AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ
ಪಂಜಾಬ್ ಸಿಎಂ ಚಿತ್ರ
TV9 Web
| Edited By: |

Updated on: Jan 18, 2022 | 12:04 PM

Share

ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಅವರ ಸಂಬಂಧಿಯೊಬ್ಬರ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಮೊಹಾಲಿ ಸೇರಿ ಪಂಜಾಬ್​​ನ ಸುಮಾರು 10-12 ಸ್ಥಳಗಳಲ್ಲಿ ಇಡಿ ದಾಳಿಯಾಗಿದೆ. ಅದರಲ್ಲಿ ಛನ್ನಿ ಸಂಬಂಧಿಗಳಿಗೆ ಸೇರಿದ ಸ್ಥಳವೂ ಸಿಕ್ಕಿದೆ. ಅಂದಹಾಗೆ, ಅಕ್ರಮ ಮರಳು ಗಣಿಗಾರಿಕೆ ಆರೋಪ ಹೊತ್ತಿರುವವರ ಹೆಸರು  ಭೂಪಿಂದರ್​ ಸಿಂಗ್​ ಹನಿ ಎಂದಾಗಿದ್ದು, ಪಂಜಾಬ್​ ಮುಖ್ಯಮಂತ್ರಿಮಂತ್ರಿಯ ಸೋದರಳಿಯನೇ ಆಗಿದ್ದಾರೆ  ಎಂದೂ ಹೇಳಲಾಗಿದೆ.  ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಪಟ್ಟಂತೆ ಅಕ್ರಮ ಹಣವರ್ಗಾವಣೆಯಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಇ.ಡಿ.ತನಿಖೆ ನಡೆಸುತ್ತಿದೆ. ಈ ಭಾಗವಾಗಿ ದಾಳಿಗಳನ್ನು ನಡೆಸುತ್ತಿದ್ದು, ಇದರಲ್ಲಿ ಪಂಜಾಬ್​ ಸಿಎಂ ಸೋದರಳಿಯನ ಹೆಸರೂ ಕೇಳಿಬರುತ್ತಿದೆ. 

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಮತ್ತು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ಇಲೆಕ್ಷನ್​ ಕಮಿಷನ್​ ನಿನ್ನೆ ಮತ್ತೊಮ್ಮೆ ಹೊಸತಾದ ಪ್ರಕಟಣೆ ಹೊರಡಿಸಿದೆ. ಅದರಂತೆ ಪಂಜಾಬ್​ ಚುನಾವಣೆ ಫೆ.20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.

ಯಾವುದೇ ಚುನಾವಣೆ ಬಂದಾಗಲೂ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ದಳಗಳನ್ನು ಮುಂದೆಬಿಟ್ಟು ಪ್ರತಿಪಕ್ಷಗಳ ಮೇಲೆ ದಾಳಿ ನಡೆಸುತ್ತದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಹಲವು ಸಾರಿ ಮಾಡಿವೆ. ಇದೀಗ ಪಂಜಾಬ್​​ನಲ್ಲಿ ನಡೆದ ಇ.ಡಿ.ದಾಳಿಯನ್ನೂ ಕೆಲವರು ಅದಕ್ಕೇ ತಳುಕು ಹಾಕಿ ಮಾತನಾಡುತ್ತಿದ್ದಾರೆ. ಆದರೆ ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚುತ್ತಿರುವ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಧ್ವನಿ ಎತ್ತಿತ್ತು ಪಂಜಾಬ್​​ನಲ್ಲಿ ಅದರಲ್ಲೂ ಮುಖ್ಯಮಂತ್ರಿ ಛನ್ನಿ ಅವರ ಸ್ವಕ್ಷೇತ್ರ ಚಮಕೌರ್​ ಸಾಹಿಬ್​​ನಲ್ಲಿಯೇ  ಅಕ್ರಮ ಮರಳು ಗಣಿಗಾರಿಕೆ  ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: Theatre : ಗಂಡುಹೆಣ್ಣುಗಳ ನಡುವಿನ ಅಭೀಪ್ಸೆಯ ತೊಳಲಾಟದ ‘ಚದುರಂಗ ಮತ್ತು ಕತ್ತೆ’ ನಾಳೆ ರಂಗಶಂಕರದಲ್ಲಿ

Follow Us
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
ಅವಳಿ ಮಕ್ಕಳನ್ನ ಕೊಂದು ತಾಯಿ ಆತ್ಮಹತ್ಯೆಗೆ ಯತ್ನಿಸಿದ್ಯಾಕೆ?
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
‘ಭೀಮ ತೀರದಲ್ಲಿ’ ಸಿನಿಮಾ ಮರು ಬಿಡುಗಡೆ ಯಾಕೆ? ಕಾರಣ ತಿಳಿಸಿದ ಚಿತ್ರತಂಡ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಸಚಿವರ ಬರ್ತ್​​ಡೇ: ಸರ್ಕಾರಿ ಶಾಲೆ ಮಕ್ಕಳಿಗೆ, ಪೋಷಕರಿಗೆ ವಿಮಾನಯಾನ ಭಾಗ್ಯ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಬಹ್ರೇನ್​​ನ ಗಗನಚುಂಬಿ ಕಟ್ಟಡಗಳ ಮೇಲೆ ಇರಾನ್ ದಾಳಿ
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಸಚಿವ ಮಂಕಾಳು ವೈದ್ಯ ಮಾತಿಗೆ ಸಿಟ್ಟಾಗಿ ಸಭೆಯಿಂದ ಹೊರನಡೆದ ಸತೀಶ್ ಸೈಲ್
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಮಿಸ್ ಆಗಿ ಅಮೆರಿಕದ 3 ಫೈಟರ್​​ ಜೆಟ್​​ಗಳನ್ನು ಹೊಡೆದುರುಳಿಸಿದ ಕುವೈತ್​​
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾ ಬೆಂಬಲಕ್ಕೆ ನಿಂತ ಭಕ್ತ ಸಮೂಹ
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಎಲ್ಲಾ ಸರ್ಕಾರದಲ್ಲೂ ಫೋನ್ ಟ್ಯಾಪಿಂಗ್ ಇತ್ತು, ಈಗಲೂ ಇದೆ: HDK ಸ್ಫೋಟಕ ಮಾತು
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
ಸ್ವಾಮಿ ವಿವೇಕಾನಂದರ ಕೆನಡಾ ಭೇಟಿಯನ್ನು ಉಲ್ಲೇಖಿಸಿದ ಪ್ರಧಾನಿ ಕಾರ್ನಿ
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?
Lunar Eclipse 2026: ಚಂದ್ರ ಗ್ರಹಣ ಯಾರಿಗೆ ಶುಭ ಸುದ್ದಿ ತರುತ್ತೆ?