AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಮ್ಜೆನ್ ಇಮ್ನಾ ಅಲಾಂಗ್ ಅವರ ಅಭಿಪ್ರಾಯಗಳು ನಿಜವಾದ ಈಶಾನ್ಯವನ್ನು ಪ್ರತಿನಿಧಿಸುತ್ತವೆ: ನಾಗಾಲ್ಯಾಂಡ್ ಸಚಿವರ ಬಗ್ಗೆ ಮೋದಿ ಮೆಚ್ಚುಗೆ

Temjen Imna Along ದಿಮಾಪುರ್‌ನಲ್ಲಿ ಅಲಾಂಗ್ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ''ನಮ್ಮ ರಾಜ್ಯ ಬಿಜೆಪಿ ಅಧ್ಯಕ್ಷ ತೆಮ್ನಾ ಇಮ್ನಾ ಹೇಳುವ ವಿಷಯಗಳು ದೇಶಾದ್ಯಂತ ಪ್ರತಿಧ್ವನಿಸುತ್ತವೆ. ಅದು ಆನಂದವುಳ್ಳದ್ದಾಗಿದೆ ಎಂದಿದ್ದಾರೆ

ತೆಮ್ಜೆನ್ ಇಮ್ನಾ ಅಲಾಂಗ್ ಅವರ ಅಭಿಪ್ರಾಯಗಳು ನಿಜವಾದ ಈಶಾನ್ಯವನ್ನು ಪ್ರತಿನಿಧಿಸುತ್ತವೆ: ನಾಗಾಲ್ಯಾಂಡ್ ಸಚಿವರ ಬಗ್ಗೆ ಮೋದಿ ಮೆಚ್ಚುಗೆ
ನಾಗಾಲ್ಯಾಂಡ್ ನಲ್ಲಿ ಮೋದಿ
ರಶ್ಮಿ ಕಲ್ಲಕಟ್ಟ
|

Updated on: Feb 24, 2023 | 2:29 PM

Share

ಅವರ ಅಭಿಪ್ರಾಯಗಳು ಜಗತ್ತಿಗೆ ನಿಜವಾದ ಈಶಾನ್ಯವನ್ನು ಪ್ರತಿನಿಧಿಸುತ್ತವೆ ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ  (Narendra Modi)ಅವರು ಶುಕ್ರವಾರ ತಮ್ಮ ಪಕ್ಷದ ನಾಯಕ ತೆಮ್ಜೆನ್ ಇಮ್ನಾ ಅಲಾಂಗ್ (Temjen Imna Along) ಅವರನ್ನು ಶ್ಲಾಘಿಸಿದ್ದಾರೆ. ಅಲಾಂಗ್ ಅವರ ತವರು ರಾಜ್ಯವಾದ ನಾಗಾಲ್ಯಾಂಡ್‌ನಲ್ಲಿ(Nagaland) ರ್ಯಾಲಿಯನ್ನು ಉದ್ದೇಶಿಸಿ ಮೋದಿ ಮಾತನಾಡುತ್ತಿದ್ದರು. ನಾಗಾಲ್ಯಾಂಡ್ ಬಿಜೆಪಿ ಮುಖ್ಯಸ್ಥರು ತಮ್ಮ ಅದ್ಭುತ ಹಾಸ್ಯಪ್ರಜ್ಞೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ತಮಾಷೆಯ ಪೋಸ್ಟ್‌ಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರು ತಮ್ಮ ಅಭಿಮಾನಿಗಳು ಮತ್ತು ಅನುಯಾಯಿಗಳಿಗೆ ಪ್ರಮುಖ ಜೀವನ ಸಲಹೆ, ಅವರ ವೈಯಕ್ತಿಕ ಜೀವನ ಮತ್ತು ಅವರ ರಾಜ್ಯದ ಸೌಂದರ್ಯದ ಬಗ್ಗೆ ಸದಾ ಅಪ್ಡೇಟ್ ನೀಡುತ್ತಿರುತ್ತಾರೆ.

ದಿಮಾಪುರ್‌ನಲ್ಲಿ ಅಲಾಂಗ್ ಕುರಿತು ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ,  ”ನಮ್ಮ ರಾಜ್ಯ ಬಿಜೆಪಿ ಅಧ್ಯಕ್ಷ ತೆಮ್ನಾ ಇಮ್ನಾ ಹೇಳುವ ವಿಷಯಗಳು ದೇಶಾದ್ಯಂತ ಪ್ರತಿಧ್ವನಿಸುತ್ತವೆ. ಅದು ಆನಂದವುಳ್ಳದ್ದಾಗಿದೆ ಎಂದಿದ್ದಾರೆ. ಅವರು ಡಿಜಿಟಲ್ ವೇದಿಕೆಯಲ್ಲಿ ನಾಗಾಲ್ಯಾಂಡ್ ಮತ್ತು ಇಡೀ ಈಶಾನ್ಯವನ್ನು ಸುಂದರವಾಗಿ ಪ್ರತಿನಿಧಿಸುತ್ತಾರೆ. ನಾನು ಕೂಡ ಅವರ ಎಲ್ಲಾ ಪೋಸ್ಟ್‌ಗಳನ್ನು ನೋಡಲು ಯಾವಾಗಲೂ ಪ್ರಯತ್ನಿಸುತ್ತೇನೆ ಎಂದು ಪ್ರಧಾನಿ ಹೇಳಿದರು.

