AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meghalaya Election Result: ಅಮಿತ್ ಶಾಗೆ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕರೆ; ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಮನವಿ

ಅಮಿತ್ ಶಾ ಅವರಿಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

Meghalaya Election Result: ಅಮಿತ್ ಶಾಗೆ ಮೇಘಾಲಯ ಸಿಎಂ ಕಾನ್ರಾಡ್ ಸಂಗ್ಮಾ ಕರೆ; ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಮನವಿ
ಕಾನ್ರಾಡ್ ಸಂಗ್ಮಾImage Credit source: PTI
ಗಣಪತಿ ಶರ್ಮಾ
|

Updated on: Mar 02, 2023 | 6:44 PM

Share

ಶಿಲ್ಲಾಂಗ್: ವಿಧಾನಸಭೆ ಚುನಾವಣೆ ಫಲಿತಾಂಶ (Meghalaya Election Result) ಬಹುತೇಕ ಅಂತಿಮಗೊಂಡ ಬೆನ್ನಲ್ಲೇ ಮೇಘಾಲಯ (Meghalaya) ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ (Conrad Sangma) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಕರೆ ಮಾಡಿ ಮಾತನಾಡಿದ್ದು, ಸರ್ಕಾರ ರಚಿಸಲು ಬೆಂಬಲ ನೀಡುವಂತೆ ಕೋರಿದ್ದಾರೆ. ಸಂಗ್ಮಾ ನೇತೃತ್ವದ ಎನ್​ಪಿಪಿ ಬಹುಮತಕ್ಕೆ ಬೇಕಿರುವ ಸ್ಥಾನಗಳಿಗಿಂತ ಕೆಲವು ಸೀಟು ಕಡಿಮೆ ಹೊಂದಿದೆ. ಹೀಗಾಗಿ ಬಿಜೆಪಿ ಹಾಗೂ ಪಕ್ಷೇತರರ ನೆರವಿನಿಂದ ಸರ್ಕಾರ ರಚಿಸುವ ಲೆಕ್ಕಾಚಾರ ಹಾಕುತ್ತಿದೆ. ಸಂಗ್ಮಾ ಅವರ ಪಕ್ಷ 20 ಸ್ಥಾನಗಳಲ್ಲಿ ಗೆದ್ದಿರುವ ಬಗ್ಗೆ ಅಧಿಕೃತ ಘೋಷಣೆಯಾಗಿದೆ. 6 ಕ್ಷೇತ್ರಗಳಲ್ಲಿ ಪಕ್ಷದ ಅಭ್ಯರ್ಥಿಗಳು ಮುನ್ನಡೆ ಕಾಯ್ದುಕೊಂಡಿದ್ದು ಗೆಲ್ಲುವ ಭರವಸೆ ಹೊಂದಿದ್ದಾರೆ. ಹೀಗಾಗಿ ಸಂಗ್ಮಾ ಅವರು ಸರ್ಕಾರ ರಚನೆಗೆ ಕಾರ್ಯತಂತ್ರ ರೂಪಿಸಲು ಮುಂದಾಗಿದ್ದಾರೆ.

60 ಸ್ಥಾನಗಳ ಮೇಘಾಲಯ ವಿಧಾನಸಭೆಯಲ್ಲಿ ಬಹುಮತಕ್ಕೆ 31 ಸ್ಥಾನ ಅಗತ್ಯವಿದೆ. ಒಂದು ಕ್ಷೇತ್ರದ ಮತದಾನ ತಡೆಹಿಡಿಯಲಾಗಿತ್ತು. ಯುಡಪಿ 11 ಸ್ಥಾನ, ಕಾಂಗ್ರೆಸ್ ಹಾಗೂ ಟಿಎಂಸಿ ತಲಾ 5, ಬಿಜೆಪಿ 2 ಹಾಗೂ ಪಕ್ಷೇತರರು 10 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.

ಅಮಿತ್ ಶಾ ಅವರಿಗೆ ಮೇಘಾಲಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಕರೆ ಮಾಡಿ ಹೊಸ ಸರ್ಕಾರ ರಚನೆಗೆ ಬೆಂಬಲ ಕೋರಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಟ್ವೀಟ್ ಮಾಡಿದ್ದಾರೆ.

ಮೇಘಾಲಯ, ತ್ರಿಪುರಾ ಹಾಗೂ ನಾಗಾಲ್ಯಾಂಡ್ ರಾಜ್ಯಗಳ ಒಟ್ಟು 180 ಸ್ಥಾನಗಳಿಗೆ ಫೆಬ್ರುವರಿ 16 ಮತ್ತು 28ರಂದು ಮತದಾನ ನಡೆದಿತ್ತು. ತ್ರಿಪುರಾ ಹಾಗೂ ನಾಗಾಲ್ಯಾಂಡ್​ಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದ್ದು, ಮೇಘಾಲಯದಲ್ಲಿ ಜಿದ್ದಾಜಿದ್ದಿನ ಪೈಪೋಟಿ ಏರ್ಪಡಲಿದೆ ಎಂದು ಎಕ್ಸಿಟ್​ಪೋಲ್ ವರದಿಗಳು ಭವಿಷ್ಯ ನುಡಿದಿದ್ದವು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು