ಅಕ್ರಮ ಮರಳು ಗಣಿಗಾರಿಕೆ: ಅರವಿಂದ ಕೇಜ್ರಿವಾಲ್ ಸುಳ್ಳುಗಾರ; ಪಂಜಾಬ್ ಸಿಎಂ ಚನ್ನಿ ತಿರುಗೇಟು

"ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಬಂದರು ಅದೇ ರೀತಿ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬ ರಾಘವ್ ಚಡ್ಡಾ ಮತ್ತು ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ಮಾಡಿದಂತೆ ಪಂಜಾಬ್ ಅವರಿಗೆ ತಮ್ಮ ಸ್ಥಾನವನ್ನು ತೋರಿಸುತ್ತದೆ" ಎಂದ ಚನ್ನಿ

ಅಕ್ರಮ ಮರಳು ಗಣಿಗಾರಿಕೆ: ಅರವಿಂದ ಕೇಜ್ರಿವಾಲ್ ಸುಳ್ಳುಗಾರ; ಪಂಜಾಬ್ ಸಿಎಂ ಚನ್ನಿ ತಿರುಗೇಟು
ಚರಣ್‌ಜಿತ್ ಸಿಂಗ್ ಚನ್ನಿ
Follow us
| Updated By: ರಶ್ಮಿ ಕಲ್ಲಕಟ್ಟ

Updated on: Feb 13, 2022 | 12:25 PM

ಚಂಡೀಗಢ: ವಿಧಾನಸಭಾ ಚುನಾವಣೆಯ ಮತದಾನದ ದಿನದ ಮೊದಲು ಪಂಜಾಬ್ ಮುಖ್ಯಮಂತ್ರಿ ಅವರ ಕ್ಷೇತ್ರದಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಆರೋಪಗಳನ್ನು ತೆರವುಗೊಳಿಸಿದ ನಂತರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ ಕೇಜ್ರಿವಾಲ್‌ಗೆ (Arvind Kejriwal) ಚರಣ್‌ಜಿತ್ ಸಿಂಗ್ ಚನ್ನಿ(Charanjit Singh Channi) ತಿರುಗೇಟು ನೀಡಿದ್ದಾರೆ. ಆಮ್ ಆದ್ಮಿ ಪಕ್ಷ ಅಥವಾ ಎಎಪಿ, ಪಂಜಾಬ್ ರಾಜ್ಯಪಾಲರಿಗೆ ಚನ್ನಿ ಅವರ ಕ್ಷೇತ್ರವಾದ ಚಮ್ಕೌರ್ ಸಾಹಿಬ್‌ನಲ್ಲಿ ನಡೆದಿರುವ ಮರಳು ಗಣಿಗಾರಿಕೆ (Sand Mining) ಪ್ರಕರಣದ ತನಿಖೆ ನಡೆಸುವಂತೆ ವಿನಂತಿಸಿತ್ತು. ರಾಜ್ಯಪಾಲರು ಈ ಮನವಿಯನ್ನು ಪಂಜಾಬ್ ಪೊಲೀಸ್ ಮುಖ್ಯಸ್ಥರಿಗೆ ರವಾನಿಸಿದ್ದಾರೆ. ಚನ್ನಿ ಅವರ ಕ್ಷೇತ್ರದ ಜಿಲ್ಲಾಧಿಕಾರಿ ಮರಳು ಗಣಿಗಾರಿಕೆ ಜಾರಿ ಅಧಿಕಾರಿಗಳಿಗೆ ಕಳುಹಿಸಿರುವ ಸ್ಥಿತಿ ವರದಿಯಲ್ಲಿ ಮರಳು ಗಣಿಗಾರಿಕೆ ಕುರಿತು ಯಾವುದೇ ದೂರು ಅಥವಾ ದಾಖಲೆಗಳು ಕಂಡುಬಂದಿಲ್ಲ ಎಂದು ಹೇಳಿದ್ದಾರೆ. ಆದರೂ ಗಣಿ ಇಲಾಖೆ ಹಾಗೂ ಪೊಲೀಸರು ತನಿಖೆ ನಡೆಸುತ್ತಿರುವುದರಿಂದ ತನಿಖೆ ಮುಂದುವರಿಯಲಿದೆ.  ಸ್ಥಿತಿ ವರದಿಯನ್ನು ಉಲ್ಲೇಖಿಸಿದ ಚನ್ನಿ ದೆಹಲಿ ಮುಖ್ಯಮಂತ್ರಿ ಮತ್ತು ಎಎಪಿ ಮುಖ್ಯಸ್ಥರು ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಿಸಿದ ಸುಳ್ಳು ಆರೋಪಗಳೊಂದಿಗೆ ತಮ್ಮಗೆ ಕೇಡು ಉಂಟು ಮಾಡಲು ಬಯಸುತ್ತಿದ್ದಾರೆ ಎಂದು ಹೇಳಿದ್ದಾರೆ.  “ಅರವಿಂದ್ ಕೇಜ್ರಿವಾಲ್ ಒಬ್ಬ ಸುಳ್ಳುಗಾರ. ಅವರು ನನ್ನ ವಿರುದ್ಧ ಹಲವಾರು ಆರೋಪಗಳನ್ನು ಮಾಡಲು ಪ್ರಯತ್ನಿಸಿದರು, ಆದರೆ ಯಾವುದೂ ನಿಜವಲ್ಲ. ಅವರು ನನ್ನ ವಿರುದ್ಧ ರಾಜ್ಯಪಾಲರಿಗೆ ದೂರು ನೀಡಿದರು, ಅವರು ತನಿಖೆಗೆ ಆದೇಶಿಸಿದರು. ಸತ್ಯ ಗೆಲ್ಲುತ್ತದೆ ಎಂದು ಚನ್ನಿ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದರು.

