AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಬದುಕಿರುವವರೆಗೂ ದಲಿತರು, ಆದಿವಾಸಿಗಳ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ

ಕಾಂಗ್ರೆಸ್, ಟಿಎಂಸಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳು ಅವರ ಮತಬ್ಯಾಂಕ್ ಅನ್ನು ಬೆಂಬಲಿಸುತ್ತಿವೆ, ಆದರೆ ಇಂದು, ಮೋದಿ ಬದುಕಿರುವವರೆಗೂ ದಲಿತರು ಅಥವಾ ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನಿಮಗೆ ಭರವಸೆ ನೀಡಲು ನಾನು ಇಲ್ಲಿದ್ದೇನೆ. ಮೋದಿ ವಂಚಿತರ ಹಕ್ಕುಗಳ ಕಾವಲುಗಾರ. ಇದು ರಾಜಕೀಯ ಭಾಷಣವಲ್ಲ, ಇದು ಮೋದಿಯವರ ಗ್ಯಾರೆಂಟಿ ಎಂದ ಪ್ರಧಾನಿ.

ನಾನು ಬದುಕಿರುವವರೆಗೂ ದಲಿತರು, ಆದಿವಾಸಿಗಳ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ: ಪ್ರಧಾನಿ ಮೋದಿ
ನರೇಂದ್ರ ಮೋದಿ
ರಶ್ಮಿ ಕಲ್ಲಕಟ್ಟ
|

Updated on:May 23, 2024 | 6:43 PM

Share

ಭಿವಾನಿ, ಹರ್ಯಾಣ ಮೇ 23: ಕಲ್ಕತ್ತಾ ಹೈಕೋರ್ಟ್ 2010 ರ ನಂತರ ರಾಜ್ಯದಲ್ಲಿ ನೀಡಲಾದ ಎಲ್ಲಾ ಒಬಿಸಿ (OBC) ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ನಂತರ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ (TMC) ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ (Narendra Modi), ನಾನು ಬದುಕಿರುವವರೆಗೆ ದಲಿತರು ಮತ್ತು ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ಗುರುವಾರ ಹೇಳಿದ್ದಾರೆ.  ಹರ್ಯಾಣದ ಭಿವಾನಿಯಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ರಾತ್ರೋರಾತ್ರಿ ಮುಸ್ಲಿಮರಿಗೆ ಮತ್ತು ನುಸುಳುಕೋರರಿಗೆ ಒಬಿಸಿ ಪ್ರಮಾಣಪತ್ರಗಳನ್ನು ನೀಡಿದ್ದಾರೆ. ಕಳೆದ 10-12 ರಲ್ಲಿ ಮುಸ್ಲಿಮರಿಗೆ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ಹೈಕೋರ್ಟ್ ಅಸಿಂಧುಗೊಳಿಸಿದೆ. ಇಂಡಿಯಾ ಮೈತ್ರಿಕೂಟದ ಮನಸ್ಥಿತಿಯನ್ನು ನೋಡಿ, ಮುಸ್ಲಿಮರಿಗೆ ಒಬಿಸಿ ಮೀಸಲಾತಿ ನೀಡುತ್ತೇವೆ. ಹೈಕೋರ್ಟ್ ತೀರ್ಪನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಬಂಗಾಳದ ಮುಖ್ಯಮಂತ್ರಿ ಹೇಳಿದ್ದಾರೆ.

“ಕಾಂಗ್ರೆಸ್, ಟಿಎಂಸಿ ಮತ್ತು ಇಂಡಿಯಾ ಮೈತ್ರಿಕೂಟದ ಇತರ ಪಕ್ಷಗಳು ಅವರ ಮತಬ್ಯಾಂಕ್ ಅನ್ನು ಬೆಂಬಲಿಸುತ್ತಿವೆ, ಆದರೆ ಇಂದು, ಮೋದಿ ಬದುಕಿರುವವರೆಗೂ ದಲಿತರು ಅಥವಾ ಬುಡಕಟ್ಟು ಜನಾಂಗದವರ ಮೀಸಲಾತಿಯನ್ನು ಯಾರೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದು ನಿಮಗೆ ಭರವಸೆ ನೀಡಲು ನಾನು ಇಲ್ಲಿದ್ದೇನೆ. ಮೋದಿ ವಂಚಿತರ ಹಕ್ಕುಗಳ ಕಾವಲುಗಾರ. ಇದು ರಾಜಕೀಯ ಭಾಷಣವಲ್ಲ, ಇದು ಮೋದಿಯವರ ಗ್ಯಾರಂಟಿ ”ಎಂದು ಪ್ರಧಾನಿ ಹೇಳಿದ್ದಾರೆ.

ಇಂಡಿಯಾ ಬಣದ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ, “ಕಾಂಗ್ರೆಸ್ ಮತ್ತು ಇಂಡಿಯಾ ಮೈತ್ರಿಕೂಟದ ನಾಯಕರಿಗೆ ದೇಶಕ್ಕಿಂತ ಅವರ ಮತ ಬ್ಯಾಂಕ್ ಮುಖ್ಯವಾಗಿದೆ. ಈ ಜನರು ತಮ್ಮ ಮತ ಬ್ಯಾಂಕ್‌ಗಾಗಿ ದೇಶವನ್ನು ವಿಭಜಿಸಿದ್ದಾರೆ. ಅವರು ಒಂದು ಭಾರತವನ್ನು ಮತ್ತು ಎರಡು ಮುಸ್ಲಿಂ ರಾಷ್ಟ್ರಗಳನ್ನು ರಚಿಸಿದ್ದಾರೆ ಎಂದು ಹೇಳಿದ್ದಾರೆ.

