AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ
ಪಂಜಾಬ್ ಸಿಎಂ ಚಿತ್ರ
TV9 Web
| Edited By: |

Updated on: Jan 18, 2022 | 12:04 PM

Share

ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಅವರ ಸಂಬಂಧಿಯೊಬ್ಬರ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಮೊಹಾಲಿ ಸೇರಿ ಪಂಜಾಬ್​​ನ ಸುಮಾರು 10-12 ಸ್ಥಳಗಳಲ್ಲಿ ಇಡಿ ದಾಳಿಯಾಗಿದೆ. ಅದರಲ್ಲಿ ಛನ್ನಿ ಸಂಬಂಧಿಗಳಿಗೆ ಸೇರಿದ ಸ್ಥಳವೂ ಸಿಕ್ಕಿದೆ. ಅಂದಹಾಗೆ, ಅಕ್ರಮ ಮರಳು ಗಣಿಗಾರಿಕೆ ಆರೋಪ ಹೊತ್ತಿರುವವರ ಹೆಸರು  ಭೂಪಿಂದರ್​ ಸಿಂಗ್​ ಹನಿ ಎಂದಾಗಿದ್ದು, ಪಂಜಾಬ್​ ಮುಖ್ಯಮಂತ್ರಿಮಂತ್ರಿಯ ಸೋದರಳಿಯನೇ ಆಗಿದ್ದಾರೆ  ಎಂದೂ ಹೇಳಲಾಗಿದೆ.  ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಪಟ್ಟಂತೆ ಅಕ್ರಮ ಹಣವರ್ಗಾವಣೆಯಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಇ.ಡಿ.ತನಿಖೆ ನಡೆಸುತ್ತಿದೆ. ಈ ಭಾಗವಾಗಿ ದಾಳಿಗಳನ್ನು ನಡೆಸುತ್ತಿದ್ದು, ಇದರಲ್ಲಿ ಪಂಜಾಬ್​ ಸಿಎಂ ಸೋದರಳಿಯನ ಹೆಸರೂ ಕೇಳಿಬರುತ್ತಿದೆ. 

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಮತ್ತು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ಇಲೆಕ್ಷನ್​ ಕಮಿಷನ್​ ನಿನ್ನೆ ಮತ್ತೊಮ್ಮೆ ಹೊಸತಾದ ಪ್ರಕಟಣೆ ಹೊರಡಿಸಿದೆ. ಅದರಂತೆ ಪಂಜಾಬ್​ ಚುನಾವಣೆ ಫೆ.20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.

ಯಾವುದೇ ಚುನಾವಣೆ ಬಂದಾಗಲೂ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ದಳಗಳನ್ನು ಮುಂದೆಬಿಟ್ಟು ಪ್ರತಿಪಕ್ಷಗಳ ಮೇಲೆ ದಾಳಿ ನಡೆಸುತ್ತದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಹಲವು ಸಾರಿ ಮಾಡಿವೆ. ಇದೀಗ ಪಂಜಾಬ್​​ನಲ್ಲಿ ನಡೆದ ಇ.ಡಿ.ದಾಳಿಯನ್ನೂ ಕೆಲವರು ಅದಕ್ಕೇ ತಳುಕು ಹಾಕಿ ಮಾತನಾಡುತ್ತಿದ್ದಾರೆ. ಆದರೆ ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚುತ್ತಿರುವ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಧ್ವನಿ ಎತ್ತಿತ್ತು ಪಂಜಾಬ್​​ನಲ್ಲಿ ಅದರಲ್ಲೂ ಮುಖ್ಯಮಂತ್ರಿ ಛನ್ನಿ ಅವರ ಸ್ವಕ್ಷೇತ್ರ ಚಮಕೌರ್​ ಸಾಹಿಬ್​​ನಲ್ಲಿಯೇ  ಅಕ್ರಮ ಮರಳು ಗಣಿಗಾರಿಕೆ  ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: Theatre : ಗಂಡುಹೆಣ್ಣುಗಳ ನಡುವಿನ ಅಭೀಪ್ಸೆಯ ತೊಳಲಾಟದ ‘ಚದುರಂಗ ಮತ್ತು ಕತ್ತೆ’ ನಾಳೆ ರಂಗಶಂಕರದಲ್ಲಿ

Follow Us
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
'ಪೆಲೆಟ್ ಗನ್ ದಾಳಿ ನಡೆದೇ ಇಲ್ಲ'; ರಾಹುಲ್ ಗಾಂಧಿಗೆ ಬಿಜೆಪಿ ಸಂಸದ ತಿರುಗೇಟು
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ಕರ್ನಾಟಕ ಸಂಪುಟ ವಿಸ್ತರಣೆ ಬಗ್ಗೆ ಕೈ ಹೈಕಮಾಂಡ್ ನಾಯಕರು ಹೇಳಿದ್ದಿಷ್ಟು!
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ರಾಹುಲ್ ಸಭೆ ಅಂತ್ಯ, ಬೆಂಗಳುರಿನತ್ತ ಡಿಕೆಶಿ: ಸಂಪುಟ ವಿಸ್ತರಣೆ ಕಥೆ ಏನಾಯ್ತು
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ತಾಯಿ ನೆನಪಿಗಾಗಿ ಹೊಸ ವಾಚ್ ರೆಡಿ ಮಾಡಿಸಿದ ಪುತ್ರ ಕುಮಾರಸ್ವಾಮಿ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಅತ್ತೆ ಚೆನ್ನಮ್ಮರ ಜೊತೆಗಿನ ನೆನೆಪು ಹಂಚಿಕೊಂಡ ಸೊಸೆ ಭವಾನಿ ರೇವಣ್ಣ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ಕಾವೇರಿ ಹೋರಾಟ: ಚಿತ್ರರಂಗದ ಒಗ್ಗಟ್ಟು ಪ್ರಶ್ನಿಸಿದ್ದಕ್ಕೆ ರಾಕ್​ಲೈನ್ ಗರಂ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರೈತರ ಪರ ಚಿತ್ರರಂಗ ಇದ್ದೇ ಇರುತ್ತೆ: ಫಿಲಂ ಚೇಂಬರ್ ಅಧ್ಯಕ್ಷೆ ಜಯಮಾಲ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ರಾಜ್ಯದ ಮೇಲ್ಮನವಿ ತಿರಸ್ಕರಿಸಿದ CWMA, ಕರ್ನಾಟಕ ಬಂದ್ ಎಚ್ಚರಿಕೆ
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
ವಿಜಯ್ ಅವರೇ ಬಲವಂತವಾಗಿ ನೀರು ಪಡೆಯಬೇಡಿ: ಪ್ರಥಮ್
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ
Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