AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Manipur Assembly Polls: ಮಣಿಪುರ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಗುಂಡು ಹಾರಿಸಿಕೊಂಡು ಸಾವು; ಆತ್ಮಹತ್ಯೆಯಲ್ಲ

ಮತದಾನ ಪ್ರಾರಂಭವಾಗಿ ಅರ್ಧಗಂಟೆಯೂ ಕಳೆಯುವ ಮೊದಲೇ ಮಣಿಪುರ ಮುಖ್ಯಮಂತ್ರಿ ಎನ್​.ಬಿರೆನ್​ ಸಿಂಗ್​ ಮತ್ತು ರಾಜ್ಯಪಾಲ ಲಾ.ಗಣೇಶನ್​ ತಮ್ಮ ಮತ ಚಲಾಯಿಸಿದ್ದಾರೆ.

Manipur Assembly Polls: ಮಣಿಪುರ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸ್ ಅಧಿಕಾರಿ ಗುಂಡು ಹಾರಿಸಿಕೊಂಡು ಸಾವು; ಆತ್ಮಹತ್ಯೆಯಲ್ಲ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 28, 2022 | 5:40 PM

Share

ಇಂದು ಮಣಿಪುರ ವಿಧಾನಸಭೆ ಚುನಾವಣೆ (Manipur Assembly Election) ಮೊದಲ ಹಂತದ ಮತದಾನ ನಡೆಯುತ್ತಿದೆ. ಬೆಳಗ್ಗೆಯಿಂದಲೂ ಶಾಂತಿಯುತವಾಗಿ ಮತದಾನ ನಡೆಯುತ್ತಿದ್ದರೂ, ಚುರಚಾಂದ್​​ಪುರ ತಿಪೈಮುಖ್ ವಿಧಾನಸಭಾ ಕ್ಷೇತ್ರದಲ್ಲಿ ಒಂದು ದುರ್ಘಟನೆ ನಡೆದಿದೆ. ಚುನಾವಣಾ ಕರ್ತವ್ಯದಲ್ಲಿದ್ದ ನವೋರೆಮ್ ಇಬೋಚೌಬಾ ಎಂಬುವರು ಗುಂಡೇಟಿನಿಂದ ಮೃತಪಟ್ಟಿದ್ದಾರೆ. ಇವರು ತಾವು ಕೈಯಲ್ಲಿ ಹಿಡಿದಿದ್ದ ಬಂದೂಕಿನಿಂದ ಆಕಸ್ಮಿಕವಾಗಿ ತಮಗೇ ಫೈರಿಂಗ್​ ಮಾಡಿಕೊಂಡು ಮೃತಪಟ್ಟಿದ್ದಾಗಿ ಮುಖ್ಯ ಚುನಾವಣಾಧಿಕಾರಿ ರಾಜೇಶ್ ಅಗರ್​ವಾಲ್​ ಮಾಹಿತಿ ನೀಡಿದ್ದಾರೆ. ಮೃತ ಪೊಲೀಸ್ ಅಧಿಕಾರಿ ಕಕ್​​ಚಿಂಗ್​ ಜಿಲ್ಲೆಯವರು ಎಂದು ಹೇಳಲಾಗಿದೆ.

ಇಂದು ಬೆಳಗ್ಗೆ 7ಗಂಟೆಯಿಂದ ಮಣಿಪುರದಲ್ಲಿ ಮತದಾನ ಶುರುವಾಗಿದ್ದು, ಮಧ್ಯಾಹ್ನ 3ಗಂಟೆ ಹೊತ್ತಿಗೆ 67.53ರಷ್ಟು ಮತಚಲಾವಣೆಯಾಗಿತ್ತು. ಮಾರ್ಚ್​ 5ಕ್ಕೆ ಎರಡನೇ ಹಂತದ ಮತದಾನವಿದ್ದು, ಮಾರ್ಚ್​ 10ಕ್ಕೆ ಮತ ಎಣಿಕೆ ನಡೆಯಲಿದೆ. ಇಂದು ಬೆಳಗ್ಗೆ ಚುರ್​ಚಾಂದ್​ಪುರ ಜಿಲ್ಲೆಯಲ್ಲಿ ಕೂಡ ಬಿಜೆಪಿ ಮತ್ತು ಕಾಂಗ್ರೆಸ್​ ಪಕ್ಷಗಳ ಕಾರ್ಯಕರ್ತರ ನಡುವೆ ಸಂಘರ್ಷ ಏರ್ಪಟ್ಟಿತ್ತು. ಇದರಲ್ಲಿ ಇವಿಎಂ ಮಷಿನ್​ ಧ್ವಂಸಗೊಂಡಿದೆ. ಎನ್​ಪಿಪಿ ಅಭ್ಯರ್ಥಿಯ ವಾಹನಕ್ಕೆ ಹಾನಿಯಾಗಿದೆ ಎಂದೂ ವರದಿಯಾಗಿದೆ.

