AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು: ಫೆ. 27ರಂದು ಬೆಳಗಾವಿಗೆ ಭೇಟಿ

ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ. 

ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ ಕಣ್ಣು: ಫೆ. 27ರಂದು ಬೆಳಗಾವಿಗೆ ಭೇಟಿ
ಪ್ರಧಾನಿ ಮೋದಿImage Credit source: hindustantimes.com
TV9 Web
| Updated By: ಗಂಗಾಧರ​ ಬ. ಸಾಬೋಜಿ|

Updated on:Feb 20, 2023 | 9:06 AM

Share

ಬೆಳಗಾವಿ: ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನು ಎರಡು ತಿಂಗಳು ಬಾಕಿ ಇದೆ. ಪಕ್ಷಗಳಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸಿನಿಂದ ನಡೆಯುತ್ತಿವೆ. ರಾಜ್ಯದ ಪ್ರಮುಖ ಮೂರು ಪಕ್ಷಗಳು ಮತದಾರರನ್ನು ಓಲೈಸಲು ಎಲ್ಲಾ ರೀತಿಯಿಂದಲೂ ಕಸರತ್ತು ಮಾಡುತ್ತಿದ್ದಾರೆ. ಇತ್ತ ಅತೀ ಹೆಚ್ಚು ವಿಧಾನಸಭಾ ಕ್ಷೇತ್ರದ ಮೇಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ಕಣ್ಣು ಇಟ್ಟಿದ್ದು, ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಮಾಸ್ಟರ್ ಪ್ಲ್ಯಾನ್ ಮಾಡುತ್ತಿದ್ದಾರೆ. ಈ ಹಿನ್ನೆಲೆ ಫೆಬ್ರವರಿ 27ರಂದು ಕುಂದಾನಗರಿ ಬೆಳಗಾವಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿಲಿದ್ದಾರೆ.

ಮೋದಿ ಭೇಟಿ ಹಿನ್ನೆಲೆ ಬಿಜೆಪಿ ನಾಯಕರು ಸಭೆ 

ಫೆ.27 ಪ್ರಧಾನಿ ನರೇಂದ್ರ ಮೋದಿ ಭೇಟಿ ಫಿಕ್ಸ್ ಹಿನ್ನೆಲೆ ಬೆಳಗಾವಿಯ ಸರ್ಕ್ಯೂಟ್ ಹೌಸ್​ನಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದರು. ಬಿಜೆಪಿ ಉಪಾಧ್ಯಕ್ಷ ನಿರ್ಮಲ್ ಕುಮಾರ್ ಸರಾನಾ ನೇತೃತ್ವದಲ್ಲಿ ಸಭೆ ಮಾಡಿದ್ದು, ಶಾಸಕರಾದ ಅಭಯ ಪಾಟೀಲ್, ಅನಿಲ್ ಬೆನಕೆ ಸೇರಿ ಅನೇಕರು ಪ್ರಮುಖರು ಭಾಗಿಯಾಗಿದ್ದರು.

ಇದನ್ನೂ ಓದಿ: JP Nadda Toure: 2 ದಿನ ಜೆಪಿ ನಡ್ಡಾ ರಾಜ್ಯ ಪ್ರವಾಸ, ಕರಾವಳಿ, ಮಲೆನಾಡು ಭಾಗದ ಪಕ್ಷ ಸಂಘಟನೆಗೆ ಕಸರತ್ತು; ಇಲ್ಲಿದೆ ವೇಳಾಪಟ್ಟಿ

ರೈಲು ನಿಲ್ದಾಣ ಉದ್ಘಾಟನೆ ಮಾಡಲಿರುವ ಪ್ರಧಾನಿ ಮೋದಿ

ಮದ್ಯಾಹ್ನ 2 ಗಂಟೆಗೆ ಆಗಮಿಸಿ 3.30ರ ವರೆಗೆ ಬೆಳಗಾವಿಗೆ ಆಗಮಿಸಲಿರುವ ಪ್ರಧಾನಿ ನರೇಂದ್ರ ಮೋದಿಯಿಂದ ಬೆಳಗಾವಿ ರೈಲು ನಿಲ್ದಾಣ ಉದ್ಘಾಟನೆ ಮಾಡಲಿದ್ದಾರೆ. ಬಳಿಕ ರೈತ ಸನ್ಮಾನ ನಿಧಿಯ ಎರಡನೇ ಕಂತಿನ ಹಣವನ್ನು ಬೆಳಗಾವಿಯಿಂದಲೇ ಬಿಡುಗಡೆ ಮಾಡಲಿದ್ದಾರೆ. ನಂತರ ಬೃಹತ್ ಬಹಿರಂಗ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ಮೋದಿ ಭಾಷಣ ಮಾಡಲಿದ್ದಾರೆ.

