AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುರು ರವಿದಾಸ್ ಜನ್ಮದಿನ ಹಿನ್ನೆಲೆ; ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕ ಮುಂದೂಡುವಂತೆ ಸಿಎಂ ಚನ್ನಿ ಮನವಿ

ರಾಜ್ಯದಿಂದ ಎಸ್​ಸಿ ಸಮಾಜದ ಅನೇಕರು ಗುರು ರವಿದಾಸ್ ಜನ್ಮದಿನ ಹಿನ್ನೆಲೆ ವಾರಾಣಸಿಗೆ ತೆರಳುತ್ತಾರೆ. ಹಾಗಾಗಿ ಫೆಬ್ರವರಿ 14ರ ಚುನಾವಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ. 6 ದಿನಗಳ ಕಾಲ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ.

ಗುರು ರವಿದಾಸ್ ಜನ್ಮದಿನ ಹಿನ್ನೆಲೆ; ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕ ಮುಂದೂಡುವಂತೆ ಸಿಎಂ ಚನ್ನಿ ಮನವಿ
ಚರಣ್​​ಜಿತ್ ಸಿಂಗ್ ಚನ್ನಿ
Follow us
TV9 Web
| Updated By: ganapathi bhat

Updated on: Jan 16, 2022 | 11:01 AM

ದೆಹಲಿ: ಪಂಜಾಬ್ ವಿಧಾನಸಭಾ ಚುನಾವಣೆ ದಿನಾಂಕ ಮುಂದೂಡುವಂತೆ ಪಂಜಾಬ್ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಕೇಂದ್ರ ಚುನಾವಣಾ ಆಯೋಗದ (Central Election Commission) ಸಿಇಸಿ ಸುಶೀಲ್ ಚಂದ್ರ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ (Assembly Elections 2021) ದಿನಾಂಕ ಪ್ರಕಟ ಮಾಡಿದ್ದರು. ಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ, ಪಂಜಾಬ್, ಗೋವಾ ರಾಜ್ಯಗಳ ವಿಧಾನಸಭಾ ಚುನಾವಣಾ ದಿನಾಂಕ ಪ್ರಕಟ ಮಾಡಿದ್ದರು. ಅದರಂತೆ, ಫೆಬ್ರವರಿ 14ರಂದು ಪಂಜಾಬ್‌ನ 117 ಕ್ಷೇತ್ರಗಳಿಗೆ ಮತದಾನ ಎಂದು ಘೋಷಣೆ ಆಗಿತ್ತು.

ಆದರೆ, ಫೆಬ್ರವರಿ 16 ರಂದು ಗುರು ರವಿದಾಸ್​ ಜನ್ಮದಿನ ಹಿನ್ನೆಲೆ ಚುನಾವಣೆ ಮುಂದೂಡುವಂತೆ ಪಂಜಾಬ್​ ಮುಖ್ಯಮಂತ್ರಿ ಚರಣ್​ಜಿತ್ ಸಿಂಗ್ ಚನ್ನಿ ಮುಖ್ಯ ಚುನಾವಣಾ ಆಯುಕ್ತರಿಗೆ ಪತ್ರ ಬರೆದಿದ್ದಾರೆ. ಫೆಬ್ರವರಿ 14ರ ವಿಧಾನಸಭೆ ಚುನಾವಣೆಯನ್ನು 6 ದಿನ ಮುಂದೂಡಲು ಪತ್ರದ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರಿಗೆ ಜನವರಿ 13ರಂದು ಪತ್ರ ಬರೆದು ಚನ್ನಿ ಮನವಿ ಮಾಡಿದ್ದಾರೆ.

