AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟ್ರೋಲ್​ ಆಯ್ತು ಕೇರಳ ಯುಡಿಎಫ್ ಅಭ್ಯರ್ಥಿಗಳ ಬಗ್ಗೆ ಪ್ರಿಯಾಂಕಾ ಗಾಂಧಿ ಮಾಡಿದ್ದ ಟ್ವೀಟ್

ಸಂವಿಧಾನದ ಪ್ರಕಾರ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ಕನಿಷ್ಠ ವಯಸ್ಸು 25 ವರ್ಷ ಆಗಿರಬೇಕು ಎಂಬ ನಿಯಮವಿದೆ. ಈ ನಿಯಮ ತಿಳಿಯದೆ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ವ್ಯಂಗ್ಯವಾಡಿದ್ದಾರೆ.

ಟ್ರೋಲ್​ ಆಯ್ತು ಕೇರಳ ಯುಡಿಎಫ್ ಅಭ್ಯರ್ಥಿಗಳ ಬಗ್ಗೆ ಪ್ರಿಯಾಂಕಾ ಗಾಂಧಿ ಮಾಡಿದ್ದ ಟ್ವೀಟ್
ಪ್ರಿಯಾಂಕಾ ಗಾಂಧಿ
Ghanashyam D M | ಡಿ.ಎಂ.ಘನಶ್ಯಾಮ
|

Updated on: Apr 01, 2021 | 10:11 PM

Share

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಮಾಡಿದ ಟ್ವೀಟ್ ಗುರುವಾರ ವ್ಯಾಪಕವಾಗಿ ಟ್ರೋಲ್ ಆಯ್ತು. ಕಾಂಗ್ರೆಸ್​ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಮೈತ್ರಿಕೂಟದ ಕೇರಳ ಅಭ್ಯರ್ಥಿಗಳ ಪೈಕಿ ಅರ್ಧದಷ್ಟು ಮಂದಿಯ ವಯಸ್ಸು 20ರಿಂದ 40ರ ಆಸುಪಾಸಿನಲ್ಲಿದೆ ಎಂದು ಪ್ರಿಯಾಂಕಾ ಗಾಂಧಿ ಟ್ವೀಟ್ ಮಾಡಿದ್ದರು. ಆದರೆ ಭಾರತದ ಸಂವಿಧಾನದ ಪ್ರಕಾರ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ಕನಿಷ್ಠ ವಯಸ್ಸು 25 ವರ್ಷ ಆಗಿರಬೇಕು ಎಂಬ ನಿಯಮವಿದೆ. ಈ ನಿಯಮ ತಿಳಿಯದೆ ಪ್ರಿಯಾಂಕಾ ಟ್ವೀಟ್ ಮಾಡಿದ್ದಾರೆ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಹಲವರು ವ್ಯಂಗ್ಯವಾಡಿದ್ದಾರೆ.

ಸಂವಿಧಾನದ 84 (ಬಿ) ವಿಧಿಯ ಅನ್ವಯ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಉಮೇದುವಾರರ ವಯಸ್ಸು 25 ವರ್ಷವಾಗಿರಬೇಕು. ವಿಧಾನಸಭೆಗೂ ಸಂವಿಧಾನದ 173 (ಬಿ) ವಿಧಿಯ ಪ್ರಕಾರ 25 ವರ್ಷಗಳ ವಯೋಮಿತಿಯನ್ನು ಸೂಚಿಸಲಾಗಿದೆ. 1950ರ ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿ ಕನಿಷ್ಠ ವಯೋಮಿತಿಯನ್ನು ಸೂಚಿಸಲಾಗಿದೆ.

ಪ್ರಿಯಾಂಕಾರ ಟ್ವೀಟ್​ಗೆ ಲಡಾಖ್​ನ ಬಿಜೆಪಿ ಸಂಸದ ಜಮ್ಯಾಂಗ್ ತ್ಸೆರಿಂಗ್ ನಾಮ್​ಗ್ಯಾಲ್ ಕಟುವಾಗಿ ಕಾಮೆಂಟ್ ಮಾಡಿದ್ದರು. ‘ನಿಮಗೆ ಚುನಾವಣಾ ಕಾನೂನು ಗೊತ್ತಿರದಿದ್ದರೆ ಸುಮ್ಮನಿರಿ’ ಎಂದು ಪ್ರತಿಕ್ರಿಯಿಸಿದ್ದರು. ‘ಪ್ರಿಯ ಪ್ರಿಯಾಂಕಾ ಗಾಂಧಿ ಜಿ, ನಿಮಗೆ ಸಕ್ರಿಯ ರಾಜಕಾರಣದ ಮುಖ್ಯ ಅಂಶಗಳು ಮತ್ತು ಚುನಾವಣಾ ನಿಯಮಗಳು ಗೊತ್ತಿರದಿದ್ದರೆ ಸುಮ್ಮನಿರುವುದು ಅತ್ಯುತ್ತಮ ಆಯ್ಕೆ’ ಎಂದು ಹೇಳಿದ್ದರು.

ನಂತರ ಒಬ್ಬರಾದ ಮೇಲೆ ಒಬ್ಬರು ಪ್ರಿಯಾಂಕಾ ಟ್ವೀಟ್ ಬಗ್ಗೆ ತಮಾಷೆ ಮಾಡಲು ಆರಂಭಿಸಿದರು. ಶಾಸಕ ಸ್ಥಾನಕ್ಕೆ ಉಮೇದುವಾರಿಕೆ ಸಲ್ಲಿಸಲು ಕನಿಷ್ಠ 25 ವರ್ಷವಾಗಿರಬೇಕು. ಈಗ ಹೇಳಿ 20 ವರ್ಷಕ್ಕೆ ಯಾರೆಲ್ಲಾ ಶಾಸಕರಾಗಿದ್ದರು ಎಂದು ಟ್ವೀಟ್​ ಯೂಸರ್ ಒಬ್ಬರು ಪ್ರಶ್ನಿಸಿದ್ದರು. ಪ್ರಿಯಾಂಕಾ ಹೇಳಿಕೆಗೆ ಕಾಮೆಂಟ್ ರೂಪದಲ್ಲಿ ಹರಿದುಬಂದ ಕೆಲ ಟ್ವೀಟ್​ಗಳಿವು.

ಕೇರಳ ವಿಧಾನಸಭೆಗೆ ಏಪ್ರಿಲ್ 6ರಂದು ಮತದಾನ ನಡೆಯಲಿದೆ. ಮೇ 2ರಂದು ಫಲಿತಾಂಶ ಪ್ರಕಟವಾಗಲಿದೆ. 140 ಸದಸ್ಯ ಬಲದ ಕೇರಳ ವಿಧಾನಸಭೆಯಲ್ಲಿ ಅಧಿಕಾರ ಹಿಡಿಯಲು ಕನಿಷ್ಠ 71 ಸದಸ್ಯ ಬಲ ಬೇಕಿದೆ.

ಇದನ್ನೂ ಓದಿ: ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನರೇಂದ್ರ ಮೋದಿ ರ‍್ಯಾಲಿ, ಟ್ವಿಟರ್​ನಲ್ಲಿ ಮೋದಿ ಗೋಬ್ಯಾಕ್ ಟ್ರೆಂಡ್

ಇದನ್ನೂ ಓದಿ: ಬಿಜೆಪಿ ಅಧಿಕಾರಕ್ಕೇರಿದರೆ ಕೇರಳದಲ್ಲಿ ಸಿಎಎ ಜಾರಿ; ಪೀಯೂಷ್ ಗೋಯಲ್

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