ಎಲ್ಲಿ ಬುಲ್ಡೋಜರ್ ಚಲಾಯಿಸಬೇಕು ಎಂದು ಯೋಗಿ ಆದಿತ್ಯನಾಥ್ ಅವರಿಂದ ಕಲಿಯಿರಿ: ಮೋದಿ

|

Updated on: May 17, 2024 | 1:08 PM

ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಮ್ ಲಲ್ಲಾ ಮತ್ತೆ ಟೆಂಟ್‌ನಲ್ಲಿರಬೇಕಾಗುತ್ತದೆ. ಅವರು ರಾಮಮಂದಿರದ ಮೇಲೆ ಬುಲ್ಡೋಜರ್ ಓಡಿಸುತ್ತಾರೆ. ಎಲ್ಲಿ ಬುಲ್ಡೋಜರ್ ಓಡಿಸಬೇಕು ಮತ್ತು ಎಲ್ಲಿ ಓಡಿಸಬಾರದು ಅವರು ಯೋಗಿ ಜಿಯಿಂದ ಟ್ಯೂಷನ್ ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಎಲ್ಲಿ ಬುಲ್ಡೋಜರ್ ಚಲಾಯಿಸಬೇಕು ಎಂದು ಯೋಗಿ ಆದಿತ್ಯನಾಥ್ ಅವರಿಂದ ಕಲಿಯಿರಿ: ಮೋದಿ
ನರೇಂದ್ರ ಮೋದಿ
Follow us on

ಬಾರಾಬಂಕಿ ಮೇ 17: ಸಮಾಜವಾದಿ ಪಕ್ಷ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಅಯೋಧ್ಯೆಯ ರಾಮಮಂದಿರದ (Ram mandir) ಮೇಲೆ ಬುಲ್ಡೋಜರ್ ಚಲಾಯಿಸುತ್ತಾರೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಶುಕ್ರವಾರ ಹೇಳಿದ್ದಾರೆ. ಇಂಡಿಯಾ ಬ್ಲಾಕ್ ಮಿತ್ರಪಕ್ಷಗಳ ವಿರುದ್ಧ ತೀಕ್ಷ್ಣವಾದ ವ್ಯಂಗ್ಯವಾಡಿದ ಮೋದಿ, ಬುಲ್ಡೋಜರ್‌ಗಳನ್ನು ಎಲ್ಲಿ ಓಡಿಸಬೇಕೆಂದು ಕಲಿಯಲು ಮಾಜಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath) ಅವರಿಂದ ಟ್ಯೂಷನ್ ತೆಗೆದುಕೊಳ್ಳಬೇಕು ಎಂದು ಹೇಳಿದರು. “ಎಸ್‌ಪಿ ಮತ್ತು ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ರಾಮ್ ಲಲ್ಲಾ ಮತ್ತೆ ಟೆಂಟ್‌ನಲ್ಲಿರಬೇಕಾಗುತ್ತದೆ. ಅವರು ರಾಮಮಂದಿರದ ಮೇಲೆ ಬುಲ್ಡೋಜರ್ ಓಡಿಸುತ್ತಾರೆ. ಎಲ್ಲಿ ಬುಲ್ಡೋಜರ್ ಓಡಿಸಬೇಕು ಮತ್ತು ಎಲ್ಲಿ ಓಡಿಸಬಾರದು ಅವರು ಯೋಗಿ ಜಿಯಿಂದ ಟ್ಯೂಷನ್ ತೆಗೆದುಕೊಳ್ಳಬೇಕು ಎಂದು ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ನಡೆದ ರ‍್ಯಾಲಿಯಲ್ಲಿ ಪ್ರಧಾನಿ ಮೋದಿ ಹೇಳಿದ್ದಾರೆ.

ಯೋಗಿ ಆದಿತ್ಯನಾಥ್ ಅವರನ್ನು ಅವರ ಬೆಂಬಲಿಗರು ‘ಬುಲ್ಡೋಜರ್ ಬಾಬಾ’ ಎಂದೂ ಕರೆಯುತ್ತಾರೆ, ಏಕೆಂದರೆ ಅವರು ಅಕ್ರಮ ಕಟ್ಟಡಗಳು ಮತ್ತು ಅಪರಾಧಿಗಳು ಮತ್ತು ಗಲಭೆಕೋರರ ಮನೆಗಳನ್ನು ಕೆಡವಿದ್ದಾರೆ.