ರಾಜ್ಯದಿಂದ ಎಸ್​ಸಿ ಸಮಾಜದ ಅನೇಕರು ಗುರು ರವಿದಾಸ್ ಜನ್ಮದಿನ ಹಿನ್ನೆಲೆ ವಾರಣಾಸಿಗೆ ತೆರಳುತ್ತಾರೆ. ಹಾಗಾಗಿ ಫೆಬ್ರವರಿ 14ರ ಚುನಾವಣೆ ಮುಂದೂಡುವಂತೆ ಮನವಿ ಮಾಡಿದ್ದಾರೆ. 6 ದಿನಗಳ ಕಾಲ ಚುನಾವಣೆ ಮುಂದೂಡಲು ಮನವಿ ಮಾಡಿದ್ದಾರೆ.

ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚವನ್ನು ಮಿತಿಗೊಳಿಸಿದ ಆಯೋಗ

ಅಭ್ಯರ್ಥಿಗಳ ಕ್ರಿಮಿನಲ್ ಹಿನ್ನೆಲೆ ಬಗ್ಗೆ ಮಾಹಿತಿ ಪ್ರಕಟಿಸಬೇಕು. ಆಯಾ ರಾಜ್ಯದ ಪ್ರಮುಖ ಪತ್ರಿಕೆಗಳಲ್ಲಿ ಜಾಹೀರಾತು ಪ್ರಕಟಿಸಬೇಕು. KNOW YOUR CANDIDATE ಆ್ಯಪ್‌ನಲ್ಲಿ ಮಾಹಿತಿ ನೀಡಬೇಕು. ಪಕ್ಷದ ವೆಬ್​ಸೈಟ್​ನ ಮುಖಪುಟದಲ್ಲಿ ಮಾಹಿತಿ ನೀಡಬೇಕು. ಗೋವಾ, ಮಣಿಪುರದಲ್ಲಿ ಚುನಾವಣಾ ವೆಚ್ಚ 28 ಲಕ್ಷ ರೂ. ಆಗಿರಲಿದೆ. ಉತ್ತರಾಖಂಡ್, ಉತ್ತರ ಪ್ರದೇಶ, ಪಂಜಾಬ್​ನಲ್ಲಿ 40 ಲಕ್ಷ ಆಗಿರಲಿದೆ ಎಂದು ಅಭ್ಯರ್ಥಿಗಳಿಗೆ ಚುನಾವಣಾ ವೆಚ್ಚವನ್ನು ಆಯೋಗ ಮಿತಿಗೊಳಿಸಿತ್ತು.

ರಾಜಕೀಯ ಪಕ್ಷಗಳು ವರ್ಚುವಲ್ ರಾಲಿ ಮಾಡಲು ಆದ್ಯತೆ; ಕೊರೊನಾ ಹಿನ್ನೆಲೆ ಹಲವು ನಿರ್ಬಂಧ

ಮತದಾನ ಅವಧಿ 1 ಗಂಟೆ ವಿಸ್ತರಿಸಲಾಗುವುದು. ರಾಜಕೀಯ ಪಕ್ಷಗಳು ವರ್ಚುವಲ್ ರಾಲಿ ಮಾಡಲು ಆದ್ಯತೆ ನೀಡಲಾಗುವುದು ಎಂದು ಹೇಳಲಾಗಿತ್ತು. ಪಾದಯಾತ್ರೆ, ರೋಡ್‌ಶೋ, ರಾಲಿಗಳಿಗೆ, ಸಾರ್ವಜನಿಕ ಸಭೆಗಳಿಗೆ ಅವಕಾಶವಿಲ್ಲ. ಸಾರ್ವಜನಿಕ ಸಭೆಗಳಿಗೆ ಜನವರಿ 15ರವರೆಗೆ ನಿರ್ಬಂಧ ಇರಲಿದೆ. ಗೆಲುವಿನ ಬಳಿಕ ಸಾರ್ವಜನಿಕ ಸಂಭ್ರಮಾಚರಣೆಗೆ ಅವಕಾಶವಿಲ್ಲ. ಮನೆ ಮನೆ ಪ್ರಚಾರಕ್ಕೆ ಐವರು ಮಾತ್ರ ತೆರಳಲು ಅವಕಾಶ ಇರಲಿದೆ. ರಾತ್ರಿ 8 ಗಂಟೆ ಬಳಿಕ ಚುನಾವಣಾ ಪ್ರಚಾರಕ್ಕೆ ನಿರ್ಬಂಧ ಹಾಕಲಾಗಿದೆ. ದ್ವೇಷದ ಭಾಷಣ ಮಾಡುವಂತಿಲ್ಲ ಎಂದು ಸೂಚಿಸಲಾಗಿತ್ತು.

