AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಎಲ್​ ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು; ಏನಂದರು ಬಿಜೆಪಿ ರಾಜ್ಯಾಧ್ಯಕ್ಷ?

ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಕಾರಣ ಎಂಬ ಜಗದೀಶ ಶೆಟ್ಟರ್ ಆರೋಪಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿರುಗೇಟು ನೀಡಿದ್ದಾರೆ.

ಬಿಎಲ್​ ಸಂತೋಷ್ ವಿರುದ್ಧ ಶೆಟ್ಟರ್ ಆರೋಪಕ್ಕೆ ನಳಿನ್ ಕುಮಾರ್ ಕಟೀಲ್ ತಿರುಗೇಟು; ಏನಂದರು ಬಿಜೆಪಿ ರಾಜ್ಯಾಧ್ಯಕ್ಷ?
ನಳಿನ್ ಕುಮಾರ್ ಕಟೀಲು
ಗಣಪತಿ ಶರ್ಮಾ
|

Updated on:Apr 18, 2023 | 3:01 PM

Share

ಮಂಗಳೂರು: ಬಿಜೆಪಿಯಿಂದ ಟಿಕೆಟ್ ಕೈತಪ್ಪಲು ಪಕ್ಷದ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್​ ಸಂತೋಷ್ ಕಾರಣ ಎಂಬ ಜಗದೀಶ ಶೆಟ್ಟರ್ (Jagadish Shettar) ಆರೋಪಕ್ಕೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ (Nalin Kumar Kateel) ತಿರುಗೇಟು ನೀಡಿದ್ದಾರೆ. ಮಂಗಳೂರಿನಲ್ಲಿ ಮಾತನಾಡಿದ ಅವರು, ಯಾರೋ ಒಬ್ಬರ ನಿರ್ಣಯದಂತೆ ನಮ್ಮಲ್ಲಿ ಅಭ್ಯರ್ಥಿ ಆಯ್ಕೆ ಮಾಡಲಾಗುವುದಿಲ್ಲ. ಒಮ್ಮತದ ಅಭಿಪ್ರಾಯದ ಮೇಲೆ ಚುನಾವಣಾ ಪ್ರಕ್ರಿಯೆ ನಡೆಯುತ್ತದೆ. ಮತಗಟ್ಟೆ ಕಾರ್ಯಕರ್ತರ ವೋಟ್​​ ಮೂಲಕ ಅಭಿಪ್ರಾಯ ಸಂಗ್ರಹಿಸುತ್ತೇವೆ. ಶೆಟ್ಟರ್ ಪಾರ್ಟಿ ಅಧ್ಯಕ್ಷ ಆಗಿದ್ದವರು, ಸಾಮೂಹಿಕ ನಾಯಕತ್ವ ಗೊತ್ತಿದೆ. ಪಕ್ಷದಿಂದ ಹೊರಗೆ ಹೋಗಿ ಹೀಗೆಲ್ಲ ಮಾತನಾಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದು ಹೇಳಿದ್ದಾರೆ.

