AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bhagwant Mann: ಪಂಜಾಬ್​ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ

ಇಂದು ಭಗವಂತ್ ಮಾನ್​ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಆದರೆ ಭಗವಂತ್​ ಮಾನ್​, ಅರವಿಂದ್ ಕೇಜ್ರಿವಾಲ್​ ಇಲ್ಲಿಗೆ ಆಗಮಿಸಲು ವಿಳಂಬವಾಗಿದೆ.

Bhagwant Mann: ಪಂಜಾಬ್​ ನೂತನ ಮುಖ್ಯಮಂತ್ರಿಯಾಗಿ ಭಗವಂತ್ ಮಾನ್​ ಪ್ರಮಾಣ ವಚನ ಸ್ವೀಕಾರ
ಭಗವಂತ್​ ಮಾನ್​
TV9 Web
| Edited By: |

Updated on:Mar 16, 2022 | 2:28 PM

Share

ಪಂಜಾಬ್ ವಿಧಾನಸಭೆ ಚುನಾವಣೆ (Punjab Assembly Election)ಯಲ್ಲಿ ಭರ್ಜರಿ ಬಹುಮತ ಪಡೆದಿರುವ ಆಮ್​ ಆದ್ಮಿ ಪಕ್ಷದ ಭಗವಂತ್ ಮಾನ್ (Bhagwant Mann)​ ಇಂದು ಪಂಜಾಬ್​ನ 17ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದರು. ಇಂದು, ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್​ಸಿಂಗ್​ ಗ್ರಾಮವಾದ, ಪಂಜಾಬ್​​ನ ಖಟ್ಕರ್​ಕಲಾನ್​ನಲ್ಲಿ ಈ ಸಮಾರಂಭ ಅದ್ದೂರಿಯಾಗಿ ನಡೆದಿತ್ತು. ಸದ್ಯ ಭಗವಂತ್ ಮಾನ್​ ಒಬ್ಬರೇ ಪ್ರಮಾಣ ವಚನ ಸ್ವೀಕರಿಸಿದ್ದು, ಅವರ ಕ್ಯಾಬಿನೆಟ್​​ ಸಚಿವರು ಇನ್ನು ಕೆಲವೇ ದಿನಗಳಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ.  ಇಂದು ಖಟ್ಕರ್​ ಕಲಾನ್​​ನಲ್ಲಿ ಅಕ್ಷರಶಃ ಹಬ್ಬದ ವಾತಾವರಣವಿತ್ತು. ಅನೇಕ ಜನರು ಸೇರಿದ್ದರು. ಎಲ್ಲಿ ನೋಡಿದರೂ ಹಳದಿ ಪೇಟವೇ ಕಾಣಿಸುತ್ತಿತ್ತು. 

ಪಂಜಾಬ್​ ನೂತನ ಮುಖ್ಯಮಂತ್ರಿ ಭಗವಂತ್​ ಮಾನ್​ ಅವರಿಗೆ, ಕಾಂಗ್ರೆಸ್ ನಾಯಕ ಮನೀಶ್​ ತಿವಾರಿ, ಸಮಾಜವಾದಿ ಪಾರ್ಟಿ ಮುಖ್ಯಸ್ಥ ಅಖಿಲೇಶ್​ ಯಾದವ್​,  ತಮಿಳುನಾಡು ಸಿಎಂ ಎಂ.ಕೆ.ಸ್ಟಾಲಿನ್​ ಸೇರಿ ಅನೇಕರು ಶುಭಹಾರೈಸಿದ್ದಾರೆ. ಅಖಿಲೇಶ್ ಯಾದವ್ ಟ್ವೀಟ್ ಮಾಡಿ,  ಪಂಜಾಬ್​​ ನೂತನ ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಅಭಿನಂದನೆಗಳು. ಅವರ ಸಮರ್ಥ ನಾಯಕತ್ವದಲ್ಲಿ ಪಂಜಾಬ್​​ ಪ್ರಗತಿ ಕಾಣಲಿ. ಅಲ್ಲಿ ಸೋದರತ್ವ ಬೆಳೆಯಲಿ ಎಂದು ಆಶಿಸುತ್ತೇನೆ ಎಂದಿದ್ದಾರೆ.  ಹಾಗೇ, ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಶುಭಕೋರಿದ್ದು, ಭಾರತೀಯ ಒಕ್ಕೂಟದಲ್ಲಿ ಭಾಷಾವಾರು ಹಕ್ಕುಗಳು ಮತ್ತು ರಾಜ್ಯದ ಹಕ್ಕುಗಳ ಬಗ್ಗೆ ಧ್ವನಿ ಎತ್ತಿರುವ ರಾಜ್ಯಗಳು ತಮಿಳುನಾಡು ಮತ್ತು ಪಂಜಾಬ್​. ಈ ವಿಚಾರಗಳಲ್ಲಿ ಎರಡೂ ರಾಜ್ಯಗಳು ಸುದೀರ್ಘ ಇತಿಹಾಸ ಹೊಂದಿವೆ ಎಂದು ಹೇಳಿದ ಸ್ಟಾಲಿನ್​, ಪಂಜಾಬ್​ನ ಹೊಸ ಸರ್ಕಾರ ಅತ್ಯುತ್ತಮವಾಗಿ ಆಡಳಿತ ನಡೆಸಲಿ ಎಂದು ಹಾರೈಸಿದ್ದಾರೆ.