ಇದನ್ನೂ ಓದಿ: ಪಂಜಾಬ್​ನಲ್ಲಿ ಪ್ರಧಾನಿ ಭದ್ರತೆಯಲ್ಲಿ ಲೋಪ ವಿಚಾರ; ನರೇಂದ್ರ ಮೋದಿ ಕ್ಷಮೆ ಕೋರಿದ ಪಂಜಾಬ್ ಸಿಎಂ ಚನ್ನಿ

ಇದನ್ನೂ ಓದಿ: Congress Candidate List Punjab: ಪಂಜಾಬ್​ನಲ್ಲಿ ಕಾಂಗ್ರೆಸ್​ನಿಂದ ನವಜೋತ್ ಸಿಂಗ್ ಸಿಧು, ಸಿಎಂ ಚನ್ನಿ ಸೇರಿ 86 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ

Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily Devotional: ಯಾವ ದಿನ, ಯಾವ ದಾನ ಮಾಡಿದರೆ ಶ್ರೇಷ್ಠ ತಿಳಿಯಿರಿ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
Daily horoscope: ಈ ರಾಶಿಯವರ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಉತ್ತರ ಪ್ರದೇಶದಲ್ಲಿ 2 ತಲೆ, 3 ಕಣ್ಣುಗಳೊಂದಿಗೆ ಜನಿಸಿದ ಕರು; ಜನರಿಂದ ಪೂಜೆ
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಕಮಲ್ ಹಾಸನ್ ತಪ್ಪು ಒಪ್ಪಿಕೊಂಡು ಕ್ಷಮೆ ಕೇಳಲೇಬೇಕು: ವಾಟಾಳ್ ನಾಗರಾಜ್
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಪ್ರಿಯಾಂಕ್​ ಖರ್ಗೆಗೆ ಎಲ್ಲಾದರಲ್ಲೂ ರಾಜಕಿಯ ಮಾಡುವ ಚಟ: ಸಿಟಿ ರವಿ
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
ಫೈಲ್‌ ಎತ್ತಿ ಇಟ್ಟುಬಿಡ್ತಾರೆ, ಅಲೆದಾಡಿಸ್ತಾರೆ..ಇದಕ್ಕೆ ಹೊಸ ಅಸ್ತ್ರ!
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
‘ಉತ್ತರಕಾಂಡ’ ಸಿನಿಮಾ ಶೂಟಿಂಗ್ ನಿಂತಿದ್ದು ಯಾಕೆ? ಕಾರಣ ನೀಡಿದ ಚಿತ್ರತಂಡ
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇರಾನ್​ ನಿಂದ ಇದೇ ಮೊದಲ ಬಾರಿಗೆ ಸೆಜ್ಜಿಲ್ ಮಿಸೈಲ್ ಬಳಕೆ, ಇಸ್ರೇಲ್ ತತ್ತರ!
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಇಸ್ರೇಲ್​​ ನಲ್ಲಿ ಸಿಲುಕಿದ್ದ 18 ಕನ್ನಡಿಗರು ತಾಯ್ನಾಡಿಗೆ ವಾಪಸ್
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ
ಜಯಂತಿ ಬಸುರಿ ಮತ್ತು ಸೀಮಂತದ ದಿನಾಂಕ ಫಿಕ್ಸ್ ಆಗಿತ್ತು: ನೆರೆಮನೆ ಮಹಿಳೆ