಾಶ ನೀಡಲಾಗಿದೆ.

1721ಮತಕೇಂದ್ರಗಳಲ್ಲಿ 381 ಮತಗಟ್ಟೆಗಳ ಉಸ್ತುವಾರಿ ಸಂಪೂರ್ಣ ಮಹಿಳೆಯರದ್ದೇ ಆಗಿದೆ. ಅಂದರೆ ಅಲ್ಲಿ ಎಲ್ಲ ಅಧಿಕಾರಿಗಳೂ ಮಹಿಳೆಯರೇ ಆಗಿದ್ದಾರೆ. ಇನ್ನು ಸೈಕೋಟ್​​ ಎಂಬ ಮತಗಟ್ಟೆಯನ್ನು ವಿಕಲಚೇತನರೇ ನಿರ್ವಹಣೆ ಮಾಡುತ್ತಿದ್ದಾರೆ. ಇಂದು ಚುನಾವಣೆ ಎದುರಿಸುತ್ತಿರುವ ಪ್ರಮುಖರ ಪೈಕಿ ಮಣಿಪುರ ಸಿಎಂ ಎನ್​.ಬಿರೆನ್​ ಸಿಂಗ್​ (ಹೈಜಾಂಗ್​), ವಿಧಾನಸಭೆ ಸ್ಪೀಕರ್​ ವೈ. ಖೇಮ್​ಚಾಂದ್​ ಸಿಂಗ್​ (ಸಿಂಗ್​​ಜಾಮೇಯ್​) ಉಪ ಮುಖ್ಯಮಂತ್ರಿ ಯಮ್ನಮ್​ ಜಾಯ್​​ಕುಮಾರ್​ ಸಿಂಗ್ (ಉರಿಪೊಕ್​), ಕಾಂಗ್ರೆಸ್​ ಮಣಿಪುರ ರಾಜ್ಯ ಮುಖ್ಯಸ್ಥ ಎನ್​. ಲೋಕೇಶ್​ (ನಾಂಬೋಲ್​​) ಇದ್ದಾರೆ. ಮಣಿಪುರ ಚುನಾವಣೆ ನಿಮಿತ್ತ ಬಿಗಿ ಬಂದೋಬಸ್ತ್​ ಕಲ್ಪಿಸಲಾಗಿದೆ.

ಪ್ರಧಾನಿ ಮೋದಿ ಟ್ವೀಟ್​

ಸಾಮಾನ್ಯವಾಗಿ ಎಲ್ಲ ಚುನಾವಣೆಗೂ ಪೂರ್ವ ಪ್ರಧಾನಮಂತ್ರಿ ನರೇಂದ್ರ ಮೋದಿ ಮಣಿಪುರ ವಿಧಾನಸಭೆ ಚುನಾವಣೆಗೂ ಪೂರ್ವ ಟ್ವೀಟ್​ ಮಾಡಿ, ಹೆಚ್ಚೆಚ್ಚು ಜನರು ಮತ ಚಲಾಯಿಸಲು ಕರೆ ನೀಡಿದ್ದಾರೆ. ಅದರಲ್ಲೂ ಯುವಜನರು ಮತ್ತು ಮೊದಲ ಬಾರಿಗೆ ಮತ ಹಾಕುತ್ತಿರುವವರು ತಪ್ಪದೆ ಮತಚಲಾಯಿಸಿ ಎಂದು ಹೇಳಿದ್ದಾರೆ.

ಇದನ್ನೂ ಓದಿ: Juice Therapy: ಯಾವ ಕಾಯಿಲೆಗೆ ಯಾವ ಜೂಸ್ ಕುಡಿದರೆ ಉತ್ತಮ, ಇಲ್ಲಿದೆ ಜೂಸ್ ಥೆರಪಿ

ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಬಗೆದಷ್ಟು ಐತಿಹಾಸಿಕ ಸಿದ್ದೇಶ್ವರ ದೇವಸ್ಥಾನ ರಹಸ್ಯ ಬಯಲು
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಪರಿಹಾರ ಕೊಡದಿದ್ದಕ್ಕೆ ಸೇಡಿಗಾಗಿ ವಿಧಾನಸೌಧ ಬಳಿಯ ಗಂಧದ ಮರ ಕಡಿದು ರೈತ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಕಮಲಾಕರ ಭಟ್​​​ನ ತನ್ನ ತಾಳಕ್ಕೆ ಕುಣಿಸುತ್ತಿರುವ ಸುಚಿತ್ರಾಳ ವಿಡಿಯೋ
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು
ಸಿನಿಮಾ ಸಬ್ಸಿಡಿ ಹೆಚ್ಚು ಮಾಡಿ: ನಿರ್ಮಾಪಕ ಕೆ ಮಂಜು