ಮಣಿಪುರದಲ್ಲಿ ಎರಡನೇ ಹಂತದ ಮತದಾನ; ನಾಗಾ ಜನಾಂಗದ ಪ್ರಭಾವ ಇರುವ ಕ್ಷೇತ್ರಗಳು ಬಿಜೆಪಿಗೆ ಸವಾಲು

ಮಣಿಪುರದ ಮತಗಟ್ಟೆಗಳಲ್ಲಿ ಕೊವಿಡ್​ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮತದಾರರು ಕ್ಯೂನಲ್ಲಿ ಅಂತರ ಕಾಯ್ದುಕೊಂಡು ನಿಂತು ಮತ ಚಲಾಯಿಸುತ್ತಿದ್ದಾರೆ.

ಮಣಿಪುರದಲ್ಲಿ ಎರಡನೇ ಹಂತದ ಮತದಾನ; ನಾಗಾ ಜನಾಂಗದ ಪ್ರಭಾವ ಇರುವ ಕ್ಷೇತ್ರಗಳು ಬಿಜೆಪಿಗೆ ಸವಾಲು
ಮಣಿಪುರದಲ್ಲಿ ಚುನಾವಣೆ
Follow us
| Updated By: Lakshmi Hegde

Updated on: Mar 05, 2022 | 8:20 AM

ದೆಹಲಿ: ಮಣಿಪುರದಲ್ಲಿ ಇಂದು ವಿಧಾನಸಭೆ ಚುನಾವಣೆ (Manipur Assembly Election) ಎರಡನೇ ಹಂತದ ಮತದಾನ ನಡೆಯುತ್ತಿದೆ. ಇಂದು ಮುಂಜಾನೆ 7ಗಂಟೆಯಿಂದ ಮತದಾನ ಶುರುವಾಗಿದೆ. ಎರಡನೇ ಹಂತದಲ್ಲಿ 10 ಜಿಲ್ಲೆಗಳ, 22 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದ್ದು, ಒಟ್ಟು 92 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಈ ಬಾರಿ ನಾಗಾ ಜನಾಂಗದವರ ಪ್ರಾಬಲ್ಯವಿರುವ ತೌಬಲ್​ ಜಿಲ್ಲೆ ಸೇರಿ, ಇನ್ನಿತರ ಗುಡ್ಡಪ್ರದೇಶಗಳಲ್ಲಿ ಮತದಾನ ನಡೆಯುತ್ತಿದ್ದು, ಬಿಜೆಪಿ ಪಾಲಿಗೆ ಸ್ವಲ್ಪ ಕಷ್ಟಕರ ಸ್ಥಳಗಳಾಗಿವೆ.

ಇಂದು ತೌಬಲ್​, ಚಾಂದೇಲ್​, ಉಕ್ರುಲ್​, ಸೇನಾಪಟಿ,  ತಮೆಂಗ್ಲಾಂಗ್ ಮತ್ತು ಜಿರಿಬಾಮ್ ಸೇರಿ ಒಟ್ಟು 10 ಜಿಲ್ಲೆಗಳಿಂದ ಸುಮಾರು 8.38 ಲಕ್ಷ ಜನರು ಮತದಾನ ಮಾಡಲಿದ್ದಾರೆ. ಈ ಹಂತದಲ್ಲಿ ಬಿಜೆಪಿಯ 22 ಅಭ್ಯರ್ಥಿಗಳು ಕಣದಲ್ಲಿದ್ದರೆ, ಕಾಂಗ್ರೆಸ್​​ನ 18, ನ್ಯಾಶನಲ್​ ಪೀಪಲ್​ ಪಾರ್ಟಿಯ 11, ಜನತಾ ದಳ್​-(ಯುನೈಟೆಡ್​) ಮತ್ತು ನಾಗಾ ಪೀಪಲ್ಸ್​ ಫ್ರಂಟ್​​ನ ತಲಾ 10 ಅಭ್ಯರ್ಥಿಗಳು ಇದ್ದಾರೆ.  ಹಾಗೇ, ಒಟ್ಟು 1,247 ಮತಗಟ್ಟೆಗಳು ಇದ್ದು, ಮಧ್ಯಾಹ್ನ 4ಗಂಟೆಯವರೆಗೆ ಮತದಾನ ನಡೆಯಲಿದೆ.

