AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ
ಪಂಜಾಬ್ ಸಿಎಂ ಚಿತ್ರ
Follow us
TV9 Web
| Updated By: Lakshmi Hegde

Updated on: Jan 18, 2022 | 12:04 PM

ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಅವರ ಸಂಬಂಧಿಯೊಬ್ಬರ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಮೊಹಾಲಿ ಸೇರಿ ಪಂಜಾಬ್​​ನ ಸುಮಾರು 10-12 ಸ್ಥಳಗಳಲ್ಲಿ ಇಡಿ ದಾಳಿಯಾಗಿದೆ. ಅದರಲ್ಲಿ ಛನ್ನಿ ಸಂಬಂಧಿಗಳಿಗೆ ಸೇರಿದ ಸ್ಥಳವೂ ಸಿಕ್ಕಿದೆ. ಅಂದಹಾಗೆ, ಅಕ್ರಮ ಮರಳು ಗಣಿಗಾರಿಕೆ ಆರೋಪ ಹೊತ್ತಿರುವವರ ಹೆಸರು  ಭೂಪಿಂದರ್​ ಸಿಂಗ್​ ಹನಿ ಎಂದಾಗಿದ್ದು, ಪಂಜಾಬ್​ ಮುಖ್ಯಮಂತ್ರಿಮಂತ್ರಿಯ ಸೋದರಳಿಯನೇ ಆಗಿದ್ದಾರೆ  ಎಂದೂ ಹೇಳಲಾಗಿದೆ.  ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಪಟ್ಟಂತೆ ಅಕ್ರಮ ಹಣವರ್ಗಾವಣೆಯಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಇ.ಡಿ.ತನಿಖೆ ನಡೆಸುತ್ತಿದೆ. ಈ ಭಾಗವಾಗಿ ದಾಳಿಗಳನ್ನು ನಡೆಸುತ್ತಿದ್ದು, ಇದರಲ್ಲಿ ಪಂಜಾಬ್​ ಸಿಎಂ ಸೋದರಳಿಯನ ಹೆಸರೂ ಕೇಳಿಬರುತ್ತಿದೆ. 

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಮತ್ತು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ಇಲೆಕ್ಷನ್​ ಕಮಿಷನ್​ ನಿನ್ನೆ ಮತ್ತೊಮ್ಮೆ ಹೊಸತಾದ ಪ್ರಕಟಣೆ ಹೊರಡಿಸಿದೆ. ಅದರಂತೆ ಪಂಜಾಬ್​ ಚುನಾವಣೆ ಫೆ.20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.

ಯಾವುದೇ ಚುನಾವಣೆ ಬಂದಾಗಲೂ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ದಳಗಳನ್ನು ಮುಂದೆಬಿಟ್ಟು ಪ್ರತಿಪಕ್ಷಗಳ ಮೇಲೆ ದಾಳಿ ನಡೆಸುತ್ತದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಹಲವು ಸಾರಿ ಮಾಡಿವೆ. ಇದೀಗ ಪಂಜಾಬ್​​ನಲ್ಲಿ ನಡೆದ ಇ.ಡಿ.ದಾಳಿಯನ್ನೂ ಕೆಲವರು ಅದಕ್ಕೇ ತಳುಕು ಹಾಕಿ ಮಾತನಾಡುತ್ತಿದ್ದಾರೆ. ಆದರೆ ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚುತ್ತಿರುವ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಧ್ವನಿ ಎತ್ತಿತ್ತು ಪಂಜಾಬ್​​ನಲ್ಲಿ ಅದರಲ್ಲೂ ಮುಖ್ಯಮಂತ್ರಿ ಛನ್ನಿ ಅವರ ಸ್ವಕ್ಷೇತ್ರ ಚಮಕೌರ್​ ಸಾಹಿಬ್​​ನಲ್ಲಿಯೇ  ಅಕ್ರಮ ಮರಳು ಗಣಿಗಾರಿಕೆ  ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: Theatre : ಗಂಡುಹೆಣ್ಣುಗಳ ನಡುವಿನ ಅಭೀಪ್ಸೆಯ ತೊಳಲಾಟದ ‘ಚದುರಂಗ ಮತ್ತು ಕತ್ತೆ’ ನಾಳೆ ರಂಗಶಂಕರದಲ್ಲಿ

RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
RCB ವಿಜಯ ಸಂಭ್ರಮಾಚರಣೆ ವೇಳೆ ಕಾಲ್ತುಳಿತ, ಪ್ರತ್ಯಕ್ಷದರ್ಶಿ ಹೇಳಿದ್ದಿಷ್ಟು
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಪ್ರತಿಯೊಬ್ಬ ಪ್ರಜೆಗೂ ನೋವಾಗಿದೆ: ಕಾಲ್ತುಳಿತ ದುರಂತಕ್ಕೆ ಮರುಗಿದ ನಿಖಿಲ್
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಮಗಳು ಕಾಲ್ತುಳಿತಕ್ಕೊಳಗಾಗಿ ಸತ್ತಿದ್ದು ಒಬ್ಬ ಮಹಿಳೆಗೆ ಗೊತ್ತೇ ಇರಲಿಲ್ಲವಂತೆ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಚಿನ್ನಸ್ವಾಮಿ ಸ್ಟೇಡಿಯಂ ಹೊರಗೆ ಚೆಲ್ಲಾಪಿಲ್ಲಿಯಾಗಿ ಬಿದ್ದ ಚಪ್ಪಲಿಗಳ ರಾಶಿ
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ಪೊಲೀಸರನ್ನು ದೂರುವುದು ಬೇಡ, ಅವರಿಂದ ಉತ್ತಮ ಕೆಲಸವಾಗಿದೆ: ಶಿವಕುಮಾರ್
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ನೀವೇ ನಮ್ಮ ಜೀವ ಸ್ವರ; ಅಭಿಮಾನಿಗಳ ಅಭಿಮಾನಕ್ಕೆ ಮನಸೋತ ಆರ್​ಸಿಬಿ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
ಬಸ್ ಹಿಂದಕ್ಕೆ ಚಲಿಸುತ್ತಿದ್ದಾಗ ಪೊಲೀಸರ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
Stampede: ಕಾಲ್ತುಳಿತದಲ್ಲಿ 10 ಸಾವು, ಆಸ್ಪತ್ರೆ ಎದುರು ಸಂಬಂಧಿಕರ ಆಕ್ರಂದನ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಸಿದ್ದರಾಮಯ್ಯ ಜೊತೆ ಮೊಮ್ಮಗನನ್ನು ಕಂಡು ಶಿವಕುಮಾರ್​ಗೆ ಕುತೂಹಲ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ
ಆರ್​ಸಿಬಿ ತಂಡವನ್ನು ನೋಡಲು ಮುಗಿಬಿದ್ದ ಅಭಿಮಾನಿಗಳು; ಜಾತ್ರೆಯಂತಾದ ಮೆಟ್ರೋ