AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಂಜಾಬ್‌: 65 ಸ್ಥಾನಗಳಲ್ಲಿ ಬಿಜೆಪಿ, 37 ಸ್ಥಾನಗಳಲ್ಲಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಸ್ಪರ್ಧೆ

Punjab Assembly Election 2022 ಸೋಮವಾರ ಬಿಜೆಪಿ ತನ್ನ ಮಿತ್ರಪಕ್ಷಗಳಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿದಳ (ಸಂಯುಕ್ತ) ಜೊತೆ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ

ಪಂಜಾಬ್‌: 65 ಸ್ಥಾನಗಳಲ್ಲಿ ಬಿಜೆಪಿ, 37 ಸ್ಥಾನಗಳಲ್ಲಿ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಸ್ಪರ್ಧೆ
ಪಂಜಾಬ್​​ನಲ್ಲಿ ಮಿತ್ರಪಕ್ಷದ ನಾಯಕರೊಂದಿಗೆ ನಡ್ಡಾ ಮತ್ತು ಅಮಿತ್ ಶಾ (ಕೃಪೆ: ಶಾ ಅವರ ಟ್ವೀಟ್ )
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Jan 24, 2022 | 5:08 PM

Share

ಚಂಡೀಗಢ: ಮುಂದಿನ ತಿಂಗಳು ನಡೆಯಲಿರುವ ಪಂಜಾಬ್ ಚುನಾವಣೆಯಲ್ಲಿ (Punjab Elections) ಬಿಜೆಪಿ 65 ಸ್ಥಾನಗಳಲ್ಲಿ ಸ್ಪರ್ಧಿಸಲಿದ್ದು, ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ (Amarinder Singh)ಅವರ ಹೊಸ ಪಕ್ಷ ಪಂಜಾಬ್ ಲೋಕ ಕಾಂಗ್ರೆಸ್ 37 ಮತ್ತು ಅವರ ಮೂರನೇ ಮೈತ್ರಿ ಪಾಲುದಾರ ಶಿರೋಮಣಿ ಅಕಾಲಿ ದಳ (ಸಂಯುಕ್ತ) 15 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ. 117 ಸದಸ್ಯ ಬಲದ ವಿಧಾನಸಭೆಗೆ ಫೆಬ್ರವರಿ 20 ರಂದು ನಡೆಯಲಿರುವ ರಾಜ್ಯ ಚುನಾವಣೆಗೆ 22 ಕ್ಷೇತ್ರಗಳಿಂದ ತನ್ನ ಪಕ್ಷದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಕ್ಯಾಪ್ಟನ್ ಸಿಂಗ್ ಭಾನುವಾರ ಪ್ರಕಟಿಸಿದ್ದು, ಭಾರತೀಯ ಹಾಕಿ ತಂಡದ ಮಾಜಿ ನಾಯಕ ಅಜಿತ್ ಪಾಲ್ ಸಿಂಗ್ ಪ್ರಮುಖ ನಾಯಕರ ಪಟ್ಟಿಯಲ್ಲಿದ್ದಾರೆ. ಸೋಮವಾರ ಬಿಜೆಪಿ ತನ್ನ ಮಿತ್ರಪಕ್ಷಗಳಾದ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರ ಪಂಜಾಬ್ ಲೋಕ ಕಾಂಗ್ರೆಸ್ ಮತ್ತು ಶಿರೋಮಣಿ ಅಕಾಲಿದಳ (ಸಂಯುಕ್ತ) ಜೊತೆ ಸೀಟು ಹಂಚಿಕೆ ಸೂತ್ರವನ್ನು ಪ್ರಕಟಿಸಿದೆ. ಬಿಜೆಪಿ 65 ಸ್ಥಾನಗಳಲ್ಲಿ, ಪಂಜಾಬ್ ಲೋಕ ಕಾಂಗ್ರೆಸ್ 37 ಸ್ಥಾನಗಳಲ್ಲಿ ಮತ್ತು ಎಸ್‌ಎಡಿ-ಸಂಯುಕ್ತ್ 15 ಸ್ಥಾನಗಳಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲಿದೆ ಎಂದು ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. “ನಾವು ಪ್ರದೇಶಗಳು ಮತ್ತು ಸಮಾಜದ ವಿವಿಧ ವರ್ಗಗಳಾದ್ಯಂತ ಸರಿಯಾದ ಪ್ರಾತಿನಿಧ್ಯವನ್ನು ಖಾತ್ರಿಪಡಿಸಿಕೊಳ್ಳುವಾಗ ಗೆಲುವಿನ ಮೇಲೆ ಸ್ಪಷ್ಟವಾದ ಗಮನವನ್ನು ಹೊಂದಿರುವ ಉತ್ತಮ ಅಭ್ಯರ್ಥಿಗಳನ್ನು ನೀಡಿದ್ದೇವೆ” ಎಂದು  ಪಟಿಯಾಲ ನಗರ ಸ್ಥಾನದಿಂದ ಸ್ಪರ್ಧಿಸಲಿರುವ ಕ್ಯಾಪ್ಟನ್ ಸಿಂಗ್ ಸುದ್ದಿಗೋಷ್ಠಿಯಲ್ಲಿ ಹೇಳಿದರು.

