AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸನಾತನ ಧರ್ಮ ವಿರೋಧಿಸಿದ್ದೇ ಸೋಲಿಗೆ ಕಾರಣ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣ ಟೀಕೆ

ಸನಾತನ ಧರ್ಮವನ್ನು ವಿರೋಧಿಸುವುದನ್ನು ದೇಶದಲ್ಲಿ ಯಾರೂ ಒಪ್ಪಲು ಸಾಧ್ಯವಿಲ್ಲ. ಸನಾತನ ಧರ್ಮವನ್ನು ವಿರೋಧಿಸುತ್ತಲೇ ಬಂದರೆ ಕಾಂಗ್ರೆಸ್ ಸೋಲುತ್ತಲೇ ಹೋಗುತ್ತದೆ ಎಂದು ಅದೇ ಪಕ್ಷದ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಸನಾತನ ಧರ್ಮ ವಿರೋಧಿಸಿದ್ದೇ ಸೋಲಿಗೆ ಕಾರಣ: ಕಾಂಗ್ರೆಸ್ ನಾಯಕ ಆಚಾರ್ಯ ಪ್ರಮೋದ್ ಕೃಷ್ಣ ಟೀಕೆ
ಆಚಾರ್ಯ ಪ್ರಮೋದ್ ಕೃಷ್ಣImage Credit source: ANI
ಗಣಪತಿ ಶರ್ಮಾ
|

Updated on: Dec 03, 2023 | 4:03 PM

Share

ನವದೆಹಲಿ, ಡಿಸೆಂಬರ್ 3: ಐದು ರಾಜ್ಯಗಳಿಗೆ ನಡೆದ ವಿಧಾನಸಭೆ (Assembly Election Results 2023) ಚುನಾವಣೆಯ ಪೈಕಿ ನಾಲ್ಕು ರಾಜ್ಯಗಳ ಫಲಿತಾಂಶ ಭಾನುವಾರ ಬಹುತೇಕ ಪ್ರಕಟವಾಗಿದ್ದು, ಮೂರು ರಾಜ್ಯಗಳಲ್ಲಿ ಬಿಜೆಪಿ ಭರ್ಜರಿ ಗೆಲುವಿನತ್ತ ಮುಂದಡಿಯಿಟ್ಟಿದೆ. ರಾಜಸ್ಥಾನ, ಮಧ್ಯಪ್ರದೇಶ ಹಾಗೂ ಛತ್ತೀಸ್​ಗಢಗಳಲ್ಲಿ ಬಿಜೆಪಿ ಗೆಲುವಿನತ್ತ ಸಾಗಿದ್ದರೆ, ತೆಲಂಗಾಣದಲ್ಲಿ ಮಾತ್ರ ಕಾಂಗ್ರೆಸ್ ಬಹುಮತದತ್ತ ಸಾಗಿದೆ. ರಾಜಸ್ಥಾನ ಹಾಗೂ ಛತ್ತೀಸ್​ಗಢದಲ್ಲಿ ಆಡಳಿತದಲ್ಲಿದ್ದ ಕಾಂಗ್ರೆಸ್ ಅಧಿಕಾರ ಕಳೆದುಕೊಂಡಿದೆ. ಕಾಂಗ್ರೆಸ್ (Congress) ಪಕ್ಷದ ಈ ಸೋಲಿಗೆ ಸನಾತನ ಧರ್ಮವನ್ನು ವಿರೋಧಿಸಿದ್ದೇ ಕಾರಣ ಎಂದು ಅದೇ ಪಕ್ಷದ ಹಿರಿಯ ನಾಯಕ ಆಚಾರ್ಯ ಪ್ರಮೋದ್ ಕೃಷ್ಣಂ (Acharya Pramod Krishnam) ಅಭಿಪ್ರಾಯಪಟ್ಟಿದ್ದಾರೆ.

ಸನಾತನ ಧರ್ಮವನ್ನು ವಿರೋಧಿಸುವುದನ್ನು ದೇಶದಲ್ಲಿ ಯಾರೂ ಒಪ್ಪಲು ಸಾಧ್ಯವಿಲ್ಲ. ಸನಾತನ ಧರ್ಮವನ್ನು ವಿರೋಧಿಸುತ್ತಲೇ ಬಂದರೆ ಕಾಂಗ್ರೆಸ್ ಸೋಲುತ್ತಲೇ ಹೋಗುತ್ತದೆ. ಸನಾತನ ಧರ್ಮವನ್ನು ಕಾಂಗ್ರೆಸ್ ನಿರಂತರವಾಗಿ ವಿರೋಧಿಸುತ್ತಿದೆ. ಚುನಾವಣಾ ಕಣದಲ್ಲಿ ಜಾತಿ ರಾಜಕಾರಣದ ಮಾಡುವುದನ್ನು ದೇಶದ ಜನತೆ ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಆಚಾರ್ಯ ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಚುನಾವಣೆ ಗೆಲ್ಲಬೇಕಿದ್ದರೆ ಗಾಂಧಿ ಮಾರ್ಗ ಅನುಸರಿಸಬೇಕು: ಪ್ರಮೋದ್ ಕೃಷ್ಣಂ

ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲಬೇಕಾದರೆ ಮಹಾತ್ಮಾ ಗಾಂಧೀಜಿಯವರ ಮಾರ್ಗವನ್ನು ಅನುಸರಿಸಬೇಕು. ಆದರೆ ಕಾಂಗ್ರೆಸ್ ಪ್ರಸ್ತುತ ಮಾರ್ಕ್ಸ್ ಮಾರ್ಗವನ್ನು ಅನುಸರಿಸುತ್ತಿದೆ. ಈ ಸಂಪ್ರದಾಯ ಬದಲಾಗಬೇಕು. ಮಹಾತ್ಮ ಗಾಂಧಿಯವರ ಸಭೆಯು ‘ರಘುಪತಿ ರಾಘವ್ ರಾಜಾ ರಾಮ್’ ಅವರ ಸ್ತೋತ್ರದೊಂದಿಗೆ ಪ್ರಾರಂಭವಾಗುತ್ತಿತ್ತು. ಆದರೆ ಕೆಲವು ನಾಯಕರು ಸನಾತನ ಧರ್ಮವನ್ನೇ ವಿರೋಧಿಸುತ್ತಿದ್ದಾರೆ. ಅಂತಹ ನಾಯಕರನ್ನು ಕಾಂಗ್ರೆಸ್ ಪಕ್ಷದಿಂದ ಹೊರಹಾಕದಿದ್ದರೆ ಕಾಂಗ್ರೆಸ್ ಸ್ಥಿತಿ ಎಐಎಂಐಎಂನಂತಾಗುತ್ತದೆ. ಕಾಂಗ್ರೆಸ್ ನಾಯಕತ್ವ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸನಾತನದ ಧರ್ಮದ ವಿರೋಧವೀಗ ನಮ್ಮನ್ನು ಆವರಿಸಿದೆ ಎಂದು ಪ್ರಮೋದ್ ಕೃಷ್ಣಂ ಹೇಳಿದ್ದಾರೆ.

ಇದನ್ನೂ ಓದಿ: ರಾಜಸ್ಥಾನದಲ್ಲಿ ಬಹುಮತದತ್ತ ಬಿಜೆಪಿ; ಯಾರಾಗ್ತಾರೆ ಸಿಎಂ? ಅತಂತ್ರವಾದರೆ ವಸುಂಧರಾ, ಬಹುಮತ ಬಂದರೆ ಬಾಲಕನಾಥ್ ಸಿಎಂ?

ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳ ಮೈತ್ರಿಕೂಟ ‘ಇಂಡಿಯಾ’ದ ಅಂಗವಾಗಿರುವ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಅವರು ಇತ್ತೀಚೆಗೆ ಸನಾತನ ಧರ್ಮ ಎಂಬುದು ಡೆಂಗ್ಯೂ, ಮಲೇರಿಯಾದಂತೆ. ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಇದಕ್ಕೆ ದೇಶದಾದ್ಯಂತ ತೀವ್ರ ವಿರೋಧ ವ್ಯಕ್ತವಾಗಿತ್ತು. ಕಾಂಗ್ರೆಸ್​ನ ಕೆಲವು ನಾಯಕರು ಸ್ಟಾಲಿನ್ ಹೇಳಿಕೆ ಸಮರ್ಥಿಸಿದ್ದರೆ ಇನ್ನು ಕೆಲವರು ಪ್ರತಿಕ್ರಿಯಿಸದೆ ಮೌನ ತಾಳಿದ್ದರು. ಚುನಾವಣಾ ಪ್ರಚಾರಗಳಲ್ಲಿ ಸನಾತನ ಧರ್ಮದ ವಿಚಾರವನ್ನೂ ಬಿಜೆಪಿ ಅವಕಾಶ ಸಿಕ್ಕಲ್ಲೆಲ್ಲ ಬಳಸಿಕೊಂಡಿತ್ತು.

ಇನ್ನಷ್ಟು ಚುನಾವಣೆ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Ganapathi Sharma
Ganapathi Sharma

ಕೇರಳದ ಕಾಸರಗೋಡು ಜಿಲ್ಲೆಯ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 13 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