ಬೆಳಗ್ಗೆಯಿಂದಲೇ ಜನರ ಆಗಮನ

ಇಂದು ಭಗವಂತ್ ಮಾನ್​ ಪ್ರಮಾಣ ವಚನ ಕಾರ್ಯಕ್ರಮಕ್ಕೆ ಮುಂಜಾನೆ 9.30ರಿಂದಲೇ ಜನರು ಆಗಮಿಸುತ್ತಿದ್ದರು. 11.30 ಹೊತ್ತಿಗೆ ಕಾರ್ಯಕ್ರಮ ಸ್ಥಳ ಭರ್ತಿಯಾಗಿತ್ತು. ಸಮಾರಂಭಕ್ಕೆ ಬಹಳ ಬೇಗನೇ ಬಂದವರಲ್ಲಿ ಆಪ್​ ಶಾಸಕರಾದ ಅಮನ್ ಅರೋರಾ, ಹರ್ಪಾಲ್ ಸಿಂಗ್ ಚೀಮಾ, ಕುಲ್ತರ್​ ಸಿಂಗ್ ಸಾಂಧವಾ, ನೀನಾ ಮಿತ್ತಲ್​, ಜೈಕಿಶನ್​ ಸಿಂಗ್ ರೋರಿ, ಸಂತೋಶ್​ ಕಟಾರಿಯಾ ಕೂಡ ಸೇರಿದ್ದಾರೆ.  ಹೊಸದಾಗಿ ಆಯ್ಕೆಯಾದ ಶಾಸಕರೆಲ್ಲರೂ ಬೆಳಗ್ಗೆ 11.30ರ ಹೊತ್ತಿಗೇ ಖಟ್ಕರ್​ಕಲಾನ್​ಗೆ ತಲುಪಿದ್ದಾರೆ. ಪ್ರಮಾಣ ವಚನ ಕಾರ್ಯಕ್ರಮ ಮಧ್ಯಾಹ್ನ 12.30ಕ್ಕೆ ಎಂದು ಹೇಳಲಾಗಿತ್ತಾದರೂ, ಭಗವಂತ್ ಮಾನ್​, ಅರವಿಂದ್ ಕೇಜ್ರಿವಾಲ್​ ಮತ್ತು ರಾಜ್ಯಪಾಲರು ಇಲ್ಲಿಗೆ ತಲುಪಲು ವಿಳಂಬವಾಗಿದ್ದರಿಂದ ಕಾರ್ಯಕ್ರಮ ತಡವಾಗಿದೆ.

ಇದನ್ನೂ ಓದಿ: ಇವರೆಂಥಾ ದುಬಾರಿ ಸಿಎಂ?-ಭಗವಂತ್​ ಮಾನ್​ ಪ್ರಮಾಣ ವಚನ ಸ್ವೀಕಾರಕ್ಕಾಗಿ 40 ಎಕರೆ ಗೋಧಿ ಬೆಳೆ ನಾಶ !

Published On - 1:30 pm, Wed, 16 March 22

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