ಮತದಾನ ಪ್ರಾರಂಭವಾಗಿ ಅರ್ಧಗಂಟೆಯೂ ಕಳೆಯುವ ಮೊದಲೇ ಮಣಿಪುರ ಮುಖ್ಯಮಂತ್ರಿ ಎನ್​.ಬಿರೆನ್​ ಸಿಂಗ್​ ಮತ್ತು ರಾಜ್ಯಪಾಲ ಲಾ.ಗಣೇಶನ್​ ತಮ್ಮ ಮತ ಚಲಾಯಿಸಿದ್ದಾರೆ. ಪಶ್ಚಿಮ ಇಂಫಾಲ್​ ಜಿಲ್ಲೆಯ ಸಾಗೋಲ್​ಬಾದ್ ವಿಧಾನಸಭಾ ಕ್ಷೇತ್ರದ ಮತಗಟ್ಟೆಯೊಂದರಲ್ಲಿ ಮತದಾನ ಮಾಡಿದ ರಾಜ್ಯಪಾಲ ಗಣೇಶನ್​,  ಚುನಾವಣೆಯಲ್ಲಿ ಪ್ರತಿಯೊಬ್ಬರೂ ತಮ್ಮ ಮತಚಲಾಯಿಸಬೇಕು. ನಮ್ಮ ದೇಶದಲ್ಲಿ ಪ್ರಜಾಪ್ರಭುತ್ವ ಇದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವದ ಸಂಕೇತ ಎಂದು ಹೇಳಿದರು.

ಮೊದಲ ಹಂತದಲ್ಲಿ ಚುನಾವಣೆ ಎದುರಿಸಿದ ಪ್ರಮುಖರ ಪೈಕಿ ಮಣಿಪುರ ಸಿಎಂ ಎನ್​.ಬಿರೆನ್​ ಸಿಂಗ್​ (ಹೈಜಾಂಗ್​), ವಿಧಾನಸಭೆ ಸ್ಪೀಕರ್​ ವೈ. ಖೇಮ್​ಚಾಂದ್​ ಸಿಂಗ್​ (ಸಿಂಗ್​​ಜಾಮೇಯ್​) ಉಪ ಮುಖ್ಯಮಂತ್ರಿ ಯಮ್ನಮ್​ ಜಾಯ್​​ಕುಮಾರ್​ ಸಿಂಗ್ (ಉರಿಪೊಕ್​), ಕಾಂಗ್ರೆಸ್​ ಮಣಿಪುರ ರಾಜ್ಯ ಮುಖ್ಯಸ್ಥ ಎನ್​. ಲೋಕೇಶ್​ (ನಾಂಬೋಲ್​​) ಇದ್ದಾರೆ.

ಇದನ್ನೂ ಓದಿ: Video: ಉಕ್ರೇನ್​​ ಮೇಲೆ ರಷ್ಯಾ ಆಕ್ರಮಣ ಮಾಡಿದ ಬೆನ್ನಲ್ಲೇ ಯುಎಸ್​​ನಲ್ಲಿ ಭರ್ಜರಿ ಮಾರಾಟವಾಗ್ತಿದೆ ರಷ್ಯಾ ವೋಡ್ಕಾ; ಚರಂಡಿ ತುಂಬಿ ಹರಿಯುತ್ತಿದೆ !

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು