AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಪರಿಶೀಲಿಸಲಾಗುವುದು: ಸರ್ಕಾರಿ ಮೂಲಗಳು

"ಒಂದು ದಿನ, ಅವರು (ಕೇಜ್ರಿವಾಲ್) ಅವರು ಪಂಜಾಬ್ ಮುಖ್ಯಮಂತ್ರಿ ಆಗುತ್ತಾರೆ ಅಥವಾ ಸ್ವತಂತ್ರ ರಾಷ್ಟ್ರದ (ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತಾರೆ ಎಂದು ನನಗೆ ಹೇಳಿದರು" ಎಂದು ಕುಮಾರ್ ವಿಶ್ವಾಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.

ಎಎಪಿ ಮಾಜಿ ನಾಯಕ ಕುಮಾರ್ ವಿಶ್ವಾಸ್ ಅವರ ಭದ್ರತೆಯನ್ನು ಪರಿಶೀಲಿಸಲಾಗುವುದು: ಸರ್ಕಾರಿ ಮೂಲಗಳು
ಕುಮಾರ್ ವಿಶ್ವಾಸ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Feb 18, 2022 | 2:53 PM

Share

ದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Arvind Kejriwal) ವಿರುದ್ಧ ಕಟುವಾದ ಆರೋಪಗಳನ್ನು ಮಾಡುವ ಮೂಲಕ ವಿವಾದಕ್ಕೆ ಕಾರಣವಾದ ಕವಿ ಮತ್ತು ಮಾಜಿ ಆಮ್ ಆದ್ಮಿ ಪಕ್ಷದ (AAP) ನಾಯಕ ಕುಮಾರ್ ವಿಶ್ವಾಸ್ (Kumar Vishwas) ಅವರ ಭದ್ರತೆಯನ್ನು ಪರಿಶೀಲಿಸಲಾಗುತ್ತಿದೆ ಎಂದು ಈ ಬೆಳವಣಿಗೆ ಬಗ್ಗೆ ಗೊತ್ತಿರುವ ಜನರು ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ವರದಿ ಮಾಡಿದೆ. ಎಎಪಿ ರಾಷ್ಟ್ರೀಯ ಸಂಚಾಲಕ ಕೇಜ್ರಿವಾಲ್ ಪಂಜಾಬ್‌ನ ಮುಖ್ಯಮಂತ್ರಿ ಸ್ಥಾನ ಪಡೆಯುವುದಕ್ಕಾಗಿ ಶೋಷಿತ ಮತ್ತು ಪ್ರತ್ಯೇಕತಾವಾದಿ ಗುಂಪುಗಳ ಬೆಂಬಲವನ್ನು ಪಡೆಯಲು ಸಿದ್ಧ ಎಂದು ಕುಮಾರ್ ವಿಶ್ವಾಸ್ ಹೇಳಿಕೊಂಡಿದ್ದರು.  ಎಎಪಿಯ ಸ್ಥಾಪಕ ಸದಸ್ಯರಾಗಿದ್ದ ವಿಶ್ವಾಸ್, ಕೇಜ್ರಿವಾಲ್ ಅವರು “ಸ್ವತಂತ್ರ ರಾಷ್ಟ್ರ”ದ ಮೊದಲ ಪ್ರಧಾನಿಯಾಗಲು ಅವರ “ಸೂತ್ರ” ಸಿದ್ಧವಾಗಿದೆ ಎಂದು ಹೇಳಿದ್ದಾರೆ. “ಒಂದು ದಿನ, ಅವರು (ಕೇಜ್ರಿವಾಲ್) ಅವರು ಪಂಜಾಬ್ ಮುಖ್ಯಮಂತ್ರಿ ಆಗುತ್ತಾರೆ ಅಥವಾ ಸ್ವತಂತ್ರ ರಾಷ್ಟ್ರದ (ಖಾಲಿಸ್ತಾನ್) ಮೊದಲ ಪ್ರಧಾನಿಯಾಗುತ್ತಾರೆ ಎಂದು ನನಗೆ ಹೇಳಿದರು” ಎಂದು ಕುಮಾರ್ ವಿಶ್ವಾಸ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ.  ಭಾರತದ ಸಮಗ್ರತೆ ಮತ್ತು ಸಾರ್ವಭೌಮತೆಗೆ ನೇರವಾಗಿ ಧಕ್ಕೆ ತರುವ ಪಂಜಾಬ್‌ನಿಂದ ಬೇರ್ಪಡುವ ಮೂಲಕ ಪ್ರತ್ಯೇಕ ರಾಷ್ಟ್ರದ ಬೇಡಿಕೆಯನ್ನು ಸಿಖ್ ಪ್ರತ್ಯೇಕತಾವಾದಿ ಘಟಕಗಳು ಬಹಳ ಹಿಂದಿನಿಂದಲೂ ಮಾಡುತ್ತಿವೆ. ವಿಶ್ವಾಸ್ ಅವರ ಆರೋಪವು ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಎಎಪಿಯ ಭವಿಷ್ಯವನ್ನು ಹಾಳುಮಾಡುವ ಸಾಮರ್ಥ್ಯವನ್ನು ಹೊಂದಿದೆ. ಇದು ಕೇಜ್ರಿವಾಲ್ ಅವರ ಪ್ರತಿಷ್ಠೆ ಮೇಲೆ ದೀರ್ಘಕಾಲೀನ ಪರಿಣಾಮ ಬೀರಬಹುದು. 

ಆದಾಗ್ಯೂ ಆಮ್ ಆದ್ಮಿ ಪಕ್ಷವು ಆರೋಪಗಳನ್ನು ಕಟುವಾಗಿ ನಿರಾಕರಿಸಿದೆ ಮತ್ತು ವಿಶ್ವಾಸ್ ಅವರ ಆರೋಪಗಳನ್ನು ಸಾಬೀತುಪಡಿಸಲು ಪುರಾವೆಯನ್ನು ಕೋರಿದೆ.

ವಿಶ್ವಾಸ್ ಅವರ ಆರೋಪದ ಮೇಲೆ ಕಾಂಗ್ರೆಸ್ ಮತ್ತು ಬಿಜೆಪಿ ಎಎಪಿಯನ್ನು ಮೂಲೆಗುಂಪು ಮಾಡಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಅವರು ವಿಶ್ವಾಸ್ ಅವರ ವಿಡಿಯೊ ಸಂದರ್ಶನದಲ್ಲಿ ಹೇಳಿದ ಆರೋಪಗಳ ಬಗ್ಗೆ “ನಿಷ್ಪಕ್ಷಪಾತ ತನಿಖೆಗೆ” ಆದೇಶಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರಿಗೆ ಮನವಿ ಮಾಡಿದರು.  ಗುರುವಾರ, ಚುನಾವಣಾ ಅಧಿಕಾರಿಯು ಸಂದರ್ಶನವನ್ನು ಪ್ರಕಟಿಸದಂತೆ ಮಾಧ್ಯಮ ಸಂಸ್ಥೆಗಳು, ರಾಜಕೀಯ ಪಕ್ಷಗಳು ಮತ್ತು ಅವರ ಪ್ರತಿನಿಧಿಗಳನ್ನು ನಿರ್ಬಂಧಿಸಿ ಪತ್ರ ಬರೆದಿದ್ದರು. ಅದನ್ನು “ದುರುದ್ದೇಶಪೂರಿತವಾಗಿ ತಯಾರಿಸಲಾಗಿದೆ” ಎಂದು ಹೇಳಿದ್ದ  ಮುಖ್ಯ ಚುನಾವಣಾ ಅಧಿಕಾರಿ ಕೂಡಲೇ ಆ ಪತ್ರವನ್ನು ಹಿಂಪಡೆದಿದ್ದಾರೆ.

ಇದನ್ನೂ ಓದಿ: ಚುನಾವಣೆ ಉದ್ದೇಶಕ್ಕಾಗಿ ಮಾತ್ರ ಅವರು ಮಾತನಾಡುತ್ತಾರಾ?: ಮನಮೋಹನ್ ಸಿಂಗ್ ವಿರುದ್ಧ ಗುಡುಗಿದ ನಿರ್ಮಲಾ ಸೀತಾರಾಮನ್

Published On - 2:20 pm, Fri, 18 February 22

Follow Us
TV9 Web
TV9 Web

TV9 Kannada

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