AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Punjab Assembly Elections: ಅಪ್ಪ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ; ನವಜೋತ್ ಸಿಂಗ್ ಸಿಧು ಮಗಳು ಶಪಥ

ಪಂಜಾಬ್​ನ ಜನರು ಹಣಕ್ಕಾಗಿ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಅವರು ಸತ್ಯಕ್ಕೆ ಮತ ಹಾಕುತ್ತಾರೆ. ನಮ್ಮ ರಾಜ್ಯದ ಜನರು ಸತ್ಯಕ್ಕೆ ಮಾತ್ರ ಮತ ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ರಾಬಿಯಾ ಸಿಧು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Punjab Assembly Elections: ಅಪ್ಪ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ; ನವಜೋತ್ ಸಿಂಗ್ ಸಿಧು ಮಗಳು ಶಪಥ
ನವಜೋತ್ ಸಿಂಗ್ ಸಿಧು ಮಗಳು ರಾಬಿಯಾ
TV9 Web
| Edited By: |

Updated on:Feb 11, 2022 | 6:00 PM

Share

ಅಮೃತಸರ: ಫೆಬ್ರವರಿ 20ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಗೂ (Punjab Assemly Polls 2022) ಮುನ್ನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಂಗ್ ಸಿಧು (Navjot Singh Sidhu) ಅವರ ಪುತ್ರಿ ರಾಬಿಯಾ ಸಿಧು ಅಮೃತಸರ (ಪೂರ್ವ) ಕ್ಷೇತ್ರದಲ್ಲಿ ತಮ್ಮ ತಂದೆಯ ಪರ ಪ್ರಚಾರ ನಡೆಸಿದ್ದಾರೆ. ಪ್ರಚಾರದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರಾಬಿಯಾ, ಕಾಂಗ್ರೆಸ್ ಸಿಎಂ ಅಭ್ಯರ್ಥಿ ಮತ್ತು ಹಾಲಿ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ (Charanjit Singh Channi) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹಾಗೇ, ನನ್ನ ತಂದೆ ಗೆಲ್ಲುವವರೆಗೂ ನಾನು ಮದುವೆಯಾಗುವುದಿಲ್ಲ ಎಂದು ನವಜೋತ್ ಸಿಂಗ್ ಸಿಧು ಮಗಳು ರಾಬಿಯಾ ಪ್ರತಿಜ್ಞೆ ಮಾಡಿದ್ದಾರೆ.

ತಾವು ಬಡವ ಎಂದು ಚರಣ್​​ಜಿತ್ ಸಿಂಗ್ ಚನ್ನಿ ಘೋಷಿಸಿಕೊಂಡಿದ್ದಾರೆ. ಆದರೆ, ಅದು ನಿಜವೇ? ಅವರ ಖಾತೆಗಳನ್ನು ಪರಿಶೀಲನೆ ಮಾಡಿದರೆ ಸತ್ಯಾಂಶ ತಿಳಿಯುತ್ತದೆ. ಚನ್ನಿ ಅವರ ಬ್ಯಾಂಕ್ ಖಾತೆಗಳನ್ನು ಪರಿಶೀಲಿಸಿದರೆ 133 ಕೋಟಿ ರೂ.ಗೂ ಹೆಚ್ಚು ಹಣ ಪತ್ತೆಯಾಗುತ್ತದೆ ಎಂದು ರಾಬಿಯಾ ಸಿಧು ಆರೋಪಿಸಿದ್ದಾರೆ.

ಪಂಜಾಬ್ ಚುನಾವಣೆ 2022ರ ಕಾಂಗ್ರೆಸ್‌ನ ಸಿಎಂ ಅಭ್ಯರ್ಥಿಯಾಗಿ ತನ್ನ ತಂದೆಯ ಹೆಸರನ್ನು ಘೋಷಿಸದ ಬಗ್ಗೆ ರಾಬಿಯಾ ಅಸಮಾಧಾನಗೊಂಡಿದ್ದಾರೆ. ಬಹುಶಃ ಹೈಕಮಾಂಡ್ ಮೇಲೆ ಸಾಕಷ್ಟು ಒತ್ತಡವಿತ್ತು. ಆದರೆ ನೀವು ಪ್ರಾಮಾಣಿಕ ವ್ಯಕ್ತಿಯನ್ನು ದೀರ್ಘಕಾಲ ತಡೆಹಿಡಿಯಲು ಸಾಧ್ಯವಿಲ್ಲ. ಯಾರಿಗೆ ಪ್ರಾಮಾಣಿಕತೆ ಇರುವುದಿಲ್ಲವೋ ಅವರು ಖಂಡಿತ ಒಂದು ದಿನ ಕೆಳಗೆ ಬೀಳುತ್ತಾರೆ ಎಂದು ರಾಬಿಯಾ ಸಿಧು ಭವಿಷ್ಯ ನುಡಿದಿದ್ದಾರೆ.

