AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್​ನ ಅಮೃತಸರದಲ್ಲಿ ಇಂದು ಆಪ್ ವಿಜಯಯಾತ್ರೆ: ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಭಾಗಿ

ಪಂಜಾಬ್​ ಜನರಿಗೆ ನಾವು ನೀಡಿರುವ ಭರವಸೆಗಳನ್ನು ಈಡೇರಿಸುವ ಶಕ್ತಿ ನೀಡುವಂತೆ ಗುರು ಸಾಹೀಬರ ಆಶೀರ್ವಾದ ಪಡೆದುಕೊಳ್ಳುತ್ತೇವೆ ಎಂದರು.

ಪಂಜಾಬ್​ನ ಅಮೃತಸರದಲ್ಲಿ ಇಂದು ಆಪ್ ವಿಜಯಯಾತ್ರೆ: ಭಗವಂತ್ ಮಾನ್, ಅರವಿಂದ್ ಕೇಜ್ರಿವಾಲ್ ಭಾಗಿ
ಆಪ್ ನಾಯಕರಾದ ಭಗವಂತ ಮಾನ್ ಮತ್ತು ಅರವಿಂದ್ ಕೇಜ್ರಿವಾಲ್
TV9 Web
| Edited By: |

Updated on: Mar 13, 2022 | 11:13 AM

Share

ಚಂಡೀಗಡ: ಆಮ್ ಆದ್ಮಿ ಪಕ್ಷದ (Aam Admi Party – AAP) ಪಂಜಾಬ್​ ಘಟಕದ ಮುಖ್ಯಸ್ಥ ಮತ್ತು ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ ಮಾನ್ ಮತ್ತು ಪಕ್ಷದ ಅಧ್ಯಕ್ಷ ಅರವಿಂದ್ ಕೇಜ್ರಿವಾಲ್ ಭಾನುವಾರ (ಮಾರ್ಚ್ 13) ಅಮೃತಸರದಲ್ಲಿ ವಿಜಯಯಾತ್ರೆ ನಡೆಸಲಿದ್ದಾರೆ. ತಮಗೆ ಬಹುಮತ ತಂದುಕೊಟ್ಟ ಜನರಿಗೆ ರೋಡ್​ಷೋ ಮೂಲಕ ಜನರಿಗೆ ಧನ್ಯವಾದ ಅರ್ಪಿಸಲಿದ್ದಾರೆ. ಅಮೃತಸರಕ್ಕೆ ಹೊರಡುವ ಮುನ್ನ ಸಂಗೂರ್​ನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಪಂಜಾಬ್​ ಜನರಿಗೆ ನಾವು ನೀಡಿರುವ ಭರವಸೆಗಳನ್ನು ಈಡೇರಿಸುವ ಶಕ್ತಿ ನೀಡುವಂತೆ ಗುರು ಸಾಹೀಬರ ಆಶೀರ್ವಾದ ಪಡೆದುಕೊಳ್ಳುತ್ತೇವೆ. ನಮ್ಮ ರಾಷ್ಟ್ರೀಯ ಸಂಯೋಜಕರೂ ಅಮೃತಸರಕ್ಕೆ ಬಂದು ರೋಡ್​ಷೋದಲ್ಲಿ ಪಾಲ್ಗೊಳ್ಳುತ್ತಾರೆ’ ಎಂದರು.

ಧುರಿ ಕ್ಷೇತ್ರದಲ್ಲಿ 58,000 ಮತಗಳ ಅಂತರದಿಂದ ಭಗವಂತ ಮಾನ್ ಜಯಗಳಿಸಿದ್ದರು. ಮೊಹಾಲಿಯಲ್ಲಿ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಆಮ್ ಆದ್ಮಿ ಪಕ್ಷದ ಶಾಸಕಾಂಗ ಪಕ್ಷದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. ಪಂಜಾಬ್ ರಾಜ್ಯಪಾಲ ಭನ್ವಾರಿಲಾಲ್ ಪುರೋಹಿತ್ ಅವರನ್ನು ಚಂಡೀಗಡದ ರಾಜಭವನದಲ್ಲಿ ಶನಿವಾರ ಭೇಟಿಯಾಗಿ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದರು.

ಹುತಾತ್ಮ ಕ್ರಾಂತಿಕಾರಿ ಭಗತ್​ ಸಿಂಗ್ ಅವರ ಜನ್ಮಸ್ಥಳ ಖತ್​ಕರ್ ಕಲನ್​ನಲ್ಲಿ ಮಾರ್ಚ್ 16ರಂದು ಭಗವಂತ್ ಮಾನ್ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ. ಆಮ್ ಆದ್ಮಿ ಪಕ್ಷವು ಪಂಜಾಬ್​ನಲ್ಲಿ 92 ಸ್ಥಾನಗಳನ್ನು ಜಯಗಳಿಸಿದೆ. ಕಳೆದ ಎರಡು ಅವಧಿಯಲ್ಲಿ ಅಧಿಕಾರಕ್ಕೆ ಬಂದಿದ್ದ ಕಾಂಗ್ರೆಸ್​ ಪಕ್ಷವು ಕೇವಲ 18 ಸ್ಥಾನಗಳಲ್ಲಿ ಜಯಗಳಿಸಲು ಯಶಸ್ವಿಯಾಗಿತ್ತು. ಬಿಜೆಪಿ 2, ಶಿರೋಮಣಿ ಅಕಾಲಿದಳವು 3 ಸ್ಥಾನಗಳಲ್ಲಿ ಜಯಗಳಿಸಿತ್ತು. 117 ಸದಸ್ಯ ಬಲದ ಪಂಜಾಬ್​ ವಿಧಾನಸಭೆಯಲ್ಲಿ ಆಪ್ ಏಕೈಕ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

ಇದನ್ನೂ ಓದಿ: ಆಪ್​ ಟಾರ್ಗೆಟ್​: ಪಂಜಾಬ್​ ಆಯ್ತು ಈಗ ಇನ್ನೆರಡು ರಾಜ್ಯಗಳ ಮೇಲೆ ಕಣ್ಣಿಟ್ಟಿದ್ದೇವೆ ಎಂದ ಆಮ್​ ಆದ್ಮಿ ಪಾರ್ಟಿ ಮುಖಂಡ

ಇದನ್ನೂ ಓದಿ: ಮಾರ್ಚ್ 16ರಂದು ಎಎಪಿಯ ಭಗವಂತ್ ಮಾನ್​​ ಪಂಜಾಬ್ ಮುಖ್ಯಮಂತ್ರಿಯಾಗಿ ಪ್ರಮಾಣವಚನ

Follow Us
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