AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲವೆಂದ ಪಂಜಾಬ್​ ಹೊಸ ಸಿಎಂ ಭಗವಂತ್ ಮಾನ್​; ಮತ್ತೆಲ್ಲಿ?

ಸರ್ಕಾರಿ ಕಚೇರಿಗಳಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಅದರ ಬದಲಿಗೆ ಭಗತ್​ ಸಿಂಗ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಫೋಟೋ ಇರಬೇಕು ಎಂದೂ  ಭಗವಂತ್ ಮಾನ್ ತಿಳಿಸಿದ್ದಾರೆ.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲವೆಂದ ಪಂಜಾಬ್​ ಹೊಸ ಸಿಎಂ ಭಗವಂತ್ ಮಾನ್​; ಮತ್ತೆಲ್ಲಿ?
ಭಗವಂತ್ ಮಾನ್​
TV9 Web
| Edited By: |

Updated on: Mar 10, 2022 | 5:47 PM

Share

ಪಂಜಾಬ್​ನಲ್ಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್ ಆದ್ಮಿ ಪಕ್ಷ (Aam Aadmi Party) ಸರ್ಕಾರ ರಚನೆ ಮಾಡಲಿದ್ದು, ಭಗವಂತ್ ಮಾನ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಆಯಾ ರಾಜ್ಯಗಳ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಸಂಪ್ರದಾಯ. ಆದರೆ ಭಗವಂತ್ ಮಾನ್ ತಾವು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬದಲಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್​ ಅವರ ಪೂರ್ವಜರು ವಾಸವಾಗಿದ್ದ ಗ್ರಾಮ, ನವಾನ್‌ಶಹರ್ ಜಿಲ್ಲೆಯ ಖಟ್ಕರ್‌ಕಾಲನ್‌ನಲ್ಲಿ ಈ ಸಮಾರಂಭ ನಡೆಸುವುದಾಗಿ ತಿಳಿಸಿದ್ದಾರೆ.

ಧುರಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 58 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ಬಳಿಕ ಮಾತನಾಡಿದ ಅವರು, ಈ ಸಲ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವುದಿಲ್ಲ. ಖಟ್ಕರ್​ಕಾಲನ್​​ನಲ್ಲಿ ಆಯೋಜಿಸಲಾಗುವುದು. ಹಾಗೇ, ಸರ್ಕಾರಿ ಕಚೇರಿಗಳಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಅದರ ಬದಲಿಗೆ ಭಗತ್​ ಸಿಂಗ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಫೋಟೋ ಇರಬೇಕು ಎಂದೂ  ತಿಳಿಸಿದ್ದಾರೆ.

ಹಾಗೇ, ಚುನಾವಣೆಯಲ್ಲಿ ಸೋತ ರಾಜಕೀಯ ಧುರೀಣರ ಹೆಸರುಗಳನ್ನು ಉಲ್ಲೇಖಿಸಿದ ಮಾನ್​, ಪ್ರಕಾಶ್​ ಸಿಂಗ್​ ಬಾದಲ್​, ಸುಖ್ಬೀರ್​ ಸಿಂಗ್ ಬಾದಲ್​ ಸೋತರು, ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಪಟಿಯಾಲಾದಲ್ಲಿ ಸೋತರು. ಸಿಧು, ಮಜಿಥಾ, ಚರಣ್​ಜಿತ್​ ಸಿಂಗ್ ಛನ್ನಿಯೂ ಸೋತಿದ್ದಾರೆ. ಇವರಲ್ಲೆರನ್ನೂ ಹಿಂದಿಕ್ಕಿ ನಮ್ಮ ಪಕ್ಷ ಗೆದ್ದಿದೆ ಎಂದು ಹೇಳಿದರು.  ಇನ್ನು ತಾವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲು ಮಾಡುವ ಕೆಲಸವೆಂದರೆ, ಶಾಲೆ, ಆರೋಗ್ಯ ಕ್ಷೇತ್ರ, ಉದ್ಯಮ, ಕೃಷಿ ಕ್ಷೇತ್ರಗಳನ್ನು ಲಾಭದಾಯಕಗೊಳಿಸುವುದು ಮತ್ತು ಮಹಿಳೆಯರ ಸುರಕ್ಷತೆ, ಕ್ರೀಡಾಕ್ಷೇತ್ರದ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸುವುದು ಎಂದು ತಿಳಿಸಿದರು.

ಎಲ್ಲರೂ ಒಟ್ಟಾಗಿ ಪಂಜಾಬ್​ಗಾಗಿ ಕೆಲಸ ಮಾಡೋಣ. ಒಂದೇ ತಿಂಗಳಲ್ಲಿ ನಿಮಗೆಲ್ಲ ಪಂಜಾಬ್​ನಲ್ಲಿ ಆದ ಬದಲಾವಣೆ ಗಮನಕ್ಕೆ ಬರಲು ಶುರುವಾಗುತ್ತದೆ. ಇದೀಗ ಆಪ್​ ಪಕ್ಷಕ್ಕೆ ಯಾರೆಲ್ಲ ಮತ ಹಾಕಿಲ್ಲವೋ ಅವರೇನೂ ಚಿಂತಿಸುವುದು ಬೇಡ. ನಮ್ಮ ಸರ್ಕಾರ ಎಲ್ಲ ವರ್ಗದ ಜನರಿಗೂ ಒಂದೇ ತೆರನಾದ ಅವಕಾಶ, ಅನುಕೂಲ ನೀಡುತ್ತದೆ. ತಾರತಮ್ಯ ಮಾಡುವುದಿಲ್ಲ ಎಂದು  ಭಗವಂತ್ ಮಾನ್ ಭರವಸೆ ಕೊಟ್ಟಿದ್ದಾರೆ.  ಅಂದಹಾಗೇ, ಪಂಜಾಬ್​ನ 117 ಕ್ಷೇತ್ರಗಳಲ್ಲಿ ಆಪ್​ ಬರೋಬ್ಬರಿ 91 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.  ಈ ಮೂಲಕ ಸ್ಪಷ್ಟ ಬಹುಮತದ ಸರ್ಕಾರ ರಚನೆ ಮಾಡುತ್ತಿದೆ. ಗೆಲುವು ಸ್ಪಷ್ಟವಾಗುತ್ತಿದ್ದಂತೆ ಅಲ್ಲಿನ ಜನರಿಗೆ ಅರವಿಂದ್ ಕೇಜ್ರಿವಾಲ್ ಅಭಿನಂದನೆ, ವಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಆಪ್​ ಈಗ ರಾಷ್ಟ್ರೀಯ ಪಕ್ಷ, ಅರವಿಂದ್​ ಕೇಜ್ರಿವಾಲ್​ ಪ್ರಧಾನಿಯಾಗಲಿದ್ದಾರೆ: ರಾಘವ್ ಚಡ್ಡಾ

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!