37 ಸ್ಥಾನಗಳ ಪೈಕಿ 26 ರಾಜ್ಯದ ಮಾಲ್ವಾ ಪ್ರದೇಶದಿಂದ ಬಂದಿದ್ದು ಇಲ್ಲಿ ಕ್ಯಾಪ್ಟನ್ ಸಿಂಗ್ ಅವರು ಬಲವಾದ ಕುಟುಂಬ ಸಂಬಂಧಗಳನ್ನು ಹೊಂದಿದ್ದು, ಹಿಂದಿನ ರಾಯಲ್ ಎಸ್ಟೇಟ್ ಪಟಿಯಾಲಾದ ಭಾಗವಾಗಿದ್ದರು. ಈ ಪ್ರದೇಶವು ಕ್ಯಾಪ್ಟನ್ ಸಿಂಗ್ ಅವರ ಕೃಷಿ ಸುಧಾರಣೆಗಳೊಂದಿಗೆ 2007 ರ ಚುನಾವಣೆಯನ್ನು ಕಾಂಗ್ರೆಸ್‌ಗೆ ಗೆಲ್ಲಲು ಸಹಾಯ ಮಾಡಿತು. ಈ ಬಾರಿ, ಕೇಂದ್ರವು ಅಂತಿಮವಾಗಿ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಮೂಲಕ ಮಾಜಿ ಮುಖ್ಯಮಂತ್ರಿಗೆ ಸಹಾಯ ಮಾಡಬಹುದು ಎಂದು ಅವರ ಬೆಂಬಲಿಗರು ಹೇಳಿದ್ದಾರೆ.

ನಾಮನಿರ್ದೇಶಿತರ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದ ಪಿಎಲ್‌ಸಿ ಮುಖ್ಯಸ್ಥರು, ಈ ಎಲ್ಲಾ ಅಭ್ಯರ್ಥಿಗಳು ಪ್ರಬಲ ರಾಜಕೀಯ ಅರ್ಹತೆಗಳನ್ನು ಹೊಂದಿದ್ದಾರೆ ಮತ್ತು ಆಯಾ ಕ್ಷೇತ್ರಗಳಲ್ಲಿ ಚಿರಪರಿಚಿತ ಮುಖಗಳು ಎಂದು ಹೇಳಿದರು.

ಅಭ್ಯರ್ಥಿಗಳಲ್ಲಿ ಕೇವಲ ಒಬ್ಬ ಮಹಿಳೆ ಮಾತ್ರ ಇದ್ದಾರೆ. ಶಿರೋಮಣಿ ಅಕಾಲಿದಳದ ಮಾಜಿ ಶಾಸಕಿ ಮತ್ತು ದಿವಂಗತ ಪೊಲೀಸ್ ಮುಖ್ಯಸ್ಥ ಇಝರ್ ಆಲಂ ಖಾನ್ ಅವರ ಪತ್ನಿ ಫರ್ಜಾನಾ ಆಲಂ ಖಾನ್ ಅವರು ಮಾಲ್ವಾ ಪ್ರದೇಶದ ಮಲೇರ್ಕೋಟ್ಲಾದಿಂದ ಸ್ಪರ್ಧಿಸಲಿದ್ದಾರೆ.

ಅಮರಿಂದರ್ ಸಿಂಗ್ ಅವರು ತಮ್ಮ ತವರು ಕ್ಷೇತ್ರವಾದ ಪಟಿಯಾಲ ಅರ್ಬನ್‌ನಿಂದ ಸ್ಪರ್ಧಿಸುವ ನಿರ್ಧಾರವನ್ನು ಶನಿವಾರ ಪ್ರಕಟಿಸಿದ್ದರು.

ಇದನ್ನೂ ಓದಿ: ಪಂಜಾಬ್: ಧುರಿ ವಿಧಾನಸಭಾ ಕ್ಷೇತ್ರದಿಂದ ಎಎಪಿ ಸಿಎಂ ಅಭ್ಯರ್ಥಿ ಭಗವಂತ್ ಮಾನ್ ಸ್ಪರ್ಧೆ

Follow Us
Web contact
Web contact

TV9 Kannada

Read More
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದ ಬಸವರಾಜ ಬೊಮ್ಮಾಯಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ
ನೂತನ ಮುಖ್ಯಮಂತ್ರಿ ಪದಗ್ರಹಣಕ್ಕೆ ವಿಧಾನಸೌಧದಲ್ಲಿ ಭರ್ಜರಿ ತಯಾರಿ