AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಲಾಗಿದೆ.

ಅಕ್ರಮ ಮರಳು ಗಣಿಗಾರಿಕೆ ಬಗ್ಗೆ ಕೆಲವೇ ದಿನಗಳ ಹಿಂದೆ ಆರೋಪ ಮಾಡಿದ್ದ ಆಪ್​; ಪಂಜಾಬ್​ ಸಿಎಂ ಸೋದರಳಿಯನ ಮನೆ ಮೇಲೆ ಇ.ಡಿ. ದಾಳಿ
ಪಂಜಾಬ್ ಸಿಎಂ ಚಿತ್ರ
TV9 Web
| Edited By: |

Updated on: Jan 18, 2022 | 12:04 PM

Share

ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಅವರ ಸಂಬಂಧಿಯೊಬ್ಬರ ಮೇಲೆ ಇಂದು ಮುಂಜಾನೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು (ED) ದಾಳಿ ಮಾಡಿದ್ದಾರೆ. ಅಕ್ರಮ ಮರಳು ಗಣಿಗಾರಿಕೆ ಪ್ರಕರಣದಡಿ ಈ ದಾಳಿ ನಡೆದಿದೆ ಎಂದು ಹೇಳಲಾಗಿದೆ. ಮೊಹಾಲಿ ಸೇರಿ ಪಂಜಾಬ್​​ನ ಸುಮಾರು 10-12 ಸ್ಥಳಗಳಲ್ಲಿ ಇಡಿ ದಾಳಿಯಾಗಿದೆ. ಅದರಲ್ಲಿ ಛನ್ನಿ ಸಂಬಂಧಿಗಳಿಗೆ ಸೇರಿದ ಸ್ಥಳವೂ ಸಿಕ್ಕಿದೆ. ಅಂದಹಾಗೆ, ಅಕ್ರಮ ಮರಳು ಗಣಿಗಾರಿಕೆ ಆರೋಪ ಹೊತ್ತಿರುವವರ ಹೆಸರು  ಭೂಪಿಂದರ್​ ಸಿಂಗ್​ ಹನಿ ಎಂದಾಗಿದ್ದು, ಪಂಜಾಬ್​ ಮುಖ್ಯಮಂತ್ರಿಮಂತ್ರಿಯ ಸೋದರಳಿಯನೇ ಆಗಿದ್ದಾರೆ  ಎಂದೂ ಹೇಳಲಾಗಿದೆ.  ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆಗೆ ಸಂಬಂಧಪಟ್ಟಂತೆ ಅಕ್ರಮ ಹಣವರ್ಗಾವಣೆಯಲ್ಲಿ ಭಾಗಿಯಾಗಿರುವ ಕಂಪನಿಗಳ ವಿರುದ್ಧ ಇ.ಡಿ.ತನಿಖೆ ನಡೆಸುತ್ತಿದೆ. ಈ ಭಾಗವಾಗಿ ದಾಳಿಗಳನ್ನು ನಡೆಸುತ್ತಿದ್ದು, ಇದರಲ್ಲಿ ಪಂಜಾಬ್​ ಸಿಎಂ ಸೋದರಳಿಯನ ಹೆಸರೂ ಕೇಳಿಬರುತ್ತಿದೆ. 

ಪಂಜಾಬ್​​ನಲ್ಲಿ ಫೆ.20ರಂದು ವಿಧಾನಸಭೆ ಚುನಾವಣೆ ನಡೆಯಲಿದೆ. ಈ ಹಿಂದೆ ಫೆ.14ರಂದು ಮತದಾನ ಎಂದು ಚುನಾವಣಾ ಆಯೋಗ ಹೇಳಿತ್ತು. ಆದರೆ ಗುರು ರವಿದಾಸರ ಜಯಂತಿ ಹಿನ್ನೆಲೆಯಲ್ಲಿ ಚುನಾವಣೆಯನ್ನು ಮುಂದೂಡಬೇಕು ಎಂದು ಪಂಜಾಬ್ ಮುಖ್ಯಮಂತ್ರಿ ಚರಣಜಿತ್​ ಸಿಂಗ್ ಛನ್ನಿ ಮತ್ತು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದರು. ಅದನ್ನು ಪುರಸ್ಕರಿಸಿದ ಇಲೆಕ್ಷನ್​ ಕಮಿಷನ್​ ನಿನ್ನೆ ಮತ್ತೊಮ್ಮೆ ಹೊಸತಾದ ಪ್ರಕಟಣೆ ಹೊರಡಿಸಿದೆ. ಅದರಂತೆ ಪಂಜಾಬ್​ ಚುನಾವಣೆ ಫೆ.20ರಂದು ನಡೆಯಲಿದ್ದು, ಮತ ಎಣಿಕೆ ಮಾರ್ಚ್​ 10ಕ್ಕೆ ನಡೆಯಲಿದೆ.

ಯಾವುದೇ ಚುನಾವಣೆ ಬಂದಾಗಲೂ ಕೇಂದ್ರ ಬಿಜೆಪಿ ಸರ್ಕಾರ ತನಿಖಾ ದಳಗಳನ್ನು ಮುಂದೆಬಿಟ್ಟು ಪ್ರತಿಪಕ್ಷಗಳ ಮೇಲೆ ದಾಳಿ ನಡೆಸುತ್ತದೆ ಎಂಬ ಆರೋಪವನ್ನು ವಿರೋಧ ಪಕ್ಷಗಳು ಹಲವು ಸಾರಿ ಮಾಡಿವೆ. ಇದೀಗ ಪಂಜಾಬ್​​ನಲ್ಲಿ ನಡೆದ ಇ.ಡಿ.ದಾಳಿಯನ್ನೂ ಕೆಲವರು ಅದಕ್ಕೇ ತಳುಕು ಹಾಕಿ ಮಾತನಾಡುತ್ತಿದ್ದಾರೆ. ಆದರೆ ಪಂಜಾಬ್​​ನಲ್ಲಿ ಅಕ್ರಮ ಮರಳು ಗಣಿಗಾರಿಕೆ ಹೆಚ್ಚುತ್ತಿರುವ ಬಗ್ಗೆ ಆಮ್​ ಆದ್ಮಿ ಪಕ್ಷ ಕೂಡ ಧ್ವನಿ ಎತ್ತಿತ್ತು ಪಂಜಾಬ್​​ನಲ್ಲಿ ಅದರಲ್ಲೂ ಮುಖ್ಯಮಂತ್ರಿ ಛನ್ನಿ ಅವರ ಸ್ವಕ್ಷೇತ್ರ ಚಮಕೌರ್​ ಸಾಹಿಬ್​​ನಲ್ಲಿಯೇ  ಅಕ್ರಮ ಮರಳು ಗಣಿಗಾರಿಕೆ  ಜಾಸ್ತಿಯಾಗುತ್ತಿದೆ ಎಂದು ಆರೋಪಿಸಿತ್ತು.

ಇದನ್ನೂ ಓದಿ: Theatre : ಗಂಡುಹೆಣ್ಣುಗಳ ನಡುವಿನ ಅಭೀಪ್ಸೆಯ ತೊಳಲಾಟದ ‘ಚದುರಂಗ ಮತ್ತು ಕತ್ತೆ’ ನಾಳೆ ರಂಗಶಂಕರದಲ್ಲಿ

ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ತೆಂಗಿನ ಗರಿಯಲ್ಲಿ ಅರಳಿದ ಡಾ. ಶಿವಕುಮಾರ ಸ್ವಾಮೀಜಿ ಕಲಾಕೃತಿ
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಕಡಿಮೆ ಆಗಿಲ್ಲ ಶ್ರೀನಾಥ್ ಎನರ್ಜಿ; ‘ನೀನೆ ಸಾಕಿದ ಗಿಣಿ’ ಹಾಡಿಗೆ ಡ್ಯಾನ್ಸ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಉದ್ಘಾಟನೆಗೂ ಮುನ್ನವೇ ಕುಸಿದು ಬಿತ್ತು 21 ಕೋಟಿ ರೂ. ವೆಚ್ಚದ ನೀರಿನ ಟ್ಯಾಂಕ್
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಕೆಲಸ ಮಾಡುವ ಕಚೇರಿಯಲ್ಲಿ ಇರಬೇಕಾದ ದೇವರ ಫೋಟೋಗಳು
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಇಂದು ಈ ರಾಶಿಯವರ ವೈವಾಹಿಕ ಜೀವನದಲ್ಲಿ ಅಸ್ಥಿರತೆ!
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಗಿಲ್ಲಿ ನನಗೆ ಹೊಡೆದಾಗ ಖುಷಿ ಆಗುತ್ತಿತ್ತು, ಎಂಜಾಯ್ ಮಾಡಿದೆ: ರಕ್ಷಿತಾ
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಆಕಸ್ಮಿಕ ಬೆಂಕಿಗೆ ಹೊತ್ತಿ ಉರಿದ ಶಂಕಿತ ಬಾಂಗ್ಲಾ ವಲಸಿಗರ ಶೆಡ್​ಗಳು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಗಿಲ್ಲಿ ಪಕ್ಕ ರಕ್ಷಿತಾ ಅಲ್ಲ, ನಾನು ಇರಬೇಕಿತ್ತು: ಕಾವ್ಯಾ ಅಸಮಾಧಾನದ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ ಸಂಭಾವನೆ, ಆದ ಖರ್ಚು ಮತ್ತು ಪಿಆರ್ ಬಗ್ಗೆ ಕಾವ್ಯಾ ಮಾತು
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ
ಬಿಗ್​​ಬಾಸ್​​ಗೆ ಹೋಗಿದ್ದು ಏಕೆ? ಕಾವ್ಯಾ ಕೊಟ್ಟರು ಕಾರಣ