ಬಿಎಲ್ ಸಂತೋಷ್ ಸಂಘಟನೆ ಕಾರ್ಯ ಮಾಡುತ್ತಿದ್ದಾರೆ. ನಮ್ಮಲ್ಲಿ ಸಂಸದೀಯ ಮಂಡಳಿ, ಚುನಾವಣಾ ಸಮಿತಿ ಇವೆ. ಅವುಗಳ ಮೂಲಕ ಅಭ್ಯರ್ಥಿ ಆಯ್ಕೆ ಮಾಡಲಾಗುತ್ತದೆ. ನಮ್ಮ ಪಕ್ಷಕ್ಕೆ ಅದರದ್ದೇ ಆದ ಕೆಲವು ನಿಯಮಗಳಿವೆ. ಮಾನಸಿಕವಾಗಿ ಯಾವುದೋ ಕಾರಣಕ್ಕೆ ಶೆಟ್ಟರ್ ಪಕ್ಷ ತೊರೆದಿದ್ದಾರೆ. ಅವರನ್ನು ಕಾಂಗ್ರೆಸ್ ಹೇಗೆ ನಡೆಸಿಕೊಳ್ಳುತ್ತದೆ ಎಂಬುವುದನ್ನು ಕಾದು ನೋಡುತ್ತೇವೆ. ರಾಷ್ಟ್ರೀಯ ನಾಯಕರು ಅವರ ಮನೆ ಬಾಗಿಲಿಗೆ ಹೋದರೂ ಗೌರವ ಕೊಟ್ಟಿಲ್ಲ. ಹಿರಿಯರ ಮನವೊಲಿಕೆ ನಂತರವೂ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿದ್ದಾರೆ ಎಂದು ನಳಿನ್ ಕುಮಾರ್ ಹೇಳಿದ್ದಾರೆ.

ಪುತ್ತೂರಿನಲ್ಲಿ ಪುತ್ತಿಲ ಸ್ಪರ್ಧೆಯಿಂದ ಸಮಸ್ಯೆ ಇಲ್ಲ

ಪುತ್ತೂರಿನಲ್ಲಿ ಬಿಜೆಪಿ ವಿರುದ್ಧ ಬಂಡಾಯವೆದ್ದಿರುವ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾರೂ ಬೇಕಿದ್ದರೂ ಸ್ಪರ್ಧಿಸಬಹುದು. ತಮ್ಮ ಅಪೇಕ್ಷೆ ಈಡೇರದಿದ್ದಾಗ ನಾಮಪತ್ರ ಸಲ್ಲಿಸುತ್ತಾರೆ. ಪುತ್ತೂರು ಬಿಜೆಪಿಯ ಭದ್ರಕೋಟೆ. ಇಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ. ನಮ್ಮ ಕಾರ್ಯಕರ್ತರು ರಾಷ್ಟ್ರೀಯ ವಿಚಾರಧಾರೆ ಜೊತೆ ಕೈಜೋಡಿಸುತ್ತಾರೆ. ಬಿಜೆಪಿ ಯಾವುದನ್ನೂ ವಿರೋಧಿಸುವುದಿಲ್ಲ, ನಮಗೆ ಗೆಲುವಾಗಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ನನಗೆ ಮಾತ್ರವಲ್ಲ ರಾಮದಾಸ್​ಗೂ ಟಿಕೆಟ್​ ತಪ್ಪಿಸಿದ್ದು ಬಿಎಲ್​ ಸಂತೋಷ್​: ಸಾಲು ಸಾಲು ಆರೋಪಗಳನ್ನು ಮಾಡಿದ ಜಗದೀಶ್ ಶೆಟ್ಟರ್

ಪುತ್ತೂರಿನಲ್ಲಿ ಅರುಣ್ ಪುತ್ತಿಲ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದರಿಂದ ಬಿಜೆಪಿಗೆ ಹಿನ್ನಡೆಯಾಗಲಿದೆ ಎಂದೇ ವಿಶ್ಲೇಷಿಸಲಾಗುತ್ತಿದೆ. ಈ ಮಧ್ಯೆ, ಪುತ್ತಿಲ ಅವರ ನಾಮಪತ್ರ ಸಲ್ಲಿಕೆ ವೇಳೆ ಸುಮಾರು ಹತ್ತು ಸಾವಿರ ಜನ ಸೇರಿರುವುದು ಬಿಜೆಪಿ ಪಾಳಯದಲ್ಲಿ ಆತಂಕ ಮೂಡಿಸಿದೆ ಎನ್ನಲಾಗಿದೆ. ಈ ಎಲ್ಲ ಬೆಳವಣಿಗೆಗಳ ಹಿನ್ನೆಲೆಯಲ್ಲಿ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣೆ ತಾಜಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 2:58 pm, Tue, 18 April 23

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