ಪಂಜಾಬ್‌ನಲ್ಲಿರುವ ಇಂದಿನ ಪರಿಸ್ಥಿತಿಯಿಂದ ನವಜೋತ್ ಸಿಂಗ್ ಸಿಧುಗೆ ನೋವಾಗಿದೆ. ನನ್ನ ತಂದೆ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ರಾಬಿಯಾ ಸಿಧು ಹೇಳಿದ್ದಾರೆ. ಪಂಜಾಬ್​ನ ಜನರು ಹಣಕ್ಕಾಗಿ ತಮ್ಮನ್ನು ಮಾರಿಕೊಳ್ಳುವುದಿಲ್ಲ, ಅವರು ಸತ್ಯಕ್ಕೆ ಮತ ಹಾಕುತ್ತಾರೆ. ನಮ್ಮ ರಾಜ್ಯದ ಜನರು ಸತ್ಯಕ್ಕೆ ಮಾತ್ರ ಮತ ಹಾಕುತ್ತಾರೆ ಎಂಬ ವಿಶ್ವಾಸ ನನಗಿದೆ ಎಂದು ರಾಬಿಯಾ ಸಿಧು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ನನ್ನ ತಂದೆ ನವಜೋತ್ ಸಿಂಗ್ ಸಿಧು ಕಳೆದ 14 ವರ್ಷಗಳಿಂದ ಪಂಜಾಬ್‌ಗಾಗಿ ಕೆಲಸ ಮಾಡುತ್ತಿದ್ದಾರೆ. ಅವರು ಪಂಜಾಬ್ ರಾಜ್ಯಕ್ಕೆ ಹೊಸ ಮಾದರಿಯನ್ನು ರಚಿಸುತ್ತಿದ್ದಾರೆ. ಅವರನ್ನು ಎಲ್ಲರೂ ಗೌರವಿಸಬೇಕು. ನನ್ನ ತಂದೆಯನ್ನು ಯಾವ ಕಾಂಗ್ರೆಸ್ ನಾಯಕರ ಜೊತೆಯೂ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪಂಜಾಬ್ ಅತ್ಯಂತ ಕೆಟ್ಟ ಪರಿಸ್ಥಿತಿಯಲ್ಲಿದೆ. ಇಂತಹ ಪರಿಸ್ಥಿತಿಯಲ್ಲಿ ನನ್ನ ತಂದೆ ಮಾತ್ರ ಈ ರಾಜ್ಯವನ್ನು ಉಳಿಸಲು ಸಾಧ್ಯ. ನನ್ನ ತಂದೆಯ ರಾಜಕೀಯ ವಿರೋಧಿಗಳು ಮತ್ತು ಇತರರು ಅವರನ್ನು ಹಿಂದಕ್ಕೆ ತಳ್ಳುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ರಾಬಿಯಾ ತನ್ನ ತಂದೆ ನವಜೋತ್ ಸಿಂಗ್ ಸಿಧು ವಿರುದ್ಧ ಅಮೃತಸರದಿಂದ (ಪೂರ್ವ) ಸ್ಪರ್ಧಿಸುತ್ತಿರುವ ಎಸ್‌ಎಡಿ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ. ಮಜಿಥಿಯಾ ಅವರು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರ ಸೋದರ ಮಾವ. ಮಜಿಥಿಯಾ ಅಂಕಲ್ ರಾಜಕೀಯದ ಎಬಿಸಿಡಿ ಕಲಿಯಲು ನನ್ನ ತಂದೆಯ ಬಳಿಗೆ ಬಂದರು. ಒಂದು ಕಡೆ ಡ್ರಗ್ಸ್ ಮತ್ತು ಇನ್ನೊಂದು ಕಡೆ ಅಭಿವೃದ್ಧಿ, ಉದ್ಯೋಗ ಮತ್ತು ಶಿಕ್ಷಣದ ಆಯ್ಕೆಯಿದೆ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಬೇಕು ಎಂಬುದು ನಾಯಕನಿಗೆ ತಿಳಿದಿರಬೇಕು ಎಂದು ರಾಬಿಯಾ ಸಿಧು ಟೀಕಿಸಿದ್ದಾರೆ.

ಇದನ್ನೂ ಓದಿ: Punjab Election ಪಂಜಾಬ್​​ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಸಿದ್ಧತೆ, ರಾಹುಲ್ ನಿರ್ಧಾರಕ್ಕೆ ಬದ್ಧ ಎಂದ ಸಿಧು

ಪಂಜಾಬ್: ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಚರಣ್​​ಜಿತ್ ಸಿಂಗ್ ಚನ್ನಿ ಎಂದು ಘೋಷಿಸಿದ ರಾಹುಲ್ ಗಾಂಧಿ

Published On - 5:59 pm, Fri, 11 February 22

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್