AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲವೆಂದ ಪಂಜಾಬ್​ ಹೊಸ ಸಿಎಂ ಭಗವಂತ್ ಮಾನ್​; ಮತ್ತೆಲ್ಲಿ?

ಸರ್ಕಾರಿ ಕಚೇರಿಗಳಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಅದರ ಬದಲಿಗೆ ಭಗತ್​ ಸಿಂಗ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಫೋಟೋ ಇರಬೇಕು ಎಂದೂ  ಭಗವಂತ್ ಮಾನ್ ತಿಳಿಸಿದ್ದಾರೆ.

ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದಿಲ್ಲವೆಂದ ಪಂಜಾಬ್​ ಹೊಸ ಸಿಎಂ ಭಗವಂತ್ ಮಾನ್​; ಮತ್ತೆಲ್ಲಿ?
ಭಗವಂತ್ ಮಾನ್​
TV9 Web
| Updated By: Lakshmi Hegde|

Updated on: Mar 10, 2022 | 5:47 PM

Share

ಪಂಜಾಬ್​ನಲ್ಲಿ ಅರವಿಂದ್ ಕೇಜ್ರಿವಾಲ್​ ಅವರ ಆಮ್ ಆದ್ಮಿ ಪಕ್ಷ (Aam Aadmi Party) ಸರ್ಕಾರ ರಚನೆ ಮಾಡಲಿದ್ದು, ಭಗವಂತ್ ಮಾನ್​ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಾಮಾನ್ಯವಾಗಿ ಮುಖ್ಯಮಂತ್ರಿಗಳು ಆಯಾ ರಾಜ್ಯಗಳ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಮಾಡುವುದು ಸಂಪ್ರದಾಯ. ಆದರೆ ಭಗವಂತ್ ಮಾನ್ ತಾವು ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕರಿಸುವುದಿಲ್ಲ ಎಂದು ಘೋಷಿಸಿದ್ದಾರೆ. ಬದಲಿಗೆ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್​ ಅವರ ಪೂರ್ವಜರು ವಾಸವಾಗಿದ್ದ ಗ್ರಾಮ, ನವಾನ್‌ಶಹರ್ ಜಿಲ್ಲೆಯ ಖಟ್ಕರ್‌ಕಾಲನ್‌ನಲ್ಲಿ ಈ ಸಮಾರಂಭ ನಡೆಸುವುದಾಗಿ ತಿಳಿಸಿದ್ದಾರೆ.

ಧುರಿ ವಿಧಾನಸಭಾ ಕ್ಷೇತ್ರದಿಂದ ಸುಮಾರು 58 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆದ್ದ ಬಳಿಕ ಮಾತನಾಡಿದ ಅವರು, ಈ ಸಲ ರಾಜಭವನದಲ್ಲಿ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಯುವುದಿಲ್ಲ. ಖಟ್ಕರ್​ಕಾಲನ್​​ನಲ್ಲಿ ಆಯೋಜಿಸಲಾಗುವುದು. ಹಾಗೇ, ಸರ್ಕಾರಿ ಕಚೇರಿಗಳಲ್ಲಿ ಮುಖ್ಯಮಂತ್ರಿಗಳ ಫೋಟೋ ಇರುವುದಿಲ್ಲ. ಅದರ ಬದಲಿಗೆ ಭಗತ್​ ಸಿಂಗ್ ಮತ್ತು ಡಾ. ಬಿ.ಆರ್.ಅಂಬೇಡ್ಕರ್ ಫೋಟೋ ಇರಬೇಕು ಎಂದೂ  ತಿಳಿಸಿದ್ದಾರೆ.

