AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ಸೇರಿದ್ದ ಕೇವಲ 6 ದಿನಗಳಲ್ಲಿ ವಾಪಸ್​ ಕಾಂಗ್ರೆಸ್​ಗೆ ಬಂದ ಶಾಸಕ; ಹೋಗಿದ್ಯಾಕೆ? ಬಂದಿದ್ಯಾಕೆ?

ಚುನಾವಣೆಗೆ ತುಂಬ ದಿನಗಳು ದೂರವಿಲ್ಲ. ಈ ವೇಳೆ ಪಂಜಾಬ್​​ನಲ್ಲಿ ಹಲವು ರೀತಿಯ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಲಡ್ಡಿಯವರೊಂದಿಗೆ ಬಿಜೆಪಿ ಸೇರಿರುವ ಫತೇಜ್​ ಜಂಗ್​ ಸಿಂಗ್​ ಕೂಡ ವಾಪಸ್​ ಬರಬಹುದಾ ಎಂಬ ಪ್ರಶ್ನೆಯೂ ಎದ್ದಿದೆ.

ಬಿಜೆಪಿ ಸೇರಿದ್ದ ಕೇವಲ 6 ದಿನಗಳಲ್ಲಿ ವಾಪಸ್​ ಕಾಂಗ್ರೆಸ್​ಗೆ ಬಂದ ಶಾಸಕ; ಹೋಗಿದ್ಯಾಕೆ? ಬಂದಿದ್ಯಾಕೆ?
ವಾಪಸ್​ ಕಾಂಗ್ರೆಸ್​ಗೆ ಬಂದ ಬಲ್ವಿಂದರ್​ ಸಿಂಗ್​ ಲಡ್ಡಿ
TV9 Web
| Edited By: |

Updated on: Jan 03, 2022 | 3:34 PM

Share

ರಾಜಕಾರಣದಲ್ಲಿ ಪಕ್ಷಾಂತರವೆಂಬುದು ಸರ್ವೇ ಸಾಮಾನ್ಯವಾಗಿದೆ. ಒಂದು ಪಕ್ಷದಿಂದ ಮತ್ತೊಂದು ಪಕ್ಷಕ್ಕೆ ಸೇರುವುದು, ಮತ್ತೆ ಮರಳಿ ಮಾತೃ ಪಕ್ಷಕ್ಕೆ ಬರುವುದೆಲ್ಲ ನಡೆಯುತ್ತಲೇ ಇರುತ್ತವೆ. ಹಾಗೇ, ಇಲ್ಲೊಬ್ಬರು ಶಾಸಕ ಕಾಂಗ್ರೆಸ್​​ನಿಂದ ಬಿಜೆಪಿಗೆ ಸೇರಿ, ಕೇವಲ ಆರು ದಿನಗಳಲ್ಲಿ ಮತ್ತೆ ಮರಳಿ ಕಾಂಗ್ರೆಸ್​ಗೆ ಬಂದಿದ್ದಾರೆ. ಹೀಗೆ ಮಾಡಿದ್ದು, ಪಂಜಾಬ್​​ನ ಶಾಸಕ ಬಲ್ವಿಂದರ್​ ಸಿಂಗ್​ ಲಡ್ಡಿ(MLA Balwinder Laddi ).  

ಲಡ್ಡಿಯವರು ಶ್ರೀ ಹರಗೋಬಿಂದಪುರ ಕ್ಷೇತ್ರದ ಶಾಸಕರು. ಡಿಸೆಂಬರ್​ 28ರಂದು, ಕ್ವಾದಿಯಾನ್​ ಶಾಸಕ ಫತೇಹ್​ಜಂಗ್​ ಸಿಂಗ್​ ಜತೆಗೂಡಿ ದೆಹಲಿಯಲ್ಲಿ ಬಿಜೆಪಿ ಸೇರಿದ್ದರು. ಪಂಜಾಬ್​ ರಾಜ್ಯ ಬಿಜೆಪಿ ಉಸ್ತುವಾರಿ, ಕೇಂದ್ರ ಸಚಿವ ಗಜೇಂದ್ರ ಸಿಂಗ್​ ಶೇಖಾವತ್​ ಸಮ್ಮುಖದಲ್ಲಿ ಇವರಿಬ್ಬರೂ ಬಿಜೆಪಿ ಸೇರಿದ್ದರು. ಆದರೆ ಅವರು ಭಾನುವಾರ ರಾತ್ರಿ ಮತ್ತೆ ಕಾಂಗ್ರೆಸ್​ಗೆ ಸೇರ್ಪಡೆಯಾಗಿದ್ದಾರೆ. ಪಂಜಾಬ್​ ಮುಖ್ಯಮಂತ್ರಿ ಚರಣಜಿತ್​ ಸಿಂಗ್​ ಛನ್ನಿ ಮತ್ತು ಪಂಜಾಬ್​ ಎಐಸಿಸಿ ಉಸ್ತುವಾರಿ ಹರೀಶ್​ ಚೌಧರಿ ಸಮ್ಮುಖದಲ್ಲಿ ತಾವು ಮತ್ತೆ ಕಾಂಗ್ರೆಸ್​​ಗೆ ಮರಳಿದ್ದಾಗಿ ಹೇಳಿದ್ದಾರೆ.