ಬಿಜೆಪಿ ಮಾಸ್ಟರ್ ಪ್ಲ್ಯಾನ್

ಸಾವಗಾಂವ್, ಜಿಲ್ಲಾ ಕ್ರೀಡಾಂಗಣ, ಮಾಲಿನಿ ಗಾರ್ಡನ್, ಸಿಪಿಎಡ್ ಮೈದಾನ ಜಾಗ ಪರಿಶೀಲನೆ ಮಾಡಿದ್ದು, ಭದ್ರತಾ ಅಧಿಕಾರಿಗಳ ತಂಡ ಪರಿಶೀಲನೆ ಬಳಿಕ ಸಮಾವೇಶ ಸ್ಥಳ ನಿಗದಿ ಮಾಡಲಾಗುತ್ತದೆ. ಜಿಲ್ಲೆಯ 18 ಕ್ಷೇತ್ರಗಳಿಂದ 3 ಲಕ್ಷಕ್ಕೂ ಹೆಚ್ಚು ಜನ ಸೇರಿಸಲು ಪ್ಲ್ಯಾನ್ ಮಾಡಲಾಗುತ್ತಿದೆ. ಆ ಮೂಲಕ ಬೆಳಗಾವಿಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಬಿಜೆಪಿ ಮಾಸ್ಟರ್ ಪ್ಲ್ಯಾನ್​ ರೂಪಿಸಿದೆ. ​

ರಾಜದ್ಯ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:06 am, Mon, 20 February 23

ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಮೆಸ್ಸಿ ಜೊತೆ ಮಗನನ್ನು ನಿಲ್ಲಿಸಿ ಫೋಟೋ ಕ್ಲಿಕ್ಕಿಸಿದ ಶಾರುಖ್ ಖಾನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ಜ 6ರಂದು ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ಶಾಸಕ ಇಕ್ಬಾಲ್ ಹುಸೇನ್
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ವೋಟ್ ಚೋರಿ ವಿರೋಧಿಸಿ ರಾಹುಲ್​​ ಗಾಂಧಿ ಪ್ರತಿಭಟನೆ: ಜೋಶಿ ಏನಂದ್ರು ನೋಡಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ದುಡ್ಡಿಲ್ಲವೆಂದು ಖಾಲಿ ಇರುವ 2 ಲಕ್ಷ ಹುದ್ದೆಗಳನ್ನ ಭರ್ತಿ ಮಾಡ್ತಿಲ್ಲ: ಜೋಶಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
ಜಡ್ಜ್ ಮಹಾಭಿಯೋಗಕ್ಕೆ ಸಹಿ ಹಾಕಿದ ಕಾಂಗ್ರೆಸ್ ಸಂಸದರು: ಜೋಶಿ ಏನಂದ್ರು ನೋಡಿ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
‘ಗೌರಿ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್​; ಆಗಸದಲ್ಲೇ ಮದುವೆ
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಸರಿ ನಿರ್ಧಾರ ಯಾವುದು? ತಪ್ಪು ಯಾವುದು? ಪಂಚಾಯ್ತಿ ವಿಷಯ ಹೇಳಿದ ಸುದೀಪ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಟ್ರ್ಯಾಕ್ಟರ್​ಗೆ ಡಿಕ್ಕಿ ಹೊಡೆದು ಕಾಂಪೌಂಡ್ ಗೇಟ್​​ಗೆ ಗುದ್ದಿದ BMTC ಬಸ್
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಕೋಲಾರ: ಬೆಳ್ಳಂಬೆಳಗ್ಗೆ ಬಸ್, ಕಾರುಗಳ ನಡುವೆ ಭೀಕರ ಸರಣಿ ಅಪಘಾತ
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?
ಆಳಂದ ಮತಗಳ್ಳತನ: ಚಾರ್ಜ್​ಶೀಟ್ ಬಗ್ಗೆ ಸುಭಾಷ್ ಗುತ್ತೇದಾರ್ ಮಗ ಹೇಳಿದ್ದೇನು?