“ಬ್ರಿಟಿಷರು ಭಾರತವನ್ನು ಲೂಟಿ ಮಾಡಲು ಬಂದರು ಅದೇ ರೀತಿ ಕೇಜ್ರಿವಾಲ್ ಮತ್ತು ಅವರ ದೆಹಲಿ ಕುಟುಂಬ ರಾಘವ್ ಚಡ್ಡಾ ಮತ್ತು ಇತರ ಹೊರಗಿನವರು ಪಂಜಾಬ್ ಅನ್ನು ಲೂಟಿ ಮಾಡಲು ಬಂದಿದ್ದಾರೆ. ಆದರೆ ಮೊಘಲರು ಮತ್ತು ಬ್ರಿಟಿಷರಿಗೆ ಮಾಡಿದಂತೆ ಪಂಜಾಬ್ ಅವರಿಗೆ ತಮ್ಮ ಸ್ಥಾನವನ್ನು ತೋರಿಸುತ್ತದೆ” ಎಂದು ಚನ್ನಿ ಹೇಳಿದರು.  ಫೆಬ್ರವರಿ 20 ರಂದು ಪಂಜಾಬ್ ವಿಧಾನಸಭೆಗೆ ಮತದಾನ ನಡೆಯಲಿದ್ದು ಚನ್ನಿ ಕಾಂಗ್ರೆಸ್‌ನ ಮುಖ್ಯಮಂತ್ರಿ ಅಭ್ಯರ್ಥಿ.

ಅಕ್ರಮ ಮರಳುಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚನ್ನಿ ಅವರ ಸೋದರಳಿಯ ಭೂಪಿಂದರ್ ಸಿಂಗ್ ಹನಿ ಶುಕ್ರವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಅವರನ್ನು 14 ದಿನಗಳ ನ್ಯಾಯಾಂಗ ಬಂಧನದಲ್ಲಿಡಲಾಗಿದೆ. ಒಂದು ದಿನದ ವಿಚಾರಣೆಯ ನಂತರ ಜಲಂಧರ್‌ನಿಂದ ಫೆಬ್ರವರಿ 3 ರಂದು ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಶ ಹನಿ ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿತ್ತು.

ಜನವರಿ 18 ರಂದು ಹನಿ ಮತ್ತು ಇತರರ ವಿರುದ್ಧ ದಾಳಿ ನಡೆಸಿ ಅವರ ಆಸ್ತಿಯಿಂದ ₹ 7.9 ಕೋಟಿ ಮತ್ತು ಇನ್ನೊಬ್ಬ ಆರೋಪಿ ಸಂದೀಪ್ ಕುಮಾರ್‌ನಿಂದ ₹ 2 ಕೋಟಿ ವಶಪಡಿಸಿಕೊಂಡ ನಂತರ ಇಡಿ ಕ್ರಮವು ಪ್ರಾರಂಭವಾಯಿತು.

ಒಂದು ದಿನದ ವಿಚಾರಣೆಯ ನಂತರ ಜಲಂಧರ್‌ನಿಂದ ಫೆಬ್ರವರಿ 3 ರಂದು ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಲ್ಲಿ ಹನಿ ಅವರನ್ನು ಜಾರಿ ನಿರ್ದೇಶನಾಲಯ ಅಥವಾ ಇಡಿ ಬಂಧಿಸಿತ್ತು. ಜನವರಿ 18 ರಂದು ಹನಿ ಮತ್ತು ಇತರರ ವಿರುದ್ಧ ದಾಳಿ ನಡೆಸಿ ಅವರ ಆಸ್ತಿಯಿಂದ ₹ 7.9 ಕೋಟಿ ಮತ್ತು ಇನ್ನೊಬ್ಬ ಆರೋಪಿ ಸಂದೀಪ್ ಕುಮಾರ್‌ನಿಂದ ₹ 2 ಕೋಟಿ ಹಣವನ್ನು ಇಡಿ ವಶ ಪಡಿಸಿಕೊಡಿತ್ತು.

ಇದನ್ನೂ ಓದಿ: ರಾಹುಲ್ ಗಾಂಧಿ ರಾಜೀವ್ ಗಾಂಧಿಯವರ ಮಗನೋ ಅಲ್ಲವೋ ಎಂಬುದಕ್ಕೆ ಪುರಾವೆ ಕೇಳಿದ್ದೇವಾ?: ಅಸ್ಸಾಂ ಸಿಎಂ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