ಹಾಗೇ, ಚುನಾವಣೆಯಲ್ಲಿ ಸೋತ ರಾಜಕೀಯ ಧುರೀಣರ ಹೆಸರುಗಳನ್ನು ಉಲ್ಲೇಖಿಸಿದ ಮಾನ್​, ಪ್ರಕಾಶ್​ ಸಿಂಗ್​ ಬಾದಲ್​, ಸುಖ್ಬೀರ್​ ಸಿಂಗ್ ಬಾದಲ್​ ಸೋತರು, ಕ್ಯಾಪ್ಟನ್​ ಅಮರಿಂದರ್ ಸಿಂಗ್​ ಪಟಿಯಾಲಾದಲ್ಲಿ ಸೋತರು. ಸಿಧು, ಮಜಿಥಾ, ಚರಣ್​ಜಿತ್​ ಸಿಂಗ್ ಛನ್ನಿಯೂ ಸೋತಿದ್ದಾರೆ. ಇವರಲ್ಲೆರನ್ನೂ ಹಿಂದಿಕ್ಕಿ ನಮ್ಮ ಪಕ್ಷ ಗೆದ್ದಿದೆ ಎಂದು ಹೇಳಿದರು.  ಇನ್ನು ತಾವು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ಮೊದಲು ಮಾಡುವ ಕೆಲಸವೆಂದರೆ, ಶಾಲೆ, ಆರೋಗ್ಯ ಕ್ಷೇತ್ರ, ಉದ್ಯಮ, ಕೃಷಿ ಕ್ಷೇತ್ರಗಳನ್ನು ಲಾಭದಾಯಕಗೊಳಿಸುವುದು ಮತ್ತು ಮಹಿಳೆಯರ ಸುರಕ್ಷತೆ, ಕ್ರೀಡಾಕ್ಷೇತ್ರದ ಮೂಲಸೌಕರ್ಯವನ್ನು ಅಭಿವೃದ್ಧಿಗೊಳಿಸುವುದು ಎಂದು ತಿಳಿಸಿದರು.

ಎಲ್ಲರೂ ಒಟ್ಟಾಗಿ ಪಂಜಾಬ್​ಗಾಗಿ ಕೆಲಸ ಮಾಡೋಣ. ಒಂದೇ ತಿಂಗಳಲ್ಲಿ ನಿಮಗೆಲ್ಲ ಪಂಜಾಬ್​ನಲ್ಲಿ ಆದ ಬದಲಾವಣೆ ಗಮನಕ್ಕೆ ಬರಲು ಶುರುವಾಗುತ್ತದೆ. ಇದೀಗ ಆಪ್​ ಪಕ್ಷಕ್ಕೆ ಯಾರೆಲ್ಲ ಮತ ಹಾಕಿಲ್ಲವೋ ಅವರೇನೂ ಚಿಂತಿಸುವುದು ಬೇಡ. ನಮ್ಮ ಸರ್ಕಾರ ಎಲ್ಲ ವರ್ಗದ ಜನರಿಗೂ ಒಂದೇ ತೆರನಾದ ಅವಕಾಶ, ಅನುಕೂಲ ನೀಡುತ್ತದೆ. ತಾರತಮ್ಯ ಮಾಡುವುದಿಲ್ಲ ಎಂದು  ಭಗವಂತ್ ಮಾನ್ ಭರವಸೆ ಕೊಟ್ಟಿದ್ದಾರೆ.  ಅಂದಹಾಗೇ, ಪಂಜಾಬ್​ನ 117 ಕ್ಷೇತ್ರಗಳಲ್ಲಿ ಆಪ್​ ಬರೋಬ್ಬರಿ 91 ಕ್ಷೇತ್ರಗಳನ್ನು ಗೆದ್ದುಕೊಂಡಿದೆ.  ಈ ಮೂಲಕ ಸ್ಪಷ್ಟ ಬಹುಮತದ ಸರ್ಕಾರ ರಚನೆ ಮಾಡುತ್ತಿದೆ. ಗೆಲುವು ಸ್ಪಷ್ಟವಾಗುತ್ತಿದ್ದಂತೆ ಅಲ್ಲಿನ ಜನರಿಗೆ ಅರವಿಂದ್ ಕೇಜ್ರಿವಾಲ್ ಅಭಿನಂದನೆ, ವಂದನೆ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಆಪ್​ ಈಗ ರಾಷ್ಟ್ರೀಯ ಪಕ್ಷ, ಅರವಿಂದ್​ ಕೇಜ್ರಿವಾಲ್​ ಪ್ರಧಾನಿಯಾಗಲಿದ್ದಾರೆ: ರಾಘವ್ ಚಡ್ಡಾ

ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಜಾಲಹಳ್ಳಿಯಲ್ಲಿ ಫ್ಲೈಓವರ್ ಪಿಲ್ಲರ್ ಎಡೆಯಲ್ಲಿ ಆರಾಮವಾಗಿ ಮಲಗಿದ ವ್ಯಕ್ತಿ!
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್