ನಾಗಾಲ್ಯಾಂಡ್‌ನಲ್ಲಿ ಬಿಜೆಪಿ ಪರ ಪ್ರಚಾರ ನಡೆಸುತ್ತಿದ್ದ ಅಲಾಂಗ್ ಅವರು ಪ್ರಧಾನಿ ಮೋದಿಯವರ ಭಾಷಣವನ್ನು ರೀಟ್ವೀಟ್ ಮಾಡಿದ್ದರು. ಇದು ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು, ನಾಗಾಲ್ಯಾಂಡ್ ಸಚಿವರು ಟ್ವಿಟರ್‌ನಲ್ಲಿ ”ಗುರೂಜಿ” ರಾಜ್ಯದಲ್ಲಿರುವುದರಿಂದ ತುಂಬಾ ಸಂತೋಷವಾಗಿದೆ ಎಂದು ಹೇಳಿದ್ದಾರೆ. ಟ್ವೀಟ್‌ನಲ್ಲಿ ಅವರು ಬಿಜೆಪಿ ಸ್ಕಾರ್ಫ್ ಧರಿಸಿ ನಗುತ್ತಿರುವ ಚಿತ್ರ ಪೋಸ್ಟ್ ಮಾಡಿದ್ದಾರೆ.

ತಮ್ಮ ಭಾಷಣದಲ್ಲಿ, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಮೋದಿ, ಕಾಂಗ್ರೆಸ್ ಪಕ್ಷ ಈಶಾನ್ಯವನ್ನು ಎಟಿಎಂ ಆಗಿ ಬಳಸಿದೆ. ಆದರೆ ಬಿಜೆಪಿಯು ಈ ಪ್ರದೇಶದ ಎಂಟು ರಾಜ್ಯಗಳನ್ನು ‘ಅಷ್ಟಲಕ್ಷ್ಮಿ’ (ಲಕ್ಷ್ಮಿ ದೇವಿಯ ಎಂಟು ರೂಪಗಳು) ಎಂದು ಪರಿಗಣಿಸುತ್ತದೆ ಮತ್ತು ಅದರ ಶಾಂತಿ ಮತ್ತು ಅಭಿವೃದ್ಧಿಗಾಗಿ ಕೆಲಸ ಮಾಡುತ್ತಿದೆ.

ನಿಮ್ಮ ಸ್ವಂತ ಜನರ ಮೇಲೆ ಅಪನಂಬಿಕೆಯಿಂದ ದೇಶವನ್ನು ನಡೆಸಲಾಗುವುದಿಲ್ಲ ಆದರೆ ಅವರ ಸಮಸ್ಯೆಗಳನ್ನು ಗೌರವಿಸಿ ಮತ್ತು ಪರಿಹರಿಸುವ ಮೂಲಕ ಮಾತ್ರ ಅದನ್ನು ಮಾಡಲಾಗುತ್ತದೆ. ಈ ಹಿಂದೆ, ಈಶಾನ್ಯವು ವಿಭಜನೆಯ ರಾಜಕೀಯವನ್ನು ಹೊಂದಿತ್ತು, ನಾವು ಈಗ ಅದನ್ನು ದೈವಿಕ ಆಡಳಿತವಾಗಿ ಪರಿವರ್ತಿಸಿದ್ದೇವೆ. ಬಿಜೆಪಿಯು ಜನರನ್ನು ಧರ್ಮ ಅಥವಾ ಪ್ರದೇಶ ಮತ್ತು ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡುವುದಿಲ್ಲ.

ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ) ನಾಗಾಲ್ಯಾಂಡ್ ನಲ್ಲಿ ಅಧಿಕಾರ ನಡೆಸಲು ಶಾಂತಿ, ಪ್ರಗತಿ ಮತ್ತು ಸಮೃದ್ಧಿ ಎಂಬ ಮೂರು ಮಂತ್ರಗಳನ್ನು ಅಳವಡಿಸಿಕೊಂಡಿದೆ ಎಂದು ಪ್ರಧಾನಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