ಶಾಸಕ ಬಲ್ವಿಂದರ್​ ಸಿಂಗ್​ ಲಡ್ಡಿಗೆ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್​ ಕೊಡಲು ಕಾಂಗ್ರೆಸ್​ ಹಿಂದೇಟು ಹಾಕಿದ್ದೇ ಅವರು ಕಾಂಗ್ರೆಸ್ ತೊರೆಯಲು ಕಾರಣ ಎಂದು ಮೂಲಗಳಿಂದ ತಿಳಿದುಬಂದಿತ್ತು. ಅಸಮಾಧಾನಗೊಂಡು ಬಿಜೆಪಿಗೆ ಸೇರಿದ್ದ ಅವರನ್ನು ವಾಪಸ್ ಪಕ್ಷಕ್ಕೆ ಕರೆತರಲು ಕಾಂಗ್ರೆಸ್​ನ ಮುಖಂಡರು ಪ್ರಯತ್ನ ಮಾಡುತ್ತಲೇ ಇದ್ದರು. ಅಲ್ಲದೆ, ಮುಂದಿನ ಚುನಾವಣೆಯಲ್ಲಿ ಟಿಕೆಟ್​ ನೀಡುವುದಾಗಿಯೂ ಭರವಸೆ ಕೊಟ್ಟಿದ್ದಾರೆ. ಈಗ ಇದೇ ಕಾರಣಕ್ಕೆ ಬಲ್ವಿಂದರ್​ ಸಿಂಗ್​ ವಾಪಸ್​ ಬಂದಿದ್ದಾರೆ ಎನ್ನಲಾಗಿದೆ. ಪಂಜಾಬ್​​ನಲ್ಲಿ ಇದೇ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈಗಿರುವ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ಚುನಾವಣೆಯಲ್ಲೂ ಗೆದ್ದು, ಮತ್ತೊಂದು ಅವಧಿಗೆ ಆಡಳಿತ ಹಿಡಿಯುವ ಕಾತರ.

ಚುನಾವಣೆಗೆ ತುಂಬ ದಿನಗಳು ದೂರವಿಲ್ಲ. ಈ ವೇಳೆ ಪಂಜಾಬ್​​ನಲ್ಲಿ ಹಲವು ರೀತಿಯ ರಾಜಕೀಯ ಚಟುವಟಿಕೆಗಳು ನಡೆಯುತ್ತಿವೆ. ಲಡ್ಡಿಯವರೊಂದಿಗೆ ಬಿಜೆಪಿ ಸೇರಿರುವ ಫತೇಜ್​ ಜಂಗ್​ ಸಿಂಗ್​ ಕೂಡ ವಾಪಸ್​ ಬರಬಹುದಾ ಎಂಬ ಪ್ರಶ್ನೆಯೂ ಎದ್ದಿದೆ. ಕಾಂಗ್ರೆಸ್​​ನಲ್ಲಿದ್ದು 2021ರವರೆಗೆ ಮುಖ್ಯಮಂತ್ರಿ ಸ್ಥಾನದಲ್ಲಿದ್ದ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ ಇದೀಗ ಪಕ್ಷ ತೊರೆದು ಬೇರೆ ಪಕ್ಷವನ್ನೇ ಕಟ್ಟಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಘೋಷಣೆಯನ್ನೂ ಮಾಡಿದ್ದಾರೆ. ಅದು ಕಾಂಗ್ರೆಸ್​ಗೆ ಕಹಿತುತ್ತಾಗಿ ಪರಿಣಮಿಸಿದೆ. ಮತ್ತೊಂದೆಡೆ ಅರವಿಂದ್​ ಕೇಜ್ರಿವಾಲ್​ ನೇತೃತ್ವದ ಆಪ್​ ಪಕ್ಷವೂ ಕೂಡ ಪಂಜಾಬ್​ ಚುನಾವಣೆಯಲ್ಲಿ ಪ್ರಬಲ ಸ್ಪರ್ಧೆಯೊಡ್ಡಲು ಎಲ್ಲ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದೆ.

ಇದನ್ನೂ ಓದಿ: ಮಹಿಳೆಯರ ಮದುವೆ ವಯಸ್ಸಿನ ಮಿತಿ ಏರಿಕೆ ಮಸೂದೆ ಪರಿಶೀಲಿಸುವ ಸಂಸದೀಯ ಸಮಿತಿಯಲ್ಲಿರುವುದು ಒಬ್ಬರೇ ಮಹಿಳೆ

Follow Us
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಎರಡನೇ ಪತ್ನಿ ಬೇಕಾ ಎಂದು ನೇರವಾಗಿ ಕೇಳಿದ ಕವಿತಾ; ಚಂದನ್ ಉತ್ತರ ಏನು?
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಸರ್ಕಾರ ರಚನೆಗೆ ವಿಜಯ್​ ಕಸರತ್ತು: ತಮಿಳುನಾಡಿನಲ್ಲಿ ಏನೇನಾಗ್ತಿದೆ ನೋಡಿ!
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?
ಕೊಬ್ಬರಿ ಎಣ್ಣೆ ದೀಪ ಹಚ್ಚುವುದರಿಂದ ತುಂಬಾ ಒಳ್ಳೇದು! ಯಾಕೆ ಗೊತ್ತಾ?