AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Temjen Imna Along: ಸಿನಿಮಾ ಡೈಲಾಗ್ ಟ್ವೀಟ್ ಮಾಡಿ ಚುನಾವಣೆಯಲ್ಲಿ ಗೆದ್ದ ಖುಷಿ ಹಂಚಿಕೊಂಡ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್

Nagaland Election Result ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಗೆದ್ದಿದ್ದಾರೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ರಾಜ್ಯದಲ್ಲಿ ಪ್ರಬಲ ಮುನ್ನಡೆ ಕಾಯ್ದುಕೊಂಡಿದೆ.

Temjen Imna Along: ಸಿನಿಮಾ ಡೈಲಾಗ್ ಟ್ವೀಟ್ ಮಾಡಿ ಚುನಾವಣೆಯಲ್ಲಿ ಗೆದ್ದ ಖುಷಿ ಹಂಚಿಕೊಂಡ ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲೋಂಗ್
ತೆಮ್ಜೆನ್ ಇಮ್ನಾ ಅಲೋಂಗ್
ರಶ್ಮಿ ಕಲ್ಲಕಟ್ಟ
|

Updated on:Mar 02, 2023 | 6:57 PM

Share

ಇದು 2023 ರ ಈಶಾನ್ಯ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಮುಂದುವರಿದಿದ್ದು, ಬಹುತೇಕ ಫಲಿತಾಂಶಗಳು ಪ್ರಕಟವಾಗಿವೆ. ತ್ರಿಪುರಾ, ಮೇಘಾಲಯ ಮತ್ತು ನಾಗಾಲ್ಯಾಂಡ್ (Nagaland) ಆಡಳಿತಾರೂಢ ನ್ಯಾಶನಲಿಸ್ಟ್ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಪಾರ್ಟಿ (NDPP) ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡು ಸ್ಪರ್ಧಿಸುತ್ತಿರುವುದರಿಂದ ತೀವ್ರ ಕುತೂಹಲ ಕೆರಳಿಸಿದೆ. ನಾಗಾಲ್ಯಾಂಡ್ ಸಚಿವ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ತಮ್ಮ ಹಾಸ್ಯದ ಮಾತುಗಳಿಂದ ಜನ ಪ್ರೀತಿ ಗಳಿಸಿದವರು. ಅವರ ಟ್ವೀಟ್ ಗಳು ಲವಲವಿಕೆಯಿಂದ ಕೂಡಿರುತ್ತವೆ. ನಾಗಾಲ್ಯಾಂಡ್ ಚುನಾವಣೆಯಲ್ಲಿ ಗೆದ್ದ ನಂತರ ಅಲಾಂಗ್ ಬಾಲಿವುಡ್ ಡೈಲಾಗ್ ಜತೆ ತಮ್ಮ ಫೋಟೊವೊಂದನ್ನು ಶೇರ್ ಮಾಡಿ ಗೆಲುವಿನ ಖುಷಿ ಹಂಚಿಕೊಂಡಿದ್ದಾರೆ.

ನಾಗಾಲ್ಯಾಂಡ್‌ನ ಅಲೋಂಗ್ಟಾಕಿ ಕ್ಷೇತ್ರದಿಂದ ತೇಮ್ಜೆನ್ ಇಮ್ನಾ ಅಲೋಂಗ್ ಗೆದ್ದಿದ್ದಾರೆ. ಮತ ಎಣಿಕೆ ಆರಂಭವಾಗುತ್ತಿದ್ದಂತೆ ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟ ರಾಜ್ಯದಲ್ಲಿ ಪ್ರಬಲ ಮುನ್ನಡೆ ಕಾಯ್ದುಕೊಂಡಿದೆ. ಒಮ್ಮೆ ಹಿನ್ನಡೆಯಾಗಿ ಮತ್ತೆ ಗೆಲುವಿನ ನಗೆ ಬೀರಿದ ಅಲಾಂಗ್, ಹಾರ್ ಕೇ ಜೀತ್ನೇವಾಲೋಂಕೋ …..ಕೆಹ್ತೆ ಹೈ ಎಂದು ನಾಗಾಲ್ಯಾಂಡ್ ನ ಸಾಂಪ್ರದಾಯಿಕ ಉಡುಗೆ ತೊಟ್ಟಿರುವ ಅವರ ಫೋಟೊವನ್ನು ಟ್ವೀಟ್ ಮಾಡಿದ್ದಾರೆ. ಶಾರುಖ್ ಖಾನ್-ಕಾಜೋಲ್ ನಟಿಸಿದ ಸೂಪರ್ ಹಿಟ್ ಬಾಲಿವುಡ್ ಚಿತ್ರ ಬಾಜಿಗರ್​​ನ ಡೈಲಾಗ್ ನ್ನು ಅಲಾಂಗ್ ಇಲ್ಲಿ ಬಳಸಿದ್ದಾರೆ.ಸಿನಿಮಾದಲ್ಲಿ ಶಾರುಖ್ ಖಾನ್, ಹಾರ್ ಕೇ ಜೀತ್ನೇವಾಲೋಂಕೋ ಬಾಜೀಗರ್ ಕೆಹ್ತೇ ಹೈ ಎಂದು ಹೇಳುತ್ತಾರೆ.

ಇದನ್ನೂ ಓದಿ: Tripura Election Results: ತ್ರಿಪುರಾದಲ್ಲಿ ಕಿಂಗ್ ಮೇಕರ್ ಆಗಲಿದೆಯೇ ಟಿಪ್ರಾ ಮೋಥಾ? ಯಾರಿದು ಪ್ರದ್ಯೋತ್ ಬಿಕ್ರಮ್ ಮಾಣಿಕ್ಯ ದೆಬ್ಬರ್ಮಾ?

ಪೋಸ್ಟ್ ಈಗಾಗಲೇ 31.4 ಲೈಕ್ ಮತ್ತು 1,724 ಬಾರಿ ರೀಟ್ವೀಟ್ ಆಗಿದೆ,. ನಾಗಾಲ್ಯಾಂಡ್‌ನಲ್ಲಿ ಸೋಮವಾರ (ಫೆಬ್ರವರಿ 27) ಮತದಾನ ನಡೆದಿದೆ. ಬಿಜೆಪಿ-ಎನ್‌ಡಿಪಿಪಿ ಮೈತ್ರಿಕೂಟವು ಸ್ಥಾನಗಳಲ್ಲಿ ಗಣನೀಯ ಮುನ್ನಡೆಯೊಂದಿಗೆ ಆರಾಮದಾಯಕ ಗೆಲುವಿಗೆ ಸಿದ್ಧವಾಗಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:55 pm, Thu, 2 March 23

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು