AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ಸತ್ಯವನ್ನಷ್ಟೇ ಹೇಳುತ್ತೇನೆ, ಸುಳ್ಳು ಕೇಳಬೇಕೆಂದರೆ ಪ್ರಧಾನಿ ಮೋದಿ, ಅರವಿಂದ್ ಕೇಜ್ರಿವಾಲ್ ಭಾಷಣ ಕೇಳಿ: ರಾಹುಲ್ ಗಾಂಧಿ

ಪಂಜಾಬ್​ ಜನರಿಗೆ ಅಷ್ಟೆಲ್ಲ ಭರವಸೆ ಕೊಟ್ಟ ಅರವಿಂದ್ ಕೇಜ್ರಿವಾಲ್​ ಕೊರೊನಾ ಹೆಚ್ಚಳದ ಸಂದರ್ಭದಲ್ಲಿ ಎಲ್ಲಿ ಮಾಯವಾಗಿದ್ದರು. ದೆಹಲಿ ಆಸ್ಪತ್ರೆಗಳಲ್ಲಿ ಆಗಿದ್ದೇನು? ಆಕ್ಸಿಜನ್ ಪೂರೈಕೆ ಮಾಡಿದ್ದು ಯಾರು? ಎಂದು ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ನಾನು ಸತ್ಯವನ್ನಷ್ಟೇ ಹೇಳುತ್ತೇನೆ, ಸುಳ್ಳು ಕೇಳಬೇಕೆಂದರೆ ಪ್ರಧಾನಿ ಮೋದಿ, ಅರವಿಂದ್ ಕೇಜ್ರಿವಾಲ್ ಭಾಷಣ ಕೇಳಿ: ರಾಹುಲ್ ಗಾಂಧಿ
ರಾಹುಲ್ ಗಾಂಧಿ
TV9 Web
| Edited By: |

Updated on:Feb 15, 2022 | 5:47 PM

Share

ಫೆ.12 ರಂದು ಪಂಜಾಬ್​​ನಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ (Congress MP Rahul Gandhi) ಇಂದು ಚುನಾವಣಾ ಪ್ರಚಾರ ನಡೆಸಿದರು. ನಾನು ಸುಳ್ಳು ಭರವಸೆಗಳನ್ನು ಕೊಡುವುದಿಲ್ಲ. ಹಾಗೂ ಯಾರಿಗಾದರೂ ಸುಳ್ಳನ್ನೇ ಕೇಳಬೇಕು ಎಂಬ ಬಯಕೆ ಇದ್ದರೆ ಅವರು ಪ್ರಧಾನಿ ನರೇಂದ್ರ ಮೋದಿ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಮತ್ತು ಶಿರೋಮಣಿ ಅಕಾಲಿ ದಳದ ಸುಖ್ಬೀರ್ ಸಿಂಗ್​ ಬಾದಲ್​ರ ಭಾಷಣ ಕೇಳಲಿ ಎಂದು ಹೇಳಿದ್ದಾರೆ.

ಪಟಿಯಾಲಾ ಜಿಲ್ಲೆಯ ರಾಜಪುರದಲ್ಲಿ, ನವಿ ಸೋಚ್​ ನವಾ ಪಂಜಾಬ್​ ಎಂಬ ಹೆಸರಿನ ಚುನಾವಣಾ ರ್ಯಾಲಿ ನಡೆಸಿದ ರಾಹುಲ್ ಗಾಂಧಿ, ನಾನು ಸುಳ್ಳು ಭರವಸೆಗಳನ್ನು ಯಾರಿಗೂ ಕೊಡುವುದಿಲ್ಲ. ಹಾಗೂ ಒಮ್ಮೆ ನಿಮಗೆಲ್ಲ ಆ ಸುಳ್ಳು ಕೇಳುವುದೇ ಪ್ರಿಯವಾಗಿದ್ದರೆ ದಯವಿಟ್ಟು ಮೋದಿ ಜೀ, ಬಾದಲ್​ ಜೀ, ಕೇಜ್ರಿವಾಲ್​ ಜೀ ಅವರ ಮಾತುಗಳನ್ನು ಕೇಳಿ. ಯಾಕೆಂದರೆ ನಾನು ಸತ್ಯವನ್ನೇ ಹೇಳಬೇಕು ಎಂಬ ಪಾಠವನ್ನು ಕಲಿತವನು ಎಂದು ಹೇಳಿದರು. ಅಷ್ಟೇ ಅಲ್ಲ, ಪಂಜಾಬ್​ನ್ನು ಅಪಾಯದಿಂದ ಪಾರುಮಾಡಲು ನಾವೆಲ್ಲರೂ ಒಗ್ಗಟ್ಟಾಗಬೇಕು.  ಪ್ರೀತಿ, ಸೋದರತ್ವ ಭಾವದಿಂದ ಇರಬೇಕು. ಪಂಜಾಬ್​ ಯುವಜನರಿಗೆ,  ಈ ರಾಜ್ಯ ಸಮೃದ್ಧವಾಗುವುದು ಮತ್ತು ಇಲ್ಲಿ ಶಾಂತಿ ನೆಲೆಸುವುದು ತುಂಬ ಮುಖ್ಯ. ಹೀಗಾಗಿ ಅವರು, ಅನನುಭವಿ ಪಕ್ಷವೆಲ್ಲ ಪಂಜಾಬ್​​ನಲ್ಲಿ ಆಡಳಿತ ಪ್ರಯೋಗ ನಡೆಸಲು ಬಿಡುವುದಿಲ್ಲ ಎಂದೂ ರಾಹುಲ್​ ಗಾಂಧಿ ಹೇಳಿದರು.

ಕೇಜ್ರಿವಾಲ್​ ವಿರುದ್ಧ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, ಪಂಜಾಬ್​ ಜನರಿಗೆ ಅಷ್ಟೆಲ್ಲ ಭರವಸೆ ಕೊಟ್ಟ ಅರವಿಂದ್ ಕೇಜ್ರಿವಾಲ್​ ಕೊರೊನಾ ಹೆಚ್ಚಳದ ಸಂದರ್ಭದಲ್ಲಿ ಎಲ್ಲಿ ಮಾಯವಾಗಿದ್ದರು. ದೆಹಲಿ ಆಸ್ಪತ್ರೆಗಳಲ್ಲಿ ಆಗಿದ್ದೇನು? ಆಕ್ಸಿಜನ್ ಪೂರೈಕೆ ಮಾಡಿದ್ದು ಯಾರು? ಎಂದೂ ಪ್ರಶ್ನಿಸಿದರು. ಹಾಗೇ, ಹೋಶಿಯಾರ್​ಪುರ ಮತ್ತು ಗುರುದಾಸ್​ ಪುರಗಳಲ್ಲಿ ಚುನಾವಣಾ ರ್ಯಾಲಿ ನಡೆಸಿದ ರಾಹುಲ್ ಗಾಂಧಿ, ಪಂಜಾಬ್​ನ್ನು ಕಾಂಗ್ರೆಸ್​ ತುಂಬ ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಮುಂದಿನ ದಿನಗಳಲ್ಲಿ ಕೂಡ ರಾಜ್ಯವನ್ನು ಅಭಿವೃದ್ಧಿಯೆಡೆಗೆ ಮುನ್ನಡೆಸಲಿದೆ ಎಂದು ಹೇಳಿದರು.

ಪಂಜಾಬ್​ನ 117 ವಿಧಾನಸಭಾ ಕ್ಷೇತ್ರಗಳಲ್ಲಿ ಫೆ.20ರಂದು ಚುನಾವಣೆ ನಡೆಯಲಿದೆ. ಮಾರ್ಚ್​ 10ಕ್ಕೆ ಮತ ಎಣಿಕೆ ಆಗಲಿದೆ. ಇಲ್ಲಿ ಈಗಾಗಲೇ ಆಡಳಿತದಲ್ಲಿರುವ ಕಾಂಗ್ರೆಸ್ ಮತ್ತೊಮ್ಮೆ ಅಧಿಕಾರ ಹಿಡಿಯಲು ಪ್ರಯತ್ನ ಮಾಡುತ್ತಿದ್ದರೆ, ಬಿಜೆಪಿ ಹೇಗಾದರೂ ಸರಿ ಈ ಬಾರಿಯಾದರೂ ಪಂಜಾಬ್​​ನ್ನು ತೆಕ್ಕೆಗೆ ಎಳೆದುಕೊಳ್ಳಬೇಕು ಎಂಬ ಆಶಯದೊಂದಿಗೆ ಮುನ್ನುಗ್ಗುತ್ತಿದೆ. ಈ ಬಾರಿ ಬಿಜೆಪಿ ಪಂಜಾಬ್​ನಲ್ಲಿ ಅಮರಿಂದರ್​ ಸಿಂಗ್​ ನೇತೃತ್ವದ ಪಂಜಾಬ್​ ಲೋಕ್​ ಕಾಂಗ್ರೆಸ್​ ಮತ್ತು ಸುಖ್​ದೇವ್ ಸಿಂಗ್​ ಧಿಂಡ್ಸಾ ನೇತೃತ್ವದ ಶಿರೋಮಣಿ ಅಕಾಲಿ ದಳ್​ (ಸಂಯುಕ್ತ) ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ಚುನಾವಣಾ ಕಣಕ್ಕೆ ಇಳಿದಿದೆ.

ಇದನ್ನೂ ಓದಿ: Uttar Pradesh Elections 2022: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಬಡವರಿಗೆ 1 ಕೆಜಿ ತುಪ್ಪ, ಉಚಿತ ರೇಷನ್; ಅಖಿಲೇಶ್ ಯಾದವ್ ಭರವಸೆ

Published On - 5:45 pm, Tue, 15 February 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