AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ ಆಯ್ತು ಕೇರಳ ಯುಡಿಎಫ್ ಅಭ್ಯರ್ಥಿಗಳ ಬಗ್ಗೆ ಪ್ರಿಯಾಂಕಾ ಗಾಂಧಿ ಮಾಡಿದ್ದ ಟ್ವೀಟ್

ಸಂವಿಧಾನದ ಪ್ರಕಾರ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ಕನಿಷ್ಠ ವಯಸ್ಸು 25 ವರ್ಷ ಆಗಿರಬೇಕು ಎಂಬ ನಿಯಮವಿದೆ. ಈ ನಿಯಮ ತಿಳಿಯದೆ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ವ್ಯಂಗ್ಯವಾಡಿದ್ದಾರೆ.

ಟ್ರೋಲ್​ ಆಯ್ತು ಕೇರಳ ಯುಡಿಎಫ್ ಅಭ್ಯರ್ಥಿಗಳ ಬಗ್ಗೆ ಪ್ರಿಯಾಂಕಾ ಗಾಂಧಿ ಮಾಡಿದ್ದ ಟ್ವೀಟ್
ಪ್ರಿಯಾಂಕಾ ಗಾಂಧಿ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 01, 2021 | 10:11 PM

Share

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿದ ಟ್ವೀಟ್ ಗುರುವಾರ ವ್ಯಾಪಕವಾಗಿ ಟ್ರೋಲ್ ಆಯ್ತು. ಕಾಂಗ್ರೆಸ್​ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮೈತ್ರಿಕೂಟದ ಕೇರಳ ಅಭ್ಯರ್ಥಿಗಳ ಪೈಕಿ ಅರ್ಧದಷ್ಟು ಮಂದಿಯ ವಯಸ್ಸು 20ರಿಂದ 40ರ ಆಸುಪಾಸಿನಲ್ಲಿದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದರು. ಆದರೆ ಭಾರತದ ಸಂವಿಧಾನದ ಪ್ರಕಾರ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ಕನಿಷ್ಠ ವಯಸ್ಸು 25 ವರ್ಷ ಆಗಿರಬೇಕು ಎಂಬ ನಿಯಮವಿದೆ. ಈ ನಿಯಮ ತಿಳಿಯದೆ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ವ್ಯಂಗ್ಯವಾಡಿದ್ದಾರೆ.

ಸಂವಿಧಾನದ 84 (ಬಿ) ವಿಧಿಯ ಅನ್ವಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ವಯಸ್ಸು 25 ವರ್ಷವಾಗಿರಬೇಕು. ವಿಧಾನಸಭೆಗೂ ಸಂವಿಧಾನದ 173 (ಬಿ) ವಿಧಿಯ ಪ್ರಕಾರ 25 ವರ್ಷಗಳ ವಯೋಮಿತಿಯನ್ನು ಸೂಚಿಸಲಾಗಿದೆ. 1950ರ ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿ ಕನಿಷ್ಠ ವಯೋಮಿತಿಯನ್ನು ಸೂಚಿಸಲಾಗಿದೆ.

ಪ್ರಿಯಾಂಕಾರ ಟ್ವೀಟ್​ಗೆ ಲಡಾಖ್​ನ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಾಮ್​ಗ್ಯಾಲ್ ಕಟುವಾಗಿ ಕಾಮೆಂಟ್ ಮಾಡಿದ್ದರು. ‘ನಿಮಗೆ ಚುನಾವಣಾ ಕಾನೂನು ಗೊತ್ತಿರದಿದ್ದರೆ ಸುಮ್ಮನಿರಿ’ ಎಂದು ಪ್ರತಿಕ್ರಿಯಿಸಿದ್ದರು. ‘ಪ್ರಿಯ ಪ್ರಿಯಾಂಕಾ ಗಾಂಧಿ ಜಿ, ನಿಮಗೆ ಸಕ್ರಿಯ ರಾಜಕಾರಣದ ಮುಖ್ಯ ಅಂಶಗಳು ಮತ್ತು ಚುನಾವಣಾ ನಿಯಮಗಳು ಗೊತ್ತಿರದಿದ್ದರೆ ಸುಮ್ಮನಿರುವುದು ಅತ್ಯುತ್ತಮ ಆಯ್ಕೆ’ ಎಂದು ಹೇಳಿದ್ದರು.

