AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ: ಅರವಿಂದ ಕೇಜ್ರಿವಾಲ್ ಸುಳ್ಳುಗಾರ; ಪಂಜಾಬ್ ಸಿಎಂ ಚನ್ನಿ ತಿರುಗೇಟು

"ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಬಂದರು ಅದೇ ರೀತಿ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬ ರಾಘವ್ ಚಡ್ಡಾ ಮತ್ತು ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ಮಾಡಿದಂತೆ ಪಂಜಾಬ್ ಅವರಿಗೆ ತಮ್ಮ ಸ್ಥಾನವನ್ನು ತೋರಿಸುತ್ತದೆ" ಎಂದ ಚನ್ನಿ

ಅಕ್ರಮ ಮರಳು ಗಣಿಗಾರಿಕೆ: ಅರವಿಂದ ಕೇಜ್ರಿವಾಲ್ ಸುಳ್ಳುಗಾರ; ಪಂಜಾಬ್ ಸಿಎಂ ಚನ್ನಿ ತಿರುಗೇಟು
ಚರಣ್‌ಜಿತ್ ಸಿಂಗ್ ಚನ್ನಿ
TV9 Web
| Edited By: |

Updated on: Feb 13, 2022 | 12:25 PM

Share

ಚಂಡೀಗಢ: ವಿಧಾನಸಭಾ ಚುನಾವಣೆಯ ಮತದಾನದ ದಿನದ ಮೊದಲು ಪಂಜಾಬ್ ಮುಖ್ಯಮಂತ್ರಿ ಅವರ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಆರೋಪಗಳನ್ನು ತೆರವುಗೊಳಿಸಿದ ನಂತರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ಗೆ (Arvind Kejriwal) ಚರಣ್‌ಜಿತ್ ಸಿಂಗ್ ಚನ್ನಿ(Charanjit Singh Channi) ತಿರುಗೇಟು ನೀಡಿದ್ದಾರೆ. ಆಮ್ ಆದ್ಮಿ ಪಕ್ಷ ಅಥವಾ ಎಎಪಿ, ಪಂಜಾಬ್ ರಾಜ್ಯಪಾಲರಿಗೆ ಚನ್ನಿ ಅವರ ಕ್ಷೇತ್ರವಾದ ಚಮ್ಕೌರ್ ಸಾಹಿಬ್‌ನಲ್ಲಿ ನಡೆದಿರುವ ಮರಳು ಗಣಿಗಾರಿಕೆ (Sand Mining) ಪ್ರಕರಣದ ತನಿಖೆ ನಡೆಸುವಂತೆ ವಿನಂತಿಸಿತ್ತು. ರಾಜ್ಯಪಾಲರು ಈ ಮನವಿಯನ್ನು ಪಂಜಾಬ್ ಪೊಲೀಸ್ ಮುಖ್ಯಸ್ಥರಿಗೆ ರವಾನಿಸಿದ್ದಾರೆ. ಚನ್ನಿ ಅವರ ಕ್ಷೇತ್ರದ ಜಿಲ್ಲಾಧಿಕಾರಿ ಮರಳು ಗಣಿಗಾರಿಕೆ ಜಾರಿ ಅಧಿಕಾರಿಗಳಿಗೆ ಕಳುಹಿಸಿರುವ ಸ್ಥಿತಿ ವರದಿಯಲ್ಲಿ ಮರಳು ಗಣಿಗಾರಿಕೆ ಕುರಿತು ಯಾವುದೇ ದೂರು ಅಥವಾ ದಾಖಲೆಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ಆದರೂ ಗಣಿ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸುತ್ತಿರುವುದರಿಂದ ತನಿಖೆ ಮುಂದುವರಿಯಲಿದೆ.  ಸ್ಥಿತಿ ವರದಿಯನ್ನು ಉಲ್ಲೇಖಿಸಿದ ಚನ್ನಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥರು ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಸುಳ್ಳು ಆರೋಪಗಳೊಂದಿಗೆ ತಮ್ಮಗೆ ಕೇಡು ಉಂಟು ಮಾಡಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.  “ಅರವಿಂದ್ ಕೇಜ್ರಿವಾಲ್ ಒಬ್ಬ ಸುಳ್ಳುಗಾರ. ಅವರು ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು, ಆದರೆ ಯಾವುದೂ ನಿಜವಲ್ಲ. ಅವರು ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದರು, ಅವರು ತನಿಖೆಗೆ ಆದೇಶಿಸಿದರು. ಸತ್ಯ ಗೆಲ್ಲುತ್ತದೆ ಎಂದು ಚನ್ನಿ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.

“ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಬಂದರು ಅದೇ ರೀತಿ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬ ರಾಘವ್ ಚಡ್ಡಾ ಮತ್ತು ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ಮಾಡಿದಂತೆ ಪಂಜಾಬ್ ಅವರಿಗೆ ತಮ್ಮ ಸ್ಥಾನವನ್ನು ತೋರಿಸುತ್ತದೆ” ಎಂದು ಚನ್ನಿ ಹೇಳಿದರು.  ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆಗೆ ಮತದಾನ ನಡೆಯಲಿದ್ದು ಚನ್ನಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ.

ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಒಂದು ದಿನದ ವಿಚಾರಣೆಯ ನಂತರ ಜಲಂಧರ್‌ನಿಂದ ಫೆಬ್ರವರಿ 3 ರಂದು ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಶ ಹನಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಜನವರಿ 18 ರಂದು ಹನಿ ಮತ್ತು ಇತರರ ವಿರುದ್ಧ ದಾಳಿ ನಡೆಸಿ ಅವರ ಆಸ್ತಿಯಿಂದ ₹ 7.9 ಕೋಟಿ ಮತ್ತು ಇನ್ನೊಬ್ಬ ಆರೋಪಿ ಸಂದೀಪ್ ಕುಮಾರ್‌ನಿಂದ ₹ 2 ಕೋಟಿ ವಶಪಡಿಸಿಕೊಂಡ ನಂತರ ಇಡಿ ಕ್ರಮವು ಪ್ರಾರಂಭವಾಯಿತು.

ಒಂದು ದಿನದ ವಿಚಾರಣೆಯ ನಂತರ ಜಲಂಧರ್‌ನಿಂದ ಫೆಬ್ರವರಿ 3 ರಂದು ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಹನಿ ಅವರನ್ನು ಜಾರಿ ನಿರ್ದೇಶನಾಲಯ ಅಥವಾ ಇಡಿ ಬಂಧಿಸಿತ್ತು. ಜನವರಿ 18 ರಂದು ಹನಿ ಮತ್ತು ಇತರರ ವಿರುದ್ಧ ದಾಳಿ ನಡೆಸಿ ಅವರ ಆಸ್ತಿಯಿಂದ ₹ 7.9 ಕೋಟಿ ಮತ್ತು ಇನ್ನೊಬ್ಬ ಆರೋಪಿ ಸಂದೀಪ್ ಕುಮಾರ್‌ನಿಂದ ₹ 2 ಕೋಟಿ ಹಣವನ್ನು ಇಡಿ ವಶ ಪಡಿಸಿಕೊಡಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ಪುರಾವೆ ಕೇಳಿದ್ದೇವಾ?: ಅಸ್ಸಾಂ ಸಿಎಂ

ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಬಿಸಿಮುಟ್ಟಿಸಿದ ಲೋಕಾಯುಕ್ತ: ಹಲವೆಡೆ ದಾಳಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
2 ವರ್ಷ ಹೋಟೆಲ್ ರೂಮ್ ಕೊಟ್ಟಿದ್ದಕ್ಕೆ 3 ಅಡಿಯಷ್ಟು ಕಸ ತುಂಬಿ ಹೋದ ಅತಿಥಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಫ್ಯಾಮಿಲಿ ವೀಕ್: ರಾಶಿಕಾ ತಾಯಿ ಮಾತಿಗೆ ಸ್ಟನ್ ಆದ ಗಿಲ್ಲಿ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ಉಸಿರಾಟ ಸಮಸ್ಯೆ ಎಂದು ಆಸ್ಪತ್ರೆಗೆ ಬಂದ ರೋಗಿಯ ಮೇಲೆ ವೈದ್ಯನಿಂದ ಹಲ್ಲೆ
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಸ್ತೆ ಅಡ್ಡಗಟ್ಟಿ ಬರ್ತ್‌ಡೇ ಆಚರಣೆ, ಪುಂಡರ ಹಾವಳಿ ವಿಡಿಯೋ ವೈರಲ್
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರಜತ್ ಅವರ ಸಂಭಾವನೆ ಎಷ್ಟು? ಓಪನ್ ಆಗಿ ಮಾತನಾಡಿದ ಬುಜ್ಜಿ
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ರೈಲಿನ ಶೌಚಾಲಯದ ಪಕ್ಕ ಕುಳಿತು ಪ್ರಯಾಣಿಸಿದ ಕ್ರೀಡಾ ಪಟುಗಳು
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ಬೆಂಗಳೂರಲ್ಲಿ ನ್ಯೂ ಇಯರ್ ಸೆಲೆಬ್ರೇಟ್ ಮಾಡ್ತೀರಾ? ಈ ವಿಚಾರಗಳನ್ನು ತಿಳಿದಿರಿ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ತಿರುಮಲ ವೆಂಕಟೇಶ್ವರನ ದರ್ಶನಕ್ಕೂ ಮುನ್ನ ಭೂವರಾಹ ಸ್ವಾಮಿ ದರ್ಶನ ಕಡ್ಡಾಯ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ
ಇಂದು ಈ ರಾಶಿಯವರ ವ್ಯವಹಾರಗಳಲ್ಲಿ ಯಶಸ್ಸು ಲಭಿಸಲಿದೆ