2010 ರ ನಂತರ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಎಲ್ಲಾ ಒಬಿಸಿ ಪ್ರಮಾಣಪತ್ರಗಳನ್ನು ಕಲ್ಕತ್ತಾ ಹೈಕೋರ್ಟ್ ಬುಧವಾರ ರದ್ದುಗೊಳಿಸಿದೆ. 1993 ರ ಕಾಯಿದೆಗೆ ಅನುಗುಣವಾಗಿ ಒಬಿಸಿಗಳ ಹೊಸ ಪಟ್ಟಿಯನ್ನು ತಯಾರಿಸಲು ನ್ಯಾಯಾಲಯವು ಪಶ್ಚಿಮ ಬಂಗಾಳ ಹಿಂದುಳಿದ ವರ್ಗಗಳ ಆಯೋಗಕ್ಕೆ ನಿರ್ದೇಶನ ನೀಡಿದೆ.

2010ಕ್ಕಿಂತ ಮೊದಲು ಒಬಿಸಿ ಪಟ್ಟಿಯಲ್ಲಿದ್ದವರು ಉಳಿಯುತ್ತಾರೆ. ಆದಾಗ್ಯೂ, 2010 ರ ನಂತರ, ಒಬಿಸಿ ನಾಮನಿರ್ದೇಶನಗಳನ್ನು ರದ್ದುಗೊಳಿಸಲಾಗಿದೆ. ಸರಿಸುಮಾರು 5 ಲಕ್ಷ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಪಡಿಸಲು ನಿರ್ಧರಿಸಲಾಗಿದೆ. 2010 ರ ನಂತರ, ಒಬಿಸಿ ಕೋಟಾದ ಅಡಿಯಲ್ಲಿ ಉದ್ಯೋಗಗಳನ್ನು ಹೊಂದಿರುವವರು ಅಥವಾ ಅವುಗಳನ್ನು ಪಡೆಯುವ ಪ್ರಕ್ರಿಯೆಯಲ್ಲಿರುವವರನ್ನು ಕೋಟಾದಿಂದ ಹೊರಗಿಡಲಾಗುವುದಿಲ್ಲ. ಅವರ ಕೆಲಸದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದು ಹೈಕೋರ್ಟ್ ಹೇಳಿದ್ದಾರೆ.

ಕಲ್ಕತ್ತಾ ಹೈಕೋರ್ಟ್ 2010 ರ ನಂತರ ಪಶ್ಚಿಮ ಬಂಗಾಳದಲ್ಲಿ ನೀಡಲಾದ ಒಬಿಸಿ ಪ್ರಮಾಣಪತ್ರಗಳನ್ನು ರದ್ದುಗೊಳಿಸಿದ ನಂತರ, ಮಮತಾ ಬ್ಯಾನರ್ಜಿ, ನ್ಯಾಯಾಲಯದ ಈ ತೀರ್ಪನ್ನು ಒಪ್ಪಿಕೊಳ್ಳುವುದಿಲ್ಲ. ಒಬಿಸಿ ಮೀಸಲಾತಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊಲ್ಕತ್ತಾ ಹೈಕೋರ್ಟ್ ತೀರ್ಪಿ​ನಿಂದ ಇಂಡಿಯ ಬಣಕ್ಕೆ ಕಪಾಳಮೋಕ್ಷ; ಪಿಎಂ ಮೋದಿ ಪ್ರತಿಕ್ರಿಯೆ

ದುಮ್ಡಮ್ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಖರ್ದಾಹ್‌ನಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಮಮತಾ, “ಅತ್ಯಂತ ಪ್ರಸಿದ್ಧರಾಗಿರುವ ನ್ಯಾಯಾಧೀಶರು ಆದೇಶವನ್ನು ಹೊರಡಿಸುವುದನ್ನು ನಾನು ಕೇಳಿದೆ. ಅಲ್ಪಸಂಖ್ಯಾತರು ತಪಶೀಲಿ ಮೀಸಲಾತಿಯನ್ನು ಕಸಿದುಕೊಳ್ಳುತ್ತಾರೆ ಎಂದು ಪ್ರಧಾನಿ ಹೇಳುತ್ತಿದ್ದಾರೆ, ಇದು ಎಂದಾದರೂ ಆಗಬಹುದೇ? ಅಲ್ಪಸಂಖ್ಯಾತರು ತಪಶೀಲಿ ಅಥವಾ ಬುಡಕಟ್ಟು ಮೀಸಲಾತಿಯನ್ನು ಎಂದಿಗೂ ಮುಟ್ಟುವುದಿಲ್ಲ, ಆದರೆ ಈ ಕಿಡಿಗೇಡಿಗಳು (ಬಿಜೆಪಿ) ತಮ್ಮ ಕೆಲಸವನ್ನು ಏಜೆನ್ಸಿಗಳ ಮೂಲಕ ಮಾಡುತ್ತಾರೆ, ಅವರು ಯಾರದೋ ಮೂಲಕ ಆದೇಶ ಹೊರಡಿಸಿದ್ದಾರೆ. ಆದರೆ ನಾನು ಈ ಅಭಿಪ್ರಾಯವನ್ನು ಒಪ್ಪುವುದಿಲ್ಲ ಎ. ಆದೇಶ ನೀಡಿದವರು ಅದನ್ನು ತಮ್ಮಲ್ಲಿಯೇ ಇಟ್ಟುಕೊಳ್ಳಬೇಕು , ನಾವು ಬಿಜೆಪಿಯ ಅಭಿಪ್ರಾಯವನ್ನು ಸ್ವೀಕರಿಸುವುದಿಲ್ಲ, ಒಬಿಸಿ ಮೀಸಲಾತಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:41 pm, Thu, 23 May 24

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?