AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್​ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ

ಇಂದು ಭಗವಂತ್ ಮಾನ್​ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಆದರೆ ಭಗವಂತ್​ ಮಾನ್​, ಅರವಿಂದ್ ಕೇಜ್ರಿವಾಲ್​ ಇಲ್ಲಿಗೆ ಆಗಮಿಸಲು ವಿಳಂಬವಾಗಿದೆ.

Bhagwant Mann: ಪಂಜಾಬ್​ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ
ಭಗವಂತ್​ ಮಾನ್​
TV9 Web
| Edited By: |

Updated on:Mar 16, 2022 | 2:28 PM

Share

ಪಂಜಾಬ್ ವಿಧಾನಸಭೆ ಚುನಾವಣೆ (Punjab Assembly Election)ಯಲ್ಲಿ ಭರ್ಜರಿ ಬಹುಮತ ಪಡೆದಿರುವ ಆಮ್​ ಆದ್ಮಿ ಪಕ್ಷದ ಭಗವಂತ್ ಮಾನ್ (Bhagwant Mann)​ ಇಂದು ಪಂಜಾಬ್​ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಂದು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ಸಿಂಗ್​ ಗ್ರಾಮವಾದ, ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆದಿತ್ತು. ಸದ್ಯ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.  ಇಂದು ಖಟ್ಕರ್​ ಕಲಾನ್​​ನಲ್ಲಿ ಅಕ್ಷರಶಃ ಹಬ್ಬದ ವಾತಾವರಣವಿತ್ತು. ಅನೇಕ ಜನರು ಸೇರಿದ್ದರು. ಎಲ್ಲಿ ನೋಡಿದರೂ ಹಳದಿ ಪೇಟವೇ ಕಾಣಿಸುತ್ತಿತ್ತು. 

ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್​ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್​ ಯಾದವ್​,  ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಸೇರಿ ಅನೇಕರು ಶುಭಹಾರೈಸಿದ್ದಾರೆ. ಅಖಿಲೇಶ್ ಯಾದವ್ ಟ್ವೀಟ್ ಮಾಡಿ,  ಪಂಜಾಬ್​​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಅಭಿನಂದನೆಗಳು. ಅವರ ಸಮರ್ಥ ನಾಯಕತ್ವದಲ್ಲಿ ಪಂಜಾಬ್​​ ಪ್ರಗತಿ ಕಾಣಲಿ. ಅಲ್ಲಿ ಸೋದರತ್ವ ಬೆಳೆಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.  ಹಾಗೇ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಭಕೋರಿದ್ದು, ಭಾರತೀಯ ಒಕ್ಕೂಟದಲ್ಲಿ ಭಾಷಾವಾರು ಹಕ್ಕುಗಳು ಮತ್ತು ರಾಜ್ಯದ ಹಕ್ಕುಗಳ ಬಗ್ಗೆ ಧ್ವನಿ ಎತ್ತಿರುವ ರಾಜ್ಯಗಳು ತಮಿಳುನಾಡು ಮತ್ತು ಪಂಜಾಬ್​. ಈ ವಿಚಾರಗಳಲ್ಲಿ ಎರಡೂ ರಾಜ್ಯಗಳು ಸುದೀರ್ಘ ಇತಿಹಾಸ ಹೊಂದಿವೆ ಎಂದು ಹೇಳಿದ ಸ್ಟಾಲಿನ್​, ಪಂಜಾಬ್​ನ ಹೊಸ ಸರ್ಕಾರ ಅತ್ಯುತ್ತಮವಾಗಿ ಆಡಳಿತ ನಡೆಸಲಿ ಎಂದು ಹಾರೈಸಿದ್ದಾರೆ.

ಬೆಳಗ್ಗೆಯಿಂದಲೇ ಜನರ ಆಗಮನ

ಇಂದು ಭಗವಂತ್ ಮಾನ್​ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಸಮಾರಂಭಕ್ಕೆ ಬಹಳ ಬೇಗನೇ ಬಂದವರಲ್ಲಿ ಆಪ್​ ಶಾಸಕರಾದ ಅಮನ್ ಅರೋರಾ, ಹರ್ಪಾಲ್ ಸಿಂಗ್ ಚೀಮಾ, ಕುಲ್ತರ್​ ಸಿಂಗ್ ಸಾಂಧವಾ, ನೀನಾ ಮಿತ್ತಲ್​, ಜೈಕಿಶನ್​ ಸಿಂಗ್ ರೋರಿ, ಸಂತೋಶ್​ ಕಟಾರಿಯಾ ಕೂಡ ಸೇರಿದ್ದಾರೆ.  ಹೊಸದಾಗಿ ಆಯ್ಕೆಯಾದ ಶಾಸಕರೆಲ್ಲರೂ ಬೆಳಗ್ಗೆ 11.30ರ ಹೊತ್ತಿಗೇ ಖಟ್ಕರ್​ಕಲಾನ್​ಗೆ ತಲುಪಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಮಧ್ಯಾಹ್ನ 12.30ಕ್ಕೆ ಎಂದು ಹೇಳಲಾಗಿತ್ತಾದರೂ, ಭಗವಂತ್ ಮಾನ್​, ಅರವಿಂದ್ ಕೇಜ್ರಿವಾಲ್​ ಮತ್ತು ರಾಜ್ಯಪಾಲರು ಇಲ್ಲಿಗೆ ತಲುಪಲು ವಿಳಂಬವಾಗಿದ್ದರಿಂದ ಕಾರ್ಯಕ್ರಮ ತಡವಾಗಿದೆ.

ಇದನ್ನೂ ಓದಿ: ಇವರೆಂಥಾ ದುಬಾರಿ ಸಿಎಂ?-ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರಕ್ಕಾಗಿ 40 ಎಕರೆ ಗೋಧಿ ಬೆಳೆ ನಾಶ !

Published On - 1:30 pm, Wed, 16 March 22

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು