Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸೇರಿದ್ದ ಕೇವಲ 6 ದಿನಗಳಲ್ಲಿ ವಾಪಸ್​ ಕಾಂಗ್ರೆಸ್​ಗೆ ಬಂದ ಶಾಸಕ; ಹೋಗಿದ್ಯಾಕೆ? ಬಂದಿದ್ಯಾಕೆ?

ಚುನಾವಣೆಗೆ ತುಂಬ ದಿನಗಳು ದೂರವಿಲ್ಲ. ಈ ವೇಳೆ ಪಂಜಾಬ್​​ನಲ್ಲಿ ಹಲವು ರೀತಿಯ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಲಡ್ಡಿಯವರೊಂದಿಗೆ ಬಿಜೆಪಿ ಸೇರಿರುವ ಫತೇಜ್​ ಜಂಗ್​ ಸಿಂಗ್​ ಕೂಡ ವಾಪಸ್​ ಬರಬಹುದಾ ಎಂಬ ಪ್ರಶ್ನೆಯೂ ಎದ್ದಿದೆ.

ಬಿಜೆಪಿ ಸೇರಿದ್ದ ಕೇವಲ 6 ದಿನಗಳಲ್ಲಿ ವಾಪಸ್​ ಕಾಂಗ್ರೆಸ್​ಗೆ ಬಂದ ಶಾಸಕ; ಹೋಗಿದ್ಯಾಕೆ? ಬಂದಿದ್ಯಾಕೆ?
ವಾಪಸ್​ ಕಾಂಗ್ರೆಸ್​ಗೆ ಬಂದ ಬಲ್ವಿಂದರ್​ ಸಿಂಗ್​ ಲಡ್ಡಿ
Follow us
TV9 Web
| Updated By: Lakshmi Hegde

Updated on: Jan 03, 2022 | 3:34 PM

ರಾಜಕಾರಣದಲ್ಲಿ ಪಕ್ಷಾಂತರವೆಂಬುದು ಸರ್ವೇ ಸಾಮಾನ್ಯವಾಗಿದೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರುವುದು, ಮತ್ತೆ ಮರಳಿ ಮಾತೃ ಪಕ್ಷಕ್ಕೆ ಬರುವುದೆಲ್ಲ ನಡೆಯುತ್ತಲೇ ಇರುತ್ತವೆ. ಹಾಗೇ, ಇಲ್ಲೊಬ್ಬರು ಶಾಸಕ ಕಾಂಗ್ರೆಸ್​​ನಿಂದ ಬಿಜೆಪಿಗೆ ಸೇರಿ, ಕೇವಲ ಆರು ದಿನಗಳಲ್ಲಿ ಮತ್ತೆ ಮರಳಿ ಕಾಂಗ್ರೆಸ್​ಗೆ ಬಂದಿದ್ದಾರೆ. ಹೀಗೆ ಮಾಡಿದ್ದು, ಪಂಜಾಬ್​​ನ ಶಾಸಕ ಬಲ್ವಿಂದರ್​ ಸಿಂಗ್​ ಲಡ್ಡಿ(MLA Balwinder Laddi ).  

ಲಡ್ಡಿಯವರು ಶ್ರೀ ಹರಗೋಬಿಂದಪುರ ಕ್ಷೇತ್ರದ ಶಾಸಕರು. ಡಿಸೆಂಬರ್​ 28ರಂದು, ಕ್ವಾದಿಯಾನ್​ ಶಾಸಕ ಫತೇಹ್​ಜಂಗ್​ ಸಿಂಗ್​ ಜತೆಗೂಡಿ ದೆಹಲಿಯಲ್ಲಿ ಬಿಜೆಪಿ ಸೇರಿದ್ದರು. ಪಂಜಾಬ್​ ರಾಜ್ಯ ಬಿಜೆಪಿ ಉಸ್ತುವಾರಿ, ಕೇಂದ್ರ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ ಸಮ್ಮುಖದಲ್ಲಿ ಇವರಿಬ್ಬರೂ ಬಿಜೆಪಿ ಸೇರಿದ್ದರು. ಆದರೆ ಅವರು ಭಾನುವಾರ ರಾತ್ರಿ ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮತ್ತು ಪಂಜಾಬ್​ ಎಐಸಿಸಿ ಉಸ್ತುವಾರಿ ಹರೀಶ್​ ಚೌಧರಿ ಸಮ್ಮುಖದಲ್ಲಿ ತಾವು ಮತ್ತೆ ಕಾಂಗ್ರೆಸ್​​ಗೆ ಮರಳಿದ್ದಾಗಿ ಹೇಳಿದ್ದಾರೆ.

ಶಾಸಕ ಬಲ್ವಿಂದರ್​ ಸಿಂಗ್​ ಲಡ್ಡಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್​ ಕೊಡಲು ಕಾಂಗ್ರೆಸ್​ ಹಿಂದೇಟು ಹಾಕಿದ್ದೇ ಅವರು ಕಾಂಗ್ರೆಸ್ ತೊರೆಯಲು ಕಾರಣ ಎಂದು ಮೂಲಗಳಿಂದ ತಿಳಿದುಬಂದಿತ್ತು. ಅಸಮಾಧಾನಗೊಂಡು ಬಿಜೆಪಿಗೆ ಸೇರಿದ್ದ ಅವರನ್ನು ವಾಪಸ್ ಪಕ್ಷಕ್ಕೆ ಕರೆತರಲು ಕಾಂಗ್ರೆಸ್​ನ ಮುಖಂಡರು ಪ್ರಯತ್ನ ಮಾಡುತ್ತಲೇ ಇದ್ದರು. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಟಿಕೆಟ್​ ನೀಡುವುದಾಗಿಯೂ ಭರವಸೆ ಕೊಟ್ಟಿದ್ದಾರೆ. ಈಗ ಇದೇ ಕಾರಣಕ್ಕೆ ಬಲ್ವಿಂದರ್​ ಸಿಂಗ್​ ವಾಪಸ್​ ಬಂದಿದ್ದಾರೆ ಎನ್ನಲಾಗಿದೆ. ಪಂಜಾಬ್​​ನಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲೂ ಗೆದ್ದು, ಮತ್ತೊಂದು ಅವಧಿಗೆ ಆಡಳಿತ ಹಿಡಿಯುವ ಕಾತರ.

ಚುನಾವಣೆಗೆ ತುಂಬ ದಿನಗಳು ದೂರವಿಲ್ಲ. ಈ ವೇಳೆ ಪಂಜಾಬ್​​ನಲ್ಲಿ ಹಲವು ರೀತಿಯ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಲಡ್ಡಿಯವರೊಂದಿಗೆ ಬಿಜೆಪಿ ಸೇರಿರುವ ಫತೇಜ್​ ಜಂಗ್​ ಸಿಂಗ್​ ಕೂಡ ವಾಪಸ್​ ಬರಬಹುದಾ ಎಂಬ ಪ್ರಶ್ನೆಯೂ ಎದ್ದಿದೆ. ಕಾಂಗ್ರೆಸ್​​ನಲ್ಲಿದ್ದು 2021ರವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಇದೀಗ ಪಕ್ಷ ತೊರೆದು ಬೇರೆ ಪಕ್ಷವನ್ನೇ ಕಟ್ಟಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಘೋಷಣೆಯನ್ನೂ ಮಾಡಿದ್ದಾರೆ. ಅದು ಕಾಂಗ್ರೆಸ್​ಗೆ ಕಹಿತುತ್ತಾಗಿ ಪರಿಣಮಿಸಿದೆ. ಮತ್ತೊಂದೆಡೆ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಪಕ್ಷವೂ ಕೂಡ ಪಂಜಾಬ್​ ಚುನಾವಣೆಯಲ್ಲಿ ಪ್ರಬಲ ಸ್ಪರ್ಧೆಯೊಡ್ಡಲು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಮಹಿಳೆಯರ ಮದುವೆ ವಯಸ್ಸಿನ ಮಿತಿ ಏರಿಕೆ ಮಸೂದೆ ಪರಿಶೀಲಿಸುವ ಸಂಸದೀಯ ಸಮಿತಿಯಲ್ಲಿರುವುದು ಒಬ್ಬರೇ ಮಹಿಳೆ

‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಸಿಐಡಿ ತನಿಖೆ ರಾಜ್ಯ ಸರ್ಕಾರ ಹಿಂತೆಗೆದುಕೊಂಡ ಕಾರಣ ಗೊತ್ತಿಲ್ಲ: ಅಣ್ಣಾಮಲೈ
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಲಾರಿಗೆ ಡಿಕ್ಕಿ ಹೊಡೆದ ಮುಂಬೈ- ಅಮರಾವತಿ ಎಕ್ಸ್​ಪ್ರೆಸ್​ ರೈಲು
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಮಹಿಳೆಯೊಂದಿಗೆ ಕಿರಿಕ್​:ಪುಂಡರ ಮರ್ಯಾದೆ ಮೂರು ಕಾಸಿಗೆ ಹರಾಜು ಹಾಕಿದ ಪೊಲೀಸ್
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ಚಿಕ್ಕಬಳ್ಳಾಪುರ: ಹೊತ್ತಿ ಉರಿದ ದೇವಸ್ಥಾನದ ಮುಂದೆ ನಿಲ್ಲಿಸಿದ್ದ ಕಾರು
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ನಿಂತುಹೋಗಿರುವ ಕಾಮಗಾರಿಗಳನ್ನು ಪೂರ್ತಿಗೊಳಿಸಲು ಕೋರಿದೆ: ರೇಣುಕಾಚಾರ್ಯ
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ವಿದ್ಯಾರ್ಥಿಗಳ ಕಳಪೆ ಪ್ರದರ್ಶನ, ತಮಗೆ ತಾವೇ ಶಿಕ್ಷೆ ಕೊಟ್ಟುಕೊಂಡ ಶಿಕ್ಷಕರು
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್
ಪ್ರಶ್ನೆಗೆ ಉತ್ತರ ಸಿಗದಿದ್ದರೆ ಆಯಾ ಇಲಾಖೆ ಅಧಿಕಾರಿಗಳು ಜವಾಬ್ದಾರರು:ಖಾದರ್