ಮಣಿಪುರದ ಮತಗಟ್ಟೆಗಳಲ್ಲಿ ಕೊವಿಡ್​ 19 ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದ್ದು, ಮತದಾರರು ಕ್ಯೂನಲ್ಲಿ ಅಂತರ ಕಾಯ್ದುಕೊಂಡು ನಿಂತು ಮತ ಚಲಾಯಿಸುತ್ತಿದ್ದಾರೆ. ಅಷ್ಟೇ ಅಲ್ಲ, ಮತದಾನ ನಡೆಯುತ್ತಿರುವ 100 ಮೀಟರ್​ ಅಂತರದಲ್ಲಿ ಫೋನ್​ ಬಳಕೆಗೆ ಅನುಮತಿ ಇಲ್ಲ. ಮಣಿಪುರದಲ್ಲಿ ಮೊದಲ ಹಂತದ ಮತದಾನ ಫೆ.28ರಂದು ನಡೆದಿತ್ತು. ಅಂದು ಕೆಲವು ಬೂತ್​​ಗಳಲ್ಲಿ ಸಂಘರ್ಷ ನಡೆದಿದ್ದು, ಚುರ್​ಚಾಂದ್​ ಪುರ ಜಿಲ್ಲೆಯ ಒಟ್ಟು 9 ಮತಗಟ್ಟೆಗಳಲ್ಲಿ ಮರುಮತದಾನಕ್ಕೆ ಚುನಾವಣಾ ಆಯೋಗ ಈಗಾಗಲೇ ಆದೇಶ ನೀಡಿದೆ.

ಈ ಹಂತದಲ್ಲಿ ಜನರು ಸ್ವತಂತ್ರವಾಗಿ ಮತ್ತು ನ್ಯಾಯಯುತವಾಗಿ ಮತದಾನ ಮಾಡುತ್ತಿದ್ದಾರೆಂಬುದನ್ನು ಖಚಿತಪಡಿಸಿಕೊಳ್ಳಿ ಎಂದು ಕಾಂಗ್ರೆಸ್​ ಚುನಾವಣಾ ಆಯೋಗಕ್ಕೆ ಹೇಳಿದೆ. ಅಲ್ಲದೆ, ಇಲ್ಲಿನ ಕೆಲವು ಉಗ್ರಸಂಘಟನೆಗಳು ಮತದಾರರನ್ನು ಬೆದರಿಸುತ್ತಿವೆ. ಈ ಮೂಲಕ ವಿಧಾನಸಭೆ ಚುನಾವಣೆ ಮೇಲೆ ಪ್ರಭಾವ ಬೀರುತ್ತಿವೆ ಎಂದು ಕಾಂಗ್ರೆಸ್​ ಆರೋಪಿಸಿದೆ. ಚುನಾವಣಾ ಆಯೋಗದ ಅಧಿಕಾರಿಗಳನ್ನು ಶುಕ್ರವಾರ ಭೇಟಿ ಮಾಡಿದ್ದ ಕಾಂಗ್ರೆಸ್​ ನಿಯೋಗ, ಇಲ್ಲಿನ ಬಿಜೆಪಿ ಸರ್ಕಾರ ಉಗ್ರರ ಗುಂಪಿಗೆ ಹಣ ಬಿಡುಗಡೆ ಮಾಡಿದೆ. ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಗುಪ್ತವಾಗಿ ಹಣ ನೀಡಿದೆ ಎಂದೂ ಆರೋಪಿಸಿದೆ.

ಇದನ್ನೂ ಓದಿ: Russia Ukraine War Live: ಅಮೆರಿಕ ಕಂಪನಿಗಳನ್ನು ನಿರ್ಬಂಧಿಸಿದ ರಷ್ಯಾ, ಉಕ್ರೇನ್​ನಿಂದ ಭಾರತೀಯರನ್ನು ಕರೆತರಲು ಸತತ ಪ್ರಯತ್ನ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್