AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಅಧಿಕಾರ ನಡೆಸಲು ಸಾಧ್ಯವಿಲ್ಲ: ಚರಣ್​ಜಿತ್ ಸಿಂಗ್ ಚನ್ನಿ

ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ, ಅವರು ಪಂಜಾಬಿಗಳ ಬಹೂ(ಸೊಸೆ). ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ.

ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಅಧಿಕಾರ ನಡೆಸಲು ಸಾಧ್ಯವಿಲ್ಲ: ಚರಣ್​ಜಿತ್ ಸಿಂಗ್ ಚನ್ನಿ
ಚುನಾವಣಾ ಪ್ರಚಾರದಲ್ಲಿ ಚನ್ನಿ ಮತ್ತು ಪ್ರಿಯಾಂಕಾ ಗಾಂಧಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Feb 16, 2022 | 6:20 PM

Share

ದೆಹಲಿ: ಪಂಜಾಬ್​ನಲ್ಲಿ (Punjab Polls) ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ(Charanjit Singh Channi) ಅವರು  ಉತ್ತರ ಪ್ರದೇಶದ ಭಯ್ಯಾಗಳನ್ನು ರಾಜ್ಯಕ್ಕೆ ಪ್ರವೇಶಿಸಲು ಬಿಡುವುದಿಲ್ಲ ಎಂಬ ಹೇಳಿಕೆಯೊಂದಿಗೆ ವಿವಾದವನ್ನು ಹುಟ್ಟುಹಾಕಿದ್ದಾರೆ. ಚನ್ನಿ ಈ ಹೇಳಿಕೆ ನೀಡಿದಾಗ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ (Priyanka Gandhi Vadra)ರೋಡ್ ಶೋನಲ್ಲಿ ಅವರ ಪಕ್ಕದಲ್ಲಿದ್ದರು. “ಪ್ರಿಯಾಂಕಾ ಗಾಂಧಿ ಪಂಜಾಬಿನ ಸೊಸೆ, ಅವರು ಪಂಜಾಬಿಗಳ ಬಹೂ(ಸೊಸೆ). ಉತ್ತರ ಪ್ರದೇಶ, ಬಿಹಾರ, ದೆಹಲಿಯಿಂದ ಭಯ್ಯಾಗಳು ಇಲ್ಲಿ ಬಂದು ಆಳಲು ಸಾಧ್ಯವಿಲ್ಲ. ಯುಪಿ ಭಯ್ಯಾಗಳಿಗೆ ಪಂಜಾಬ್‌ನಲ್ಲಿ ಸುತ್ತಾಡಲು ನಾವು ಬಿಡುವುದಿಲ್ಲ ” ಎಂದು ಚನ್ನಿ ಪಂಜಾಬಿ ಭಾಷೆಯಲ್ಲಿ ಹೇಳಿದರು. ಪ್ರಿಯಾಂಕಾ ಗಾಂಧಿ ನಗುತ್ತಾ ಚಪ್ಪಾಳೆ ತಟ್ಟಿದರು. ಬೆಂಬಲಿಗರು ‘ಬೋಲೆ ಸೋ ನಿಹಾಲ್…’ ಎಂದು ಕೇಕೆ ಹಾಕಿದರು. ಆಮ್ ಆದ್ಮಿ ಪಕ್ಷ (ಎಎಪಿ) ಗಾಗಿ ಪಂಜಾಬ್‌ನಲ್ಲಿ ವ್ಯಾಪಕ ಪ್ರಚಾರ ನಡೆಸುತ್ತಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಗುರಿಯಾಗಿಟ್ಟುಕೊಂಡು ಚನ್ನಿ ಈ ಹೇಳಿಕೆ ನೀಡಿದ್ದಾರೆ.  “ಇದು ತುಂಬಾ ನಾಚಿಕೆಗೇಡಿನ ಸಂಗತಿಯಾಗಿದೆ. ಯಾವುದೇ ವ್ಯಕ್ತಿ ಅಥವಾ ಯಾವುದೇ ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿಕೊಂಡ ಹೇಳಿಕೆಗಳನ್ನು ನಾವು ಬಲವಾಗಿ ಖಂಡಿಸುತ್ತೇವೆ” ಎಂದು ಕೇಜ್ರಿವಾಲ್ ಹೇಳಿದ್ದಾರೆ.  “ಪ್ರಿಯಾಂಕಾ ಗಾಂಧಿ ಯುಪಿಯಿಂದ ಬಂದವರು ಎಂದು ಎಎಪಿಯ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಹೇಳಿದ್ದಾರೆ. ಅದೇ ವೇಳೆ ಕೇಜ್ರಿವಾಲ್, ಹಾಗಾದರೆ ಪ್ರಿಯಾಂಕಾ ಕೂಡಾ ಭಯ್ಯಾ ಎಂದಿದ್ದಾರೆ.

ಈ ವಿಡಿಯೊವನ್ನು ಶೇರ್ ಮಾಡಿದ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಪ್ರಿಯಾಂಕಾ ಗಾಂಧಿಯನ್ನು ಗುರಿಯಾಗಿಸಿಕೊಂಡು ಟ್ವೀಟ್ ಮಾಡಿರುವ ಅವರು, “ಪ್ರಿಯಾಂಕಾ ವಾದ್ರಾ ಉತ್ತರ ಪ್ರದೇಶಕ್ಕೆ ಹೋಗಿ ತನ್ನನ್ನು ಯುಪಿ ಕೀ ಬೇಟಿ (ಯುಪಿಯ ಮಗಳು) ಎಂದು ಕರೆದುಕೊಳ್ಳುತ್ತಾರೆ ಮತ್ತು ಪಂಜಾಬ್‌ನಲ್ಲಿ ಯುಪಿ-ಬಿಹಾರ ಜನರು ಅವಮಾನಿಸಿದಾಗ ಚಪ್ಪಾಳೆ ತಟ್ಟುತ್ತಾರೆ. ಇದು ಅವರ ಡಬಲ್ ಫೇಸ್ ಎಂದಿದ್ದಾರೆ.

ಪ್ರಿಯಾಂಕಾ ಗಾಂಧಿ ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ. ಅವರು ತಮ್ಮ ಸಹೋದರ ರಾಹುಲ್ ಗಾಂಧಿಯೊಂದಿಗೆ ಪಂಜಾಬ್‌ನಲ್ಲಿಯೂ ಕಾಣಿಸಿಕೊಂಡಿದ್ದಾರೆ.

ಫೆಬ್ರವರಿ 20 ರಂದು (ಭಾನುವಾರ) ಪಂಜಾಬ್ ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಫಲಿತಾಂಶ ಪ್ರಕಟವಾಗಲಿದೆ.

ಇದನ್ನೂ ಓದಿ: ಸರ್ಜಿಕಲ್​ ಸ್ಟ್ರೈಕ್​​ಗೂ ಪುರಾವೆ ಕೇಳುವ ಕಾಂಗ್ರೆಸ್​​ ಕೈಯಲ್ಲಿ ಪಂಜಾಬ್​ ಸುರಕ್ಷಿತವಲ್ಲ: ಪ್ರಧಾನಿ ನರೇಂದ್ರ ಮೋದಿ

Published On - 6:18 pm, Wed, 16 February 22

Follow Us
TV9 Web
TV9 Web

TV9 Kannada

Read More
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!