ನಂತರ ಒಬ್ಬರಾದ ಮೇಲೆ ಒಬ್ಬರು ಪ್ರಿಯಾಂಕಾ ಟ್ವೀಟ್ ಬಗ್ಗೆ ತಮಾಷೆ ಮಾಡಲು ಆರಂಭಿಸಿದರು. ಶಾಸಕ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲು ಕನಿಷ್ಠ 25 ವರ್ಷವಾಗಿರಬೇಕು. ಈಗ ಹೇಳಿ 20 ವರ್ಷಕ್ಕೆ ಯಾರೆಲ್ಲಾ ಶಾಸಕರಾಗಿದ್ದರು ಎಂದು ಟ್ವೀಟ್​ ಯೂಸರ್ ಒಬ್ಬರು ಪ್ರಶ್ನಿಸಿದ್ದರು. ಪ್ರಿಯಾಂಕಾ ಹೇಳಿಕೆಗೆ ಕಾಮೆಂಟ್ ರೂಪದಲ್ಲಿ ಹರಿದುಬಂದ ಕೆಲ ಟ್ವೀಟ್​ಗಳಿವು.

ಕೇರಳ ವಿಧಾನಸಭೆಗೆ ಏಪ್ರಿಲ್ 6ರಂದು ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಕನಿಷ್ಠ 71 ಸದಸ್ಯ ಬಲ ಬೇಕಿದೆ.

ಇದನ್ನೂ ಓದಿ: ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನರೇಂದ್ರ ಮೋದಿ ರ‍್ಯಾಲಿ, ಟ್ವಿಟರ್​ನಲ್ಲಿ ಮೋದಿ ಗೋಬ್ಯಾಕ್ ಟ್ರೆಂಡ್

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೇರಿದರೆ ಕೇರಳದಲ್ಲಿ ಸಿಎಎ ಜಾರಿ; ಪೀಯೂಷ್ ಗೋಯಲ್

ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಮಂತ್ರಿ ಸ್ಥಾನ ಬೇಕಿಲ್ಲ, ಶಿವಕುಮಾರ್ ಮುಖ್ಯಮಂತ್ರಿಯಾದರೆ ಸಾಕು: ಯೋಗೇಶ್ವರ್
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
ಅಮ್ಮನಿಗೆ ಕಾರು ಗಿಫ್ಟ್ ಕೊಟ್ಟ ಪ್ರತಾಪ್, ಬಿಕ್ಕಿ ಬಿಕ್ಕಿ ಅತ್ತ ತಾಯಿ
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
Video: ವಿದ್ಯುತ್ ಶಾಕ್ ತಗುಲಿ ಬಿದ್ದ ಮರಿಯನ್ನು ರಕ್ಷಿಸಿದ ಕಾಡಾನೆ ಹಿಂಡು
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಮನೆಯಲ್ಲಿ ಅಡುಗೆ ಕೋಣೆ ಯಾವ ದಿಕ್ಕಿನಲ್ಲಿರಬೇಕು? ವಾಸ್ತು ವಿವರಣೆ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸುಬ್ರಹ್ಮಣ್ಯನ ಲಹರಿಗಳಿರುವ ಈ ದಿನದ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಉತ್ತರಾಖಂಡದಲ್ಲಿ ಪ್ರವಾಹ, ಭೂಕುಸಿತದಿಂದ ರಸ್ತೆಗಳೇ ಮಾಯ!
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಫೋಟೋಶೂಟ್ ಮಾಡಿಕೊಳ್ಳೋಕೆ ಬಂದ್ರಾ?; ಮಹಿಳೆಯ ಪ್ರಶ್ನೆಗೆ ಬೆವರಿದ ಕಂಗನಾ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