ಮೋದಿ ಭಾಷಣ


ಬಿಜೆಪಿ ನೇತೃತ್ವದ ಎನ್​​ಡಿಎ ದೇಶದ ಒಳಿತಿಗಾಗಿ ಕೆಲಸ ಮಾಡುತ್ತಿದೆ. ಮತ್ತೊಂದೆಡೆ, ಇಂಡಿಯಾ ಬ್ಲಾಕ್ ಗೊಂದಲಗಳನ್ನು ಸೃಷ್ಟಿಸುತ್ತಿದೆ. “ಚುನಾವಣೆಗಳು ಮುಂದುವರೆದಂತೆ, ಇಂಡಿಯಾ ಮೈತ್ರಿಕೂಟದ ಸದಸ್ಯರು ಬೇರೆಯಾಗುತ್ತಿದ್ದಾರೆ” ಎಂದು ಪ್ರಧಾನಿ ಹೇಳಿದ್ದಾರೆ. ದೇಶದಲ್ಲಿ ಅಸ್ಥಿರತೆಯನ್ನು ಹುಟ್ಟುಹಾಕುವ ಸಲುವಾಗಿ ಇಂಡಿಯಾ ಮೈತ್ರಿಕೂಟವು ಲೋಕಸಭೆ ಚುನಾವಣೆಯ ಕಣದಲ್ಲಿದೆ ಎಂದು ಹೇಳಿದ ಮೋದಿ, ಸತತ ಮೂರು ಲೋಕಸಭಾ ಚುನಾವಣೆಯಲ್ಲಿ ಗೆಲ್ಲುವ ಮೂಲಕ ನಮ್ಮ ಸರ್ಕಾರ ಹ್ಯಾಟ್ರಿಕ್ ಸಾಧನೆ ಮಾಡಲಿದೆ ಎಂದಿದ್ದಾರೆ.

ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪ್ರಧಾನಿ ಮೋದಿ,  ಅವರಿಗೆ ಮಮತಾ ಬ್ಯಾನರ್ಜಿ ಎಂಬ ಹೊಸ ಅತ್ತೆ ಸಿಕ್ಕಿದ್ದಾರೆ ಎಂದು ಹೇಳಿದ್ದಾರೆ.

“ಸಮಾಜವಾದಿ ಯುವರಾಜ (ಅಖಿಲೇಶ್ ಯಾದವ್) ಹೊಸ ಅತ್ತೆಯ (ಮಮತಾ ಬ್ಯಾನರ್ಜಿ) ಆಶ್ರಯವನ್ನು ಕಂಡುಕೊಂಡಿದ್ದಾರೆ. ಈ ಹೊಸ ಅತ್ತೆ ಬಂಗಾಳದಲ್ಲಿದ್ದಾರೆ. ಈ ಅತ್ತೆ ನಾನು ನಿಮಗೆ ಬಾಹ್ಯ ಬೆಂಬಲ ನೀಡುತ್ತೇನೆ ಎಂದು ಇಂಡಿಯಾ ಮೈತ್ರಿಕೂಟಕ್ಕೆ ಹೇಳಿದ್ದಾರೆ.

ಅಖಿಲೇಶ್ ಯಾದವ್ ಅವರು ತಮ್ಮ ಮಾಜಿ ಮಿತ್ರ, ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ಅವರನ್ನು ಬುವಾ (ಅತ್ತೆ) ಎಂದು ಕರೆಯುತ್ತಾರೆ.

ಅವರು ಅಧಿಕಾರಕ್ಕೆ ಬಂದರೆ ಅಯೋಧ್ಯೆ ಕುರಿತ ಸುಪ್ರೀಂ ಕೋರ್ಟ್‌ನ ತೀರ್ಪನ್ನು ರದ್ದುಗೊಳಿಸುವ ಕಾಂಗ್ರೆಸ್‌ನ  ಯೋಜನೆಯು ವಾಸ್ತವವಾಗಬಹುದು ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.

ಇದನ್ನೂ ಓದಿ: Swathi Maliwal Case: ನನ್ನ ಜತೆ ನಡೆದಿದ್ದು ತುಂಬಾ ಕೆಟ್ಟ ಘಟನೆ, ಕಳೆದ ಕೆಲ ದಿನಗಳು ತುಂಬಾ ಕಷ್ಟಕರವಾಗಿತ್ತು: ಸಂಸದೆ ಸ್ವಾತಿ ಮಲಿವಾಲ್

ಇದು ಹೇಗೆ ಸಾಧ್ಯ ಎಂದು ಕೆಲವರು ಆಶ್ಚರ್ಯ ಪಡಬಹುದು. ಯಾವುದೇ ಗೊಂದಲಕ್ಕೆ ಒಳಗಾಗಬೇಡಿ.ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ದೇಶವನ್ನು ವಿಭಜಿಸುವ ಬಗ್ಗೆ ಮಾತನಾಡುವಾಗ ಜನರು ದೇಶವನ್ನು ಇಬ್ಭಾಗ ಮಾಡಲು ಸಾಧ್ಯವಿಲ್ಲ ಎಂದು ಹೇಳುತ್ತಿದ್ದರು. ಆದಾಗ್ಯೂ, ಅದು ಸಂಭವಿಸಿತು, ಅವರು ಅದನ್ನು ಮಾಡಿದರು. ಅವರು ಯಾವುದೇ ಮಟ್ಟಕ್ಕೆ ಹೋಗಬಹುದು.ಅವರ ದಾಖಲೆ ಹೀಗಿದೆ. ಅವರಿಗೆ ದೇಶ ಏನೂ ಅಲ್ಲ, ಕುಟುಂಬ ಮತ್ತು ಅಧಿಕಾರವೇ ಸರ್ವಸ್ವ ಎಂದು ಮೋದಿ ಹೇಳಿದ್ದಾರೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:43 pm, Fri, 17 May